ಲಖ್ನೋ: ಉತ್ತರಪ್ರದೇಶದ ಹತ್ರಾಸ್ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯ ಕುಟುಂಬಸ್ತರ ಭೇಟಿಗೆ ಇಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ತೆರಳಲಿದ್ದಾರೆ. ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ವಿರುದ್ಧ ದೇಶಾದ್ಯಂತ ವಿಪಕ್ಷಗಳು, ದಲಿತಪರ ಸಂಘಟನೆಗಳು ಮತ್ತು ವಿವಿಧ ಸಂಘಟನೆಗಳು ಮತ್ತು ಜಾಲತಾಣಗಳಲ್ಲಿ ಕೂಡ ಜನರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಎರಡು ದಿನಗಳ ಹಿಂದೆ ಮನೀಷಾ ವಾಲ್ಮೀಕಿ ಕುಟುಂಬಸ್ಥರ ಭೇಟಿಗೆ ತೆರಳಿದ್ದ ರಾಹುಲ್ ಗಾಂಧಿ, ಪ್ರಿಯಾಂಕ ಗಾಂಧಿಯವರನ್ನು ಉತ್ತರಪ್ರದೇಶ ಪೊಲೀಸರು ತಡೆದು, ರಾಹುಲ್ ಅವರನ್ನು ತಳ್ಳಾಡಲಾಗಿತ್ತು. ಈ ವಿಷಯವನ್ನು ಇಟ್ಟುಕೊಂಡು ಕಾಂಗ್ರೆಸ್ ಪ್ರತಿಭಟನೆಯನ್ನೂ ನಡೆಸಿತ್ತು. ಈ ಎಲ್ಲ ಬೆಳವಣಿಗೆಗಳ ನಡುವೆ ಇಂದು ಕುಟುಂಬದವರನ್ನು ಭೇಟಿಯಾಗಲು ರಾಹುಲ್ ಗಾಂಧಿ ತೆರಳಲಿದ್ದಾರೆ. ಇವರ ಜೊತೆ ಕಾಂಗ್ರೆಸ್ ನಿಯೋಗ ಕೂಡ ಭೇಟಿ ನೀಡಲಿದೆ.

ಇಂದು ಮಧ್ಯಾಹ್ನ ರಾಹುಲ್ ನೇತೃತ್ವದ ಕಾಂಗ್ರೆಸ್ ಸಂಸದರ ನಿಯೋಗ ಹತ್ರಾಸ್ ಸಂತ್ರಸ್ತೆ ಕುಟುಂಬವನ್ನು ಭೇಟಿಯಾಗಲಿದೆ ಎಂದು ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್ ಹೇಳಿದ್ದಾರೆ.

Leave a Reply

Your email address will not be published. Required fields are marked *

You May Also Like

ದೆಹಲಿಯಲ್ಲಿ ಜುಲೈ ಅಂತ್ಯಕ್ಕೆ ಸೋಂಕಿತರ ಸಂಖ್ಯೆ ಎಷ್ಟಿರಲಿದೆ ಗೊತ್ತಾ?

ಕೊರೊನಾಗೆ ದೆಹಲಿ ತತ್ತರಿಸಿ ಹೋಗಿದೆ. ಇದು ಹೀಗೆ ಮುಂದುವರೆದರೆ ಜುಲೈ ಅಂತ್ಯದ ವೇಳೆಗೆ ದೆಹಲಿಯಲ್ಲಿ 5.5 ಲಕ್ಷ ಜನರಲ್ಲಿ ಸೋಂಕು ಕಾಣಿಸಿಕೊಳ್ಳಲಿದೆ ಎಂದು ಡಿಸಿಎಂ ಮನೀಶ್ ಸಿಸೋಡಿಯಾ ಆತಂಕ ವ್ಯಕ್ತಪಡಿಸಿದ್ದಾರೆ.

‘ಡ್ಯಾನ್ಸ್ ಇಂಡಿಯಾ ಡ್ಯಾನ್ಸ್’ ಹುಡುಗಿ :ಟಿವಿ ಶೋ ಮಾಡುತ್ತಲೇ ಶೇ.74 ಸ್ಕೋರ್

ಸದ್ಯ ಜನಪ್ರಿಯವಾಗಿರುವ ಅಲಾದ್ದೀನ್ ಫ್ಯಾಂಟಸಿ ಟಿವಿ ಶೋನಲ್ಲಿ ಪಾತ್ರ ಮಾಡುತ್ತಿರುವ ಈ ಹುಡುಗಿ ಶೂಟಿಂಗ್ ಮತ್ತು ಸ್ಟಡಿ ನಡುವೆ ಬ್ಯಾಲೆನ್ಸ್ ಮಾಡುತ್ತ ಗೆಲ್ಲುತ್ತಿದ್ದಾಳೆ.

ಕೊರೋನಾ ಸೋಂಕಿನಿಂದ ಗುಣ ಹೊಂದಿದ 12 ದಿನದ ಮಗುವಿನ ಹೆಸರೇನು ಗೊತ್ತಾ?

ಒಂಭತ್ತು ದಿನದ ಮಗುವಿನಲ್ಲಿ ಕೊರೋನಾ ಪಾಸಿಟಿವ್ ಕಂಡು ಬಂದಿತ್ತು. ಇದೀಗ 12 ದಿನದ ಈ ಮಗು ಕೊರೋನಾ ಸೋಂಕಿನಿಂದ ಗುಣ ಹೊಂದಿದ್ದು ಮಗುವಿಗೆ ಇಂದು ಹೆಸರಿಡಲಾಗಿದೆ.

ಕೋರಿಯಾದಿಂದ ಕೋಲಾರಕ್ಕೂ ಬಂದಿವೆ ಸೋಂಕು ಟೆಸ್ಟ್ ಕಿಟ್ ಗಳು

ಕೊರೋನಾ ಸೋಂಕು ತುರ್ತಾಗಿ ಪತ್ತೆ ಹಚ್ಚಲು ಕೋರಿಯಾದಿಂದ ಕೋಲಾರ ಜಿಲ್ಲೆಯ ಆರೋಗ್ಯ ಇಲಾಖೆಗೆ ರ್ಯಾಪಿಡ್ ಆಂಟಿ ಬಾಡಿ ಟೆಸ್ಟಿಂಗ್ ಕಿಟ್ ಗಳು ಬಂದಿವೆ. ಈ ಮೂಲಕ ಇಪ್ಪತ್ತು ನಿಮಿಷದೊಳಗಾಗಿ ಕೊರೋನಾ ಸೇರಿ ಯಾವುದೇ ಸೋಂಕಿದ್ದರೂ ಪತ್ತೆ ಹಚ್ಚಬಹುದಾಗಿದೆ. ಇದು ದೇಶದಲ್ಲಿ ಮೊದಲ ಪ್ರಯತ್ನ ಎಂದು ಹೇಳಲಾಗುತ್ತಿದೆ.