ಹಾವೇರಿ: ನಕಲಿ ಓಟರ್ ಐಡಿ ತಯಾರಿಸುತ್ತಿದ್ದ ಜಾಲವನ್ನು ಹಾವೇರಿ ಪೊಲೀಸರು ಜಾಲಾಡಿದ್ದಾರೆ. ಡಿಸಿ ಹಾಗು ಎಡಿಸಿ ನೇತೃತ್ವದಲ್ಲಿ ದಾಳಿ ನಡೆಸಿ ನಕಲಿ ಓಟರ್ ಐಡಿ ತಯಾರಿಸುತ್ತಿದ್ದ ತಂಡವನ್ನು ಭೇದಿಸುವಲ್ಲಿ ಯಶಸ್ವಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ.

ಜಿಲ್ಲಾಧಿಕಾರಿ ಸಂಜಯ್ ಮತ್ತು ಎಡಿಸಿ ಯೋಗಿಶ್ವರ ಹಾಗೂ ಪೋಲಿಸ್ ಇಲಾಖೆ ಜಂಟಿ ಕಾರ್ಯಾಚರಣೆಯ ಮೂಲಕ

ಇಲ್ಲಿನ ಒನ್ ಡಿಜಿಟಲ್ ಸೇವಾ ಕೇಂದ್ರದ ಮೇಲೆ ದಾಳಿ ನಡೆಸಿದ್ದಾರೆ. ಹಾವೇರಿ ನಗರದ ಹುಕ್ಕೇರಿ ಮಠದ ಮುಂಭಾಗದಲ್ಲಿ ಘಟನೆ ನಡೆದಿದ್ದು, ಜೀವನಸಿಂಗ್ ರಜಪೂತ್, ನವೀನ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳೆದ ಹದಿನೈದು ದಿನಗಳಿಂದ ಖಚಿತ ಮಾಹಿತಿ ಮೇಲೆ ಜಿಲ್ಲಾಡಳಿತ ಕಾರ್ಯಾಚರಣೆಗೆ ಪ್ರಯತ್ನಿಸುತ್ತಿತ್ತು. ಆದರೆ ಇಂದು ಕೊನೆಗೂ ನಕಲಿ ಓಟರ್ ಐಡಿ ತಯಾರಿಸುತ್ತಿದ್ದ ಜಾಲ ಸಿಕ್ಕಿಬಿತ್ತು.

ನಕಲಿ ಮತದಾನ ಗುರುತಿನ ಚಿಟಿ ತಯಾರಿಸಲು ಆರೋಪಿ ಜೀವನಸಿಂಗ್, ಕೇರಳ ಮತ್ತು ಹರಿಯಾಣ ರಾಜ್ಯದಿಂದ ನಕಲಿ ಸಾಫ್ಟವೇರ್ ತೆಗೆದುಕೊಂಡಿದ್ದ ಎನ್ನಲಾಗಿದೆ. ಸಾಪ್ಟವೇರ್ ನಲ್ಲಿ ನಕಲಿ ಮತಪತ್ರ ತಯಾರು ಮಾಡಿ ಅಧಿಕ ಹಣಕ್ಕೆ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಆರೋಪಿಗಳನ್ನು ವಶಕ್ಕೆ ಪಡೆದ ಅಧಿಕಾರಿಗಳು ಸೇವಾ ಸಿಂಧು ಕೇಂದ್ರ ಬಂದ್ ಮಾಡಿದ್ದಾರೆ. ಈ ಕುರಿತು ಹಾವೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಕೋವಿಡ್ ನಿಂದ ಅನಾಥರಾದ ಮಕ್ಕಳಿಗೆ ಮಾಸಿಕ 3500 ಸಹಾಯಧನ

ಕೊರೊನಾದಿಂದ ಅನಾಥರಾದ ಮಕ್ಕಳಿಗೆ ಮಾಸಿಕ ಮೂರುವರೆ ಸಾವಿರ ಸಹಾಯ ಧನ ನೀಡುವುದಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.

ರಾಜ್ಯದಲ್ಲಿಂದು 7330 ಕೊರೊನಾ ಪಾಸಿಟಿವ್!: ಯಾವ ಜಿಲ್ಲೆಯಲ್ಲಿ ಎಷ್ಟು?

ರಾಜ್ಯದಲ್ಲಿಂದು 7330 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈವರೆಗೆ ಒಟ್ಟು 271876 ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.

ಹಳ್ಳದ ರಭಸಕ್ಕೆ ಕೊಚ್ಚಿ ಹೋದ ಯುವಕ

ಪ್ರವಾಹಕ್ಕೆ ಸಿಲುಕಿದವರ ರಕ್ಷಣೆ ವೇಳೆ ಹಗ್ಗ ತುಂಡಾಗಿ ವ್ಯಕ್ತಿಯೋರ್ವ ಹಳ್ಳದಲ್ಲಿ ಕೊಚ್ಚಿಹೋದ ಘಟನೆ ರಾಯಚೂರು ಜಿಲ್ಲೆ ಮಸ್ಕಿಯಲ್ಲಿ ನಡೆದಿದೆ. ಪಟ್ಟಣದ ಹಿರೇಹಳ್ಳದ ಪ್ರವಾಹಕ್ಕೆ ಸಿಲುಕಿದವರ ರಕ್ಷಣೆ ವೇಳೆಯಲ್ಲಿ ಹಗ್ಗ ತುಂಡಾಗಿದೆ. ಭಾರಿ ಮಳೆಯಿಂದಾಗಿ ಮಸ್ಕಿ ಜಲಾಶಯ ಭರ್ತಿ ಆಗಿದೆ. ಹೀಗಾಗಿ ಜಲಾಶಯದ ನೀರು ಹಳ್ಳಕ್ಕೆ ಬಿಡಲಾಗಿತ್ತು. ಬೆಳಗಿನ ವೇಳೆ ಶೌಚಕ್ಕೆ ತೆರಳಿದ ಯುವಕರು ಹಳ್ಳದ ನಡುಗಡ್ಡೆಯಲ್ಲಿ ಸಿಲುಕಿದ್ದರು.

ಕೆಪಿಎಸ್ಇ ಪರೀಕ್ಷೆ ಬರೆಯುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಈಗಾಗಲೇ ಜನೇವರಿ ತಿಂಗಳಲ್ಲೆ ನಡೆಯಬೇಕಿದ್ದ ಪ್ರಥಮ ದರ್ಜೆ ಸಹಾಯ (ಕೆಪಿಎಸ್ಇ) ಪರೀಕ್ಷೆಯನ್ನು ಫೆ.28ಕ್ಕೆ ನಿಗಧಿ ಪಡಿಸಲಾಗಿದೆ.