ಮುಳಗುಂದ: ಅನೈತಿಕ ಸಂಬಂಧ ಹೊಂದಿದ್ದ ಪತ್ನಿ ಪ್ರೀಯಕರನ ಜತೆಗೂಡಿ ಪತಿನ್ನೆ ಕೊಲೆ ಮಾಡಿರುವ ಘಟನೆ ಸಮೀಪದ ಕಬಲಾಯತಕಟ್ಟಿ ತಾಂಡದಲ್ಲಿ ಗುರುವಾರ ನಡೆದಿದೆ.

ಲಕ್ಷ್ಮಣ ಪಾಂಡಪ್ಪ ಲಮಾಣಿ(39) ಕೊಲೆಯಾದ ವ್ಯಕ್ತಿ. ಈತನ ಪತ್ನಿ ಲಲಿತಾ ಲಮಾಣಿ(35) ಮತ್ತು ಅತ್ತಿಕಟ್ಟಿ ತಾಂಡದ ಸೋಮಪ್ಪ ಚ. ಲಮಾಣಿ(40) ಅವನೊಂದಿಗೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು. ಈ ವಿಷಯ ಲಕ್ಷ್ಮಣನಿಗೆ ಗೊತ್ತಾಗಿ ಬೈದಿದ್ದರಿಂದ ಆರೋಪಿತರಾದ ಸೋಮಪ್ಪ ಮತ್ತು ಲಲಿತಾ ಸೇರಿಕೊಂಡು ಅ.1 ರಂದು ಬೆಳಗಿನ ಜಾವ ಮನೆಯಲ್ಲಿ ಲಕ್ಷ್ಮಣನನ್ನು ಹಗ್ಗದಿಂದ ಕತ್ತುಹಿಸಕಿ ಕೊಲೆ ಮಾಡಿದ್ದಾರೆ ಎಂದು ರಮೇಶ ಲಮಾಣಿ ನೀಡಿದ ದೂರಿನ್ವಯ ಮುಳಗುಂದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನ ಬಂಧಿಸಿದ ಪೋಲಿಸರು ತನಿಖೆಗೆ ಒಳಪಡಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಮೇವುಂಡಿ: ಈಜಲು ಹೋದ ಬಾಲಕ ನೀರು ಪಾಲು

ಗೆಳೆಯರೊಂದಿಗೆ ಈಜಲು ಹೋದ ಬಾಲಕ ನೀರು ಪಾಲಾದ ಘಟನೆ ಮುಂಡರಗಿ ತಾಲೂಕಿನ ಮೇವುಂಡಿ ಗ್ರಾಮದಲ್ಲಿ ನಡೆದಿದೆ. 14 ವರ್ಷದ ಬಾಲಕ ಚನ್ನವೀರಗೌಡ ಮೃತ ಬಾಲಕ. ಗೆಳೆಯರೊಂದಿಗೆ ಬುಧವಾರ ಈಜಲ ಹೋದಾಗ ಇಲ್ಲಿನ ಹಿರೇಹಳ್ಳದಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ಜಿಮ್ಸನಲ್ಲಿ ಘಟಿಕೋತ್ಸವ : ಸಚಿವ ಪಾಟೀಲ ಹೇಳಿಕೆ

ವೈದ್ಯ ವೃತ್ತಿ ಪವಿತ್ರ ವೃತ್ತಿಯಾಗಿದ್ದು ವೈದ್ಯ ನಾರಾಯಣ ಭವೋ ಎಂಬ ಗಾದೆಗೆ ತಕ್ಕಂತೆ ಸೇವಾ ಮನೋಭಾವನೆಯಿಂದ ಕಾರ್ಯನಿರ್ವಹಿಸುವಂತೆ ವೈದ್ಯ ಪದವಿ ಪಡೆದ ವಿಧ್ಯಾರ್ಥಿಗಳಿಗೆ ರಾಜ್ಯ ಸಣ್ಣ ಕೈಗಾರಿಕೆ, ವಾರ್ತಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಹೇಳಿದರು.

ಲಾಕ್ ಡೌನ್ : ಸೀಜ್ ಆದ ವಾಹನ ಮಾಲಿಕರಿಗೆ ಸಿಹಿ ಸುದ್ದಿ

ಈಗಾಗಲೇ ದೇಶಾದ್ಯಂತ ಮಾ.24 ರಿಂದಲೇ ಲಾಕ್ ಡೌನ್ ಆರಂಭವಾಗಿದೆ. ಪೊಲೀಸರು ವಶಪಡಿಸಿಕೊಂಡ ವಾಹನಗಳನ್ನು ಮೇ.1 ರಂದು ಮಾಲಿಕರಿಗೆ ಮರಳಿ ನೀಡುವ ಬಗ್ಗೆ ನಿರ್ಧರಿಸಲಾಗಿದೆ.