ಹಾವೇರಿ: ನಕಲಿ ಓಟರ್ ಐಡಿ ತಯಾರಿಸುತ್ತಿದ್ದ ಜಾಲವನ್ನು ಹಾವೇರಿ ಪೊಲೀಸರು ಜಾಲಾಡಿದ್ದಾರೆ. ಡಿಸಿ ಹಾಗು ಎಡಿಸಿ ನೇತೃತ್ವದಲ್ಲಿ ದಾಳಿ ನಡೆಸಿ ನಕಲಿ ಓಟರ್ ಐಡಿ ತಯಾರಿಸುತ್ತಿದ್ದ ತಂಡವನ್ನು ಭೇದಿಸುವಲ್ಲಿ ಯಶಸ್ವಿಯಾದ ಘಟನೆ ಹಾವೇರಿಯಲ್ಲಿ ನಡೆದಿದೆ.

ಜಿಲ್ಲಾಧಿಕಾರಿ ಸಂಜಯ್ ಮತ್ತು ಎಡಿಸಿ ಯೋಗಿಶ್ವರ ಹಾಗೂ ಪೋಲಿಸ್ ಇಲಾಖೆ ಜಂಟಿ ಕಾರ್ಯಾಚರಣೆಯ ಮೂಲಕ

ಇಲ್ಲಿನ ಒನ್ ಡಿಜಿಟಲ್ ಸೇವಾ ಕೇಂದ್ರದ ಮೇಲೆ ದಾಳಿ ನಡೆಸಿದ್ದಾರೆ. ಹಾವೇರಿ ನಗರದ ಹುಕ್ಕೇರಿ ಮಠದ ಮುಂಭಾಗದಲ್ಲಿ ಘಟನೆ ನಡೆದಿದ್ದು, ಜೀವನಸಿಂಗ್ ರಜಪೂತ್, ನವೀನ ಎಂಬುವವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಳೆದ ಹದಿನೈದು ದಿನಗಳಿಂದ ಖಚಿತ ಮಾಹಿತಿ ಮೇಲೆ ಜಿಲ್ಲಾಡಳಿತ ಕಾರ್ಯಾಚರಣೆಗೆ ಪ್ರಯತ್ನಿಸುತ್ತಿತ್ತು. ಆದರೆ ಇಂದು ಕೊನೆಗೂ ನಕಲಿ ಓಟರ್ ಐಡಿ ತಯಾರಿಸುತ್ತಿದ್ದ ಜಾಲ ಸಿಕ್ಕಿಬಿತ್ತು.

ನಕಲಿ ಮತದಾನ ಗುರುತಿನ ಚಿಟಿ ತಯಾರಿಸಲು ಆರೋಪಿ ಜೀವನಸಿಂಗ್, ಕೇರಳ ಮತ್ತು ಹರಿಯಾಣ ರಾಜ್ಯದಿಂದ ನಕಲಿ ಸಾಫ್ಟವೇರ್ ತೆಗೆದುಕೊಂಡಿದ್ದ ಎನ್ನಲಾಗಿದೆ. ಸಾಪ್ಟವೇರ್ ನಲ್ಲಿ ನಕಲಿ ಮತಪತ್ರ ತಯಾರು ಮಾಡಿ ಅಧಿಕ ಹಣಕ್ಕೆ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಆರೋಪಿಗಳನ್ನು ವಶಕ್ಕೆ ಪಡೆದ ಅಧಿಕಾರಿಗಳು ಸೇವಾ ಸಿಂಧು ಕೇಂದ್ರ ಬಂದ್ ಮಾಡಿದ್ದಾರೆ. ಈ ಕುರಿತು ಹಾವೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಮತಗಟ್ಟೆ ವಿಭಜನೆಯಲ್ಲಿ ಜಿಲ್ಲಾಡಳಿತ ವಿಫಲ: ಸಾಗದ ಸರದಿ ಸಾಲು

ಉತ್ತರಪ್ರಭ ಸುದ್ದಿ ಮುಂಡರಗಿ: ತಾಲೂಕಿನ ಮುರುಡಿತಾಂಡಾ ಮತಗಟ್ಟೆ ಸಂಖ್ಯೆ 265, ರೋಣ ಕ್ಷೇತ್ರದ ವ್ಯಾಪ್ತಿಯಲ್ಲಿದ್ದು ಇಲ್ಲಿ…

ಮದ್ಯಾಹ್ನದ ಬಿಸಿಊಟದ ಬದಲು ವಿದ್ಯಾರ್ಥಿಗಳ ಖಾತೆಗೆ ಸರ್ಕಾರದ ಹಣ

ನವದೆಹಲಿ: ಮಕ್ಕಳ ಪೌಷ್ಠಿಕಾಂಶದ ಮಟ್ಟವನ್ನು ಕಾಪಾಡಲು ಸಹಾಯ ಮಾಡುವ ಸಲುವಾಗಿ, ಮಧ್ಯಾಹ್ನದ ಊಟ ಯೋಜನೆಯಡಿ ಮಕ್ಕಳಿಗೆ ನೇರ ಲಾಭ ವರ್ಗಾವಣೆ (ಡಿಬಿಟಿ) ಮೂಲಕ ಆರ್ಥಿಕ ಸಹಾಯವನ್ನು ಕಳುಹಿಸಲಾಗುವುದು. ಸರ್ಕಾರದ ಈ ಯೋಜನೆಯಿಂದ ಸುಮಾರು 11.8 ಕೋಟಿ ವಿದ್ಯಾರ್ಥಿಗಳು ಪ್ರಯೋಜನ ಪಡೆಯಲಿದ್ದಾರೆ ಎನ್ನಲಾಗಿದೆ.

ರಾಷ್ಟಪತಿ ಭಾಷಣಕ್ಕೆ ಬಹಿಷ್ಕರಿಸಲು 16 ವಿಪಕ್ಷಗಳಿಂದ ನಿರ್ಧಾರ

ನಾಳೆಯಿಂದ ಅಧಿವೇಶನ ಸಂಸತ್‌ ಬಜೆಟ್‌ ಆರಂಭವಾಗಲಿದ್ದು, ಕೇಂದ್ರದ ನೂತನ ಕೃಷಿ ಮಸೂದೆಗಳನ್ನ ವಿರೋಧಿಸಿ ರಾಷ್ಟ್ರಪತಿಗಳ ಭಾಷಣ ಬಹಿಷ್ಕರಿಸಲು ನಿರ್ಧರಿಸಿರುವುದಾಗಿ ಗುಲಾಂ ನಬಿ ಹೇಳಿದ್ದಾರೆ.

ಹೋಂ ಕ್ವಾರಂಟೈನ್ ಉಲ್ಲಂಘಿಸಿದವರು ಸಾಂಸ್ಥಿಕ ಕ್ವಾರಂಟೈನ್ ಗೆ..!

ಗದಗ: ಹೋಂ ಕ್ವಾರಂಟೈನ್ ಉಲ್ಲಂಘಿಸಿ ಬೇಕಾಬಿಟ್ಟಿ ಓಡಾಟ ನಡೆಸಿದ್ದವರ ವಿರುದ್ಧ ಇಂದು ತಹಶೀಲ್ದಾರ್ ಗರಂ ಆದರು.…