Month: September 2020
77 posts
ವರ್ತಮಾನ, ಇತಿಹಾಸ ಯಡಿಯೂರಪ್ಪರನ್ನು ಕ್ಷಮಿಸಲಾರದು: ಸಿದ್ದು
ರೈತ ವಿರೋಧಿ @BSYBJP ಅವರೇ, ಚುನಾವಣಾ ಪ್ರಣಾಳಿಕೆಯಲ್ಲಿ ಹೇಳದೆ ಇರುವ ಭೂ ಸುಧಾರಣೆ ಮತ್ತು ಎಪಿಎಂಸಿ ಕಾಯ್ದೆ ತಿದ್ದುಪಡಿ ಜಾರಿಗೆ ನಿಮಗೆ ಯಾವ ನೈತಿಕತೆ ಇದೆ? ನಿಮಗೆ ತಾಕತ್ ಇದ್ದರೆ ಮೊದಲು ವಿಧಾನಸಭೆಯನ್ನು ವಿಸರ್ಜಿಸಿ, ಇದೇ ವಿಷಯವನ್ನು ಮುಂದಿಟ್ಟು ಚುನಾವಣೆ ಎದುರಿಸಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಸವಾಲೆಸೆದಿದ್ದಾರೆ.
ರೈತರ ಕಷ್ಟ ಕಣ್ತೆರೆದು ನೋಡ್ರಿ ಎಮ್.ಎಲ್.ಎ ಹೇಳಿದಂಗ ಕೇಳಬ್ಯಾಡ್ರಿ: ರೈತರಿಂದ ಲಕ್ಷ್ಮೇಶ್ವರ ತಹಶೀಲ್ದಾರ್ ತರಾಟೆಗೆ
ರಾಜ್ಯದಲ್ಲಿ ಸರ್ಕಾರ ಭೂಸುಧಾರಣೆ ಕಾಯ್ದೆ ಮೂಲಕ ರೈತರಿಗೆ ಮಾರಕವಾದ ಕಾಯ್ದೆ ಜಾರಿಗೆ ತಂದಿದೆ. ಜೊತೆಗೆ ಸ್ಥಳೀಯವಾಗಿಯೂ ರೈತರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಇದಕ್ಕೆ ನೀವು ಸರಿಯಾಗಿ ಸ್ಪಂದಿಸುತ್ತಿಲ್ಲ. ಶಾಸಕರು ಹೇಳಿದಂತೆ ಮಾತ್ರ ಕೇಳಬೇಡಿ ರೈತರ ಸಂಕಷ್ಟಗಳನ್ನು ಕಣ್ತೆರೆದು ನೋಡಿ ಎಂದು ತಹಶೀಲ್ದಾರರನ್ನು ರೈತರು ತರಾಟೆಗೆ ತೆಗೆದುಕೊಂಡ ಘಟನೆ ಲಕ್ಷ್ಮೇಶ್ವರದಲ್ಲಿ ನಡೆಯಿತು.
ಕೃಷಿಗೆ ಉತ್ತೇಜನ ನೀಡಲು ಭೂಕಾಯಿದೆಗೆ ತಿದ್ದುಪಡಿಯಾಗಿದೆ : ಸಚಿವ ಬಿ.ಸಿ.ಪಾಟೀಲ್
ಕಾಂಗ್ರೆಸ್ ಈಗ ಸಂಪೂರ್ಣ ಅಸ್ತಿತ್ವ ಕಳೆದುಕೊಳ್ಳುತ್ತಿದ್ದು, ತನ್ನ ಅಸ್ತಿತ್ವವನ್ನು ಉಳಿಸಿಕೊಳ್ಳಲು ಹೋರಾಟ ಮಾಡುತ್ತಿದೆ ಎಂದು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಹೇಳಿದ್ದಾರೆ. ಹಿರೆಕೆರೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕಾಂಗ್ರೆಸ್ ಹೇಳುವುದೊಂದು ಮಾಡುವುದು ಇನ್ನೊಂದು. 2019 ರಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಎಪಿಎಂಸಿ ಕಾಯಿದೆ ತಿದ್ದುಪಡಿ ಬಗ್ಗೆ ಸ್ಪಷ್ಟವಾಗಿ ಹೇಳಿತ್ತು ಎಂದರು.
ಶಾಸಕ ಎಚ್.ಕೆ.ಪಾಟೀಲ್ ಅವರಿಗೆ ಕೊರೊನಾ ಪಾಸಿಟಿವ್!
ಕಾಂಗ್ರೆಸ್ ಮುಖಂಡ, ಶಾಸಕ ಎಚ್.ಕೆ.ಪಾಟೀಲ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಅವರು ಟ್ವೀಟ್ ಮಾಡಿದ್ದಾರೆ. ನನಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಲಕ್ಷಣ ರಹಿತ ಸೋಂಕಾಗಿದ್ದು, ಇದರಿಂದ ನಾನು ಹೋಂ ಕ್ವಾರಂಟೈನ್ ಆಗಿದ್ದೇನೆ. ನಾನೀಗ ಆರೋಗ್ಯವಾಗಿದ್ದೇನೆ. 10 ದಿನಗಳ ಕಾಲ ಕ್ವಾರೈಂಟೈನ್ ನಲ್ಲಿರಲಿದ್ದೇನೆ. ನನ್ನ ಪ್ರಾಥಮಿಕ ಸಂಪರ್ಕದಲ್ಲಿರುವವರು ಮುನ್ನೆಚ್ಚರಿಕೆ ಕ್ರಮವಾಗಿ ಕೋವಿಡ್ ಪರೀಕ್ಷೆಗೊಳಗಾಗಲು ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
ಸರ್ಕಾರದ ರೈತ ವಿರೋಧಿ ನೀತಿ ವಿರುದ್ಧ ಜಯಕರ್ನಾಟಕ ಸಂಘಟನೆ ಆಕ್ರೊಶ
ರೈತ ವಿರೋಧಿ ಮಸೂದೆ ಜಾರಿ ಖಂಡಿಸಿ ಕರ್ನಾಟಕ ಬಂದ್ ಗೆ ಗದಗ ನಗರದಲ್ಲಿ ಉತ್ತಮ ಬೆಂಬಲ ವ್ಯಕ್ತವಾಗಿದೆ. ನಗರದಲ್ಲಿ ಬೆಳ್ಳಂಬೆಳಿಗ್ಗೆಯೇ ಕನ್ನಡಪರ ಸಂಘಟನೆ ಕಾ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸಿದರು. ರೈತವಿರೋಧ ಕಾಯ್ದೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರದ ರೈತ ವಿರೋಧ ನಿಲುವಿನ ಬಗ್ಗೆ ಕಿಡಿಕಾರಿದರು.
ಅಸಾಧ್ಯ ಎಂಬುವುದು ಯಾವುದೂ ಇಲ್ಲ..! ಪಂಜಾಬ್ – ರಾಜಸ್ಥಾನ್ ಮ್ಯಾಚ್ ನೋಡಿದವರಿಗೆ ಹೀಗೆ ಅನಿಸಲೇಬೇಕು!
ಕ್ರಿಕೆಟ್ ಅಂಗಳದಲ್ಲಿ ಯಾವುದೂ ಅಸಾಧ್ಯವಲ್ಲ ಎಂಬುವುದಕ್ಕೆ ಸಾಕಷ್ಟು ಉದಾಹರಣೆಗಳು ಸಿಕ್ಕಿವೆ. ಈ ಹಿಂದೆ ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿ ಸಂದರ್ಭದಲ್ಲಿ 400ಕ್ಕೂ ಅಧಿಕ ರನ್ ಟಾರ್ಗೆಟ್ ನೀಡಿದ್ದ ಆಸ್ಟ್ರೇಲಿಯಾ ತಂಡವನ್ನು ಮಣಿಸಿ ದಕ್ಷಿಣ ಆಫ್ರಿಕಾ ಗೆದ್ದಂತೆ ಇಲ್ಲಿ ಪಂಜಾಬ್ ನ್ನು ಮಣಿಸಿ ರಾಜಸ್ಥಾನ್ ಗೆದ್ದು ಬೀಗಿದೆ.