ಮಡಿಕೇರಿ: ಅಕ್ಟೋಬರ್ 15ರಿಂದ ಶಾಲೆಗಳ ಪುನರಾರಂಭಕ್ಕೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಆದರೆ ನಮ್ಮ ರಾಜ್ಯದಲ್ಲಿ ಸೋಂಕು ಏರುಗತಿಯ ಮಧ್ಯದಲ್ಲಿದೆ. ಇಂತಹ ಸಂದರ್ಭದಲ್ಲಿ ಶಾಲೆ ಆರಂಭಿಸುವುದು ಸಮಂಜಸವಲ್ಲ ಎಂದು ತಜ್ಞರು ಸಲಹೆ ನೀಡಿದ್ದಾರೆ ಎಂದು ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟೀಕರಣ ನೀಡಿದರು.

ಮಡಿಕೇರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ನಡೆದ ಉನ್ನತ ಮಟ್ಟದ ಅಧಿಕಾರಿಗಳ ಸಭೆ ಬಳಿಕ ಮಾತನಾಡಿದ ಅವರು, ತಜ್ಞರು ಶಾಲೆ ಆರಂಭಿಸುವುದು ಸಮಂಜಸವಲ್ಲ ಎಂದು ಸಲಹೆ ನೀಡಿದ್ದಾರೆ. ಆದ್ದರಿಂದ ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುತ್ತಿಲ್ಲ ಎಂದು ರಾಜ್ಯ ಸರ್ಕಾರದ ನಿರ್ಧಾರವನ್ನು ಹೇಳಿದರು.

ಈ ಮೂಲಕ ರಾಜ್ಯದ ಪೋಷಕರಲ್ಲಿ ಮೂಡಿದ್ದ ಆತಂಕವನ್ನು ಸಚಿವ ಸುಧಾಕರ್ ನಿವಾರಿಸಿದರು. ಕೆಲವು ಶಿಕ್ಷಣ ತಜ್ಞರು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಶಾಲೆಕಾಲೇಜುಗಳನ್ನು ಪುನರಾರಂಭಿಸುವುದು ಸೂಕ್ತ ಎಂದು ಕೂಡ ಸಲಹೆ ನೀಡಿದ್ದರು. ಆದರೆ, ಪ್ರಾಥಮಿಕ ಶಾಲೆಯ ಮಕ್ಕಳನ್ನು ಕೊರೊನಾ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಕಳುಹಿಸುವುದು ಹೇಗೆ? ಎಂಬ ಪ್ರಶ್ನೆ ರಾಜ್ಯದ ಪೋಷಕರಲ್ಲಿತ್ತು. ಇದೀಗ ಅವರಿಗೆ ಸಮಾಧಾನದ ಸುದ್ದಿಯನ್ನು ಸುಧಾಕರ್ ನೀಡಿದ್ದಾರೆ.

Leave a Reply

Your email address will not be published. Required fields are marked *

You May Also Like

ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಗಾಗಿ ಜಾತಕಪಕ್ಷಿಯಂತೆ ನಿರೀಕ್ಷೆ- ಬಸವರಾಜೇಶ್ವರಿ ಶೀಲವಂತ ನೇಮಕಾತಿ ಪ್ರಕ್ರಿಯೆ ಕೂಡಲೇ ಆರಂಭಿಸಲು ಸಕಾ೯ರಕ್ಕೆ ಆಗ್ರಹ

ಉತ್ತರಪ್ರಭ ಸುದ್ದಿನಿಡಗುಂದಿ: ರಾಜ್ಯದ ಪ್ರತಿಯೊಂದು ಶಾಲಾ, ಪ,ಪೂ ಕಾಲೇಜುಗಳಲ್ಲಿ ದೈಹಿಕ ಶಿಕ್ಷಣ ಪಠ್ಯದ ಸವಿರುಚಿ ಮಕ್ಕಳು…

ಆಲಮಟ್ಟಿ ಶಾಲಾ-ಕಾಲೇಜು ಮಕ್ಕಳಿಗೆ ಉಚಿತ ನೋಟಬುಕ್ ವಿತರಣೆ

ಉತ್ತರಪ್ರಭ ರಾಜಕಾರಣಗೊಸ್ಕರ ಕೆಲಸ ಮಾಡುತ್ತಿಲ್ಲ- ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಗುಲಾಬಚಂದ ಜಾಧವಆಲಮಟ್ಟಿ: ಕೇವಲ ರಾಜಕಾರಣಗೋಸ್ಕರ ನಾವು…

ಮಕ್ಕಳ ಕಲಿಕಾ ಮೇಳ ಸಂಭ್ರಮ…ವೈವಿಧ್ಯ ಪರಿಕಲ್ಪನೆ ಕೌಶಲ್ಯ ಅನಾವರಣ..!

ಆಲಮಟ್ಟಿ: ಅಲ್ಲಿ ಗಣಿತ, ಭಾಷೆ ಸೇರಿ ನಾನಾ ವಿಷಯಗಳ ಕಠಿಣ ಪರಿಕಲ್ಪನೆಗಳನ್ನು ನಾನಾ ಹೊಸ ಹೊಸ…

ಧಾರವಾಡದ ಜಿಟಿಟಿಸಿಯಲ್ಲಿ ಪೋಸ್ಟ್ ಡಿಪ್ಲೋಮಾ ಇನ್ನ ಟುಲ್ ಡಿಸೈನ್ ಕೋರ್ಸ್ ಗೆ ಪ್ರವೇಶ ಪ್ರಾರಂಭ

 ಧಾರವಾಡ: ವಿದ್ಯಾಕಾಶಿ ಧಾರವಾಡ ನಗರದಲ್ಲಿ ಜಿಟಿಟಿಸಿ ವತಿಯಿಂದ ಡಿಪ್ಲೋಮಾ ಕೊರ್ಸಗಳಿಗೆ ಪ್ರವೇಶ ಪ್ರಾರಂಭವಾಗಿದ್ದು. ಅರ್ಹತೆ:  ಡಿಪ್ಲೋಮಾ…