ಹಾವೇರಿ: ನಕಲಿ ಓಟರ್ ಐಡಿ ತಯಾರಿಸುತ್ತಿದ್ದ ಜಾಲವನ್ನು ಹಾವೇರಿ ಪೊಲೀಸರು ಜಾಲಾಡಿದ್ದಾರೆ. ಡಿಸಿ ಹಾಗು ಎಡಿಸಿ ನೇತೃತ್ವದಲ್ಲಿ ದಾಳಿ ನಡೆಸಿ ನಕಲಿ ಓಟರ್ ಐಡಿ ತಯಾರಿಸುತ್ತಿದ್ದ ತಂಡವನ್ನು ಭೇದಿಸುವಲ್ಲಿ ಯಶಸ್ವಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ.

ಜಿಲ್ಲಾಧಿಕಾರಿ ಸಂಜಯ್ ಮತ್ತು ಎಡಿಸಿ ಯೋಗಿಶ್ವರ ಹಾಗೂ ಪೋಲಿಸ್ ಇಲಾಖೆ ಜಂಟಿ ಕಾರ್ಯಾಚರಣೆಯ ಮೂಲಕ

ಇಲ್ಲಿನ ಒನ್ ಡಿಜಿಟಲ್ ಸೇವಾ ಕೇಂದ್ರದ ಮೇಲೆ ದಾಳಿ ನಡೆಸಿದ್ದಾರೆ. ಹಾವೇರಿ ನಗರದ ಹುಕ್ಕೇರಿ ಮಠದ ಮುಂಭಾಗದಲ್ಲಿ ಘಟನೆ ನಡೆದಿದ್ದು, ಜೀವನಸಿಂಗ್ ರಜಪೂತ್, ನವೀನ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳೆದ ಹದಿನೈದು ದಿನಗಳಿಂದ ಖಚಿತ ಮಾಹಿತಿ ಮೇಲೆ ಜಿಲ್ಲಾಡಳಿತ ಕಾರ್ಯಾಚರಣೆಗೆ ಪ್ರಯತ್ನಿಸುತ್ತಿತ್ತು. ಆದರೆ ಇಂದು ಕೊನೆಗೂ ನಕಲಿ ಓಟರ್ ಐಡಿ ತಯಾರಿಸುತ್ತಿದ್ದ ಜಾಲ ಸಿಕ್ಕಿಬಿತ್ತು.

ನಕಲಿ ಮತದಾನ ಗುರುತಿನ ಚಿಟಿ ತಯಾರಿಸಲು ಆರೋಪಿ ಜೀವನಸಿಂಗ್, ಕೇರಳ ಮತ್ತು ಹರಿಯಾಣ ರಾಜ್ಯದಿಂದ ನಕಲಿ ಸಾಫ್ಟವೇರ್ ತೆಗೆದುಕೊಂಡಿದ್ದ ಎನ್ನಲಾಗಿದೆ. ಸಾಪ್ಟವೇರ್ ನಲ್ಲಿ ನಕಲಿ ಮತಪತ್ರ ತಯಾರು ಮಾಡಿ ಅಧಿಕ ಹಣಕ್ಕೆ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಆರೋಪಿಗಳನ್ನು ವಶಕ್ಕೆ ಪಡೆದ ಅಧಿಕಾರಿಗಳು ಸೇವಾ ಸಿಂಧು ಕೇಂದ್ರ ಬಂದ್ ಮಾಡಿದ್ದಾರೆ. ಈ ಕುರಿತು ಹಾವೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಈರುಳ್ಳಿ ಬೆಳೆದ ರೈತನ ಬದುಕು ಬೀದಿಗೆ…ಈರುಳ್ಳಿ ಕಂಡರೆ ಓಡುತ್ತಿರುವ ಗ್ರಾಹಕ!

ಬೆಂಗಳೂರು : ಈರುಳ್ಳಿ ಬೆಲೆ ಗಗನಕ್ಕೆ ಹೋಗಿದೆ. ಹೀಗಾಗಿ ಈರುಳ್ಳಿಯನ್ನು ಖರೀದಿಸಲು ಗ್ರಾಹಕರು ಹಿಂದೇಟು ಹಾಕುತ್ತಿದ್ದಾರೆ.

ನಾಳೆ ಕಾಂಗ್ರೆಸ್ ನಿಂದ ಶಿವಮೊಗ್ಗ ಚಲೋ ಆರಂಭ

ಕಾಂಗ್ರೆಸ್ ನಾಯಕರ ಮೇಲೆ ಬಿಜೆಪಿ ನೀಡುತ್ತಿರುವ ಕಿರುಕುಳವನ್ನು ಖಂಡಿಸಿ ಮಾ.13 ರಂದು ಮದ್ಯಾಹ್ನ 1ಕ್ಕೆ ಶಿವಮೊಗ್ಗ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ನಾಯಕ ಡಿ.ಕೆ ಶಿವಕುಮಾರ ಅವರು ತಮ್ಮ ಟ್ವಿಟರ್ ಮೂಲಕ ತಿಳಿಸಿದ್ದಾರೆ.

ಗ್ರಾಮ ಪಂಚಾಯತಿಗಳಿಗೆ ನೇಮಕವಾದ ಆಡಳಿತಾಧಿಕಾರಿಗಳ ಕರ್ತವ್ಯಗಳೇನು..?

ನೇಮಕಗೊಂಡ ಆಡಳಿತಾಧಿಕಾರಿಗಳ ಕರ್ತವ್ಯಗಳ ಕುರಿತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾ ಮಹದೇವನ್ ಆದೇಶ ಹೊರಡಿಸಿದ್ದಾರೆ.

ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಗಾಗಿ ಜಾತಕಪಕ್ಷಿಯಂತೆ ನಿರೀಕ್ಷೆ- ಬಸವರಾಜೇಶ್ವರಿ ಶೀಲವಂತ ನೇಮಕಾತಿ ಪ್ರಕ್ರಿಯೆ ಕೂಡಲೇ ಆರಂಭಿಸಲು ಸಕಾ೯ರಕ್ಕೆ ಆಗ್ರಹ

ಉತ್ತರಪ್ರಭ ಸುದ್ದಿನಿಡಗುಂದಿ: ರಾಜ್ಯದ ಪ್ರತಿಯೊಂದು ಶಾಲಾ, ಪ,ಪೂ ಕಾಲೇಜುಗಳಲ್ಲಿ ದೈಹಿಕ ಶಿಕ್ಷಣ ಪಠ್ಯದ ಸವಿರುಚಿ ಮಕ್ಕಳು…