ಲಖ್ನೋ: ಉತ್ತರಪ್ರದೇಶದ ಹತ್ರಾಸ್ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯ ಕುಟುಂಬಸ್ತರ ಭೇಟಿಗೆ ಇಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ತೆರಳಲಿದ್ದಾರೆ. ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ವಿರುದ್ಧ ದೇಶಾದ್ಯಂತ ವಿಪಕ್ಷಗಳು, ದಲಿತಪರ ಸಂಘಟನೆಗಳು ಮತ್ತು ವಿವಿಧ ಸಂಘಟನೆಗಳು ಮತ್ತು ಜಾಲತಾಣಗಳಲ್ಲಿ ಕೂಡ ಜನರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಎರಡು ದಿನಗಳ ಹಿಂದೆ ಮನೀಷಾ ವಾಲ್ಮೀಕಿ ಕುಟುಂಬಸ್ಥರ ಭೇಟಿಗೆ ತೆರಳಿದ್ದ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿಯವರನ್ನು ಉತ್ತರಪ್ರದೇಶ ಪೊಲೀಸರು ತಡೆದು, ರಾಹುಲ್ ಅವರನ್ನು ತಳ್ಳಾಡಲಾಗಿತ್ತು. ಈ ವಿಷಯವನ್ನು ಇಟ್ಟುಕೊಂಡು ಕಾಂಗ್ರೆಸ್ ಪ್ರತಿಭಟನೆಯನ್ನೂ ನಡೆಸಿತ್ತು. ಈ ಎಲ್ಲ ಬೆಳವಣಿಗೆಗಳ ನಡುವೆ ಇಂದು ಕುಟುಂಬದವರನ್ನು ಭೇಟಿಯಾಗಲು ರಾಹುಲ್ ಗಾಂಧಿ ತೆರಳಲಿದ್ದಾರೆ. ಇವರ ಜೊತೆ ಕಾಂಗ್ರೆಸ್ ನಿಯೋಗ ಕೂಡ ಭೇಟಿ ನೀಡಲಿದೆ.

ಇಂದು ಮಧ್ಯಾಹ್ನ ರಾಹುಲ್ ನೇತೃತ್ವದ ಕಾಂಗ್ರೆಸ್ ಸಂಸದರ ನಿಯೋಗ ಹತ್ರಾಸ್ ಸಂತ್ರಸ್ತೆ ಕುಟುಂಬವನ್ನು ಭೇಟಿಯಾಗಲಿದೆ ಎಂದು ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

I can't breathe: ಜಗತ್ತಿನಾದ್ಯಂತ ಕಪ್ಪುಜನರಿಗೆ ಮಿಡಿತ

ಫ್ಲಾಯ್ಡ್ ಅವರ ಕುತ್ತಿಗೆಯ ಮೇಲೆ ಮೊಣಕಾಲನ್ನು ಇಟ್ಟು, ನೆಲಕ್ಕೆ ಒತ್ತಿದ್ದರು. ಈ ವಿಡಿಯೋದಲ್ಲಿ ಫ್ಲಾಯ್ಡ್ “I can’t breathe” ಎಂದು ನಿರಂತರವಾಗಿ ಅವಲತ್ತುಕೊಂಡಿದ್ದರು. ಈ ವಿಡಿಯೋವನ್ನು ಯೂಟ್ಯೂಬ್ ಸೇರಿದಂತೆ ವಿವಿಧ ಜಾಲತಾಣಗಳಲ್ಲಿ ಕೋಟ್ಯಂತರ ಜನ ನೋಡಿದ್ದಾರೆ.

ರಾಜಸ್ಥಾನದಲ್ಲಿ ಸೋಂಕಿತರ ಸಂಖ್ಯೆ ವಿಪರೀತ ಹೆಚ್ಚಳ – ಗಡಿ ಬಂದ್!!

ಜೈಪುರ: ಮಹಾಮಾರಿಯ ಅಟ್ಟಹಾಸ ದೇಶದ ಹಲವು ರಾಜ್ಯಗಳಲ್ಲಿ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ರಾಜಸ್ಥಾನದ ಗಡಿ ಬಂದ್…

ಸುಶಾಂತ ಸಿಂಗ್ ರಜಪುತ ಬಾಲಿವುಡ್ ನಟ ಆತ್ಮಹತ್ಯೆ

ಮುಂಬಯಿ:ಬಾಲಿವುಡ್ ನಟ ಸುಶಾಂತ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಬಾಂದ್ರ ಪೂಲಿಸರು ತಿಳಿಸಿದ್ದಾರೆ. ಅವರು…

800 ಕಿ.ಮೀ ದೂರ ತೆರಳಿ ದೂರು ದಾಖಲಿಸಿದ ಅತ್ಯಾಚಾರ ಸಂತ್ರಸ್ತೆ!

ಅತ್ಯಾಚಾರಕ್ಕೆ ಒಳಗಾದ ಮಹಿಳೆಯೊಬ್ಬರು ಬರೋಬ್ಬರಿ 800 ಕಿ.ಮೀ ಪ್ರಯಾಣಿಸಿ ಪ್ರಕರಣ ದಾಖಲಿಸಿರುವ ಘಟನೆ ನಡೆದಿದೆ.