ಮಡಿಕೇರಿ: ಕೊಡಗು ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರಿಂದ ಕೊರೋನಾ ಸೋಂಕು ಹರಡುವುದನ್ನು ನಿಯಂತ್ರಿಸಲು ನೂತನ ಮಾರ್ಗಸೂಚಿ ಸಿದ್ಧಪಡಿಸಲು ಸೂಚಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.

ಮಡಿಕೇರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ನಡೆದ ಉನ್ನತ ಮಟ್ಟದ ಅಧಿಕಾರಿಗಳ ಸಭೆ ಬಳಿಕ ಮಾತನಾಡಿದ ಅವರು, ದಸರಾ ಹಿನ್ನೆಲೆಯಲ್ಲಿ ಜಿಲ್ಲೆಗೆ ಪ್ರವಾಸಿಗರು ಬರುತ್ತಾರೆ. ಎಲ್ಲ ಪ್ರವಾಸಿಗರಿಗೆ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಬೇಕು. ಪ್ರವಾಸಿ ತಾಣಗಳಲ್ಲಿ ಪೊಲೀಸ್, ಕಂದಾಯ ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ನಿಯೋಜಿಸಿ ಆರೋಗ್ಯ ತಪಾಸಣೆ ಸಹಿತ ಇತರೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಇದಕ್ಕಾಗಿ ಮಾರ್ಗಸೂಚಿ ಸಿದ್ಧಪಡಿಸಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದರು.

ಜಿಲ್ಲೆಯ ಆರೋಗ್ಯ ಸೇವೆಯಲ್ಲಿ ಕೆಲ ನ್ಯೂನ್ಯತೆಗಳಿವೆ. ಬೆಂಗಳೂರಿಗೆ ಹಿಂತಿರುಗಿದ ತಕ್ಷಣ ಹಿರಿಯ ಅಧಿಕಾರಿಗಳ ಜತೆ ಮಾತನಾಡಿ ಸರಿಪಡಿಸಲು ಕ್ರಮ ಕೈಗೊಳ್ಳಲಾಗುವುದು. ವೈದ್ಯರ ಕೊರತೆ ನೀಗಿಸಲು ಕೂಡ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಮೊದಲು ಕೊಡಗು ಜಿಲ್ಲೆ ಹಸಿರು ವಲಯದಲ್ಲಿತ್ತು. ಅನ್ ಲಾಕ್ ಬಳಿಕ ಸೋಂಕಿನ ಪ್ರಮಾಣ ಮತ್ತು ಸಾವಿನ ಪ್ರಮಾಣ ಹೆಚ್ಚಿದೆ. ದಸರಾ ಮಹೋತ್ಸವದ ಹಿನ್ನೆಲೆಯಲ್ಲಿ ಕೆಲ ನಿರ್ಧಾರಗಳನ್ನು ಕೈಗೊಳ್ಳಬೇಕಿದೆ. ಮುಂದಿನ ವಾರ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಬಂದು ಮತ್ತೊಮ್ಮೆ ಪರಿಶೀಲನೆ ನಡೆಸಲಾಗುವುದು. ಕಟ್ಟುನಿಟ್ಟಾಗಿ ಮಾರ್ಗಸೂಚಿ ಜಾರಿಗೊಳಿಸಲು ಸ್ಥಳಿಯ ಶಾಸಕರು ಸಲಹೆ ನೀಡಿದ್ದಾರೆ. ಇದು ಸ್ವಾಗತಾರ್ಹ ಎಂದರು

Leave a Reply

Your email address will not be published. Required fields are marked *

You May Also Like

ಬಾಗಲಕೋಟೆ ಜಿಲ್ಲೆಯಲ್ಲಿಂದು ಕೊರೊನಾ ಪಾಸಿಟಿವ್! 06

ಬಾಗಲಕೋಟೆ: ಜಿಲ್ಲೆಯಲ್ಲಿಂದು 06 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 161ಕ್ಕೆ…

ಆಹಾರದ ಅವಶ್ಯಕತೆ

ಪ್ರತಿ ಜೀವಿಯ ಜೀವನಾಧಾರವೇ ಅದರ ಹೊಟ್ಟೆಯ ಹಸಿವು, ಆಹಾರ ಇಲ್ಲದೇ ಹೋದರೆ ಪ್ರಾಣ ಪಕ್ಷಿಯೇ ಹಾರಿಹೋಗುವುದಂತು ಗ್ಯಾರಂಟಿ ಎನ್ನುವದಂತು ದಿಟ್ಟ ಎನ್ನುವ ವಿಚಾರಗಳನ್ನು ತಮ್ಮ ಮುಂದೆ ಹಂಚಿಕೊಳ್ಳುತ್ತ, ಇಂದಿನ ದಿನಮಾನಗಳಲ್ಲಿ ಮನುಷ್ಯರಿಗೆ ಆಹಾರ ಅವಶ್ಯಕತೆ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ 1945 ರಲ್ಲಿ ವಿಶ್ವಸಂಸ್ಥೆಯ ಕೃಷಿ ವಿಭಾಗದ ಸ್ಥಾಪನೆಯ ಸವಿ ನೆನಪಿಗಾಗಿ ಅ.16 ರ ಈ ದಿನವನ್ನು ಹಸಿವಿನ ವಿರುದ್ಧ ಹೋರಾಟಕ್ಕಾಗಿ ಆರಂಭಿಸಲಾಯಿತು. 1981 ರ ನಂತರ ಈ ದಿನವನ್ನು ವ್ಯಾಪಕವಾಗಿ ವಿಶ್ವ ಆಹಾರ ದಿನವನ್ನಾಗಿ ವಿಶ್ವಾದ್ಯಾಂತ ಆಚರಣೆ ಮಾಡುವ ಮೂಲಕ ಜಾರಿಗೆ ತರಲಾಯಿತು. ಅಂದರೆ ಅ.16 ರಂದು ವಿಶ್ವಾದ್ಯಾಂತ ವಿಶ್ವ ಆಹಾರ ದಿನವನ್ನಾಗಿ ನಾವೆಲ್ಲರೂ ಸೇರಿ ಆಚರಣೆ ಮಾಡುತ್ತಿದ್ದೇವೆ. ಆದಕಾರಣ ಈ ದಿನದ ನಿಮಿತ್ತ ಭಕ್ಷ್ಯ ಭೋಜನವನ್ನು ಸವಿದು, ಆಹಾರ ಸಂಸ್ಕೃತಿಯನ್ನು ಸಂಭ್ರಮದಿಂದ ನೆನಪಿಸಿ, ತಿಂದು ತೇಗಲು ಈ ದಿನವನ್ನು ಆಚರಿಸಲು ಕರೆ ಕೊಡಲಾಗಿದೆ ಎಂದು ಭಾವಿಸಿದ್ದರೆ. ಅದು ನೂರಕ್ಕೆ ನೂರರಷ್ಟು ತಪ್ಪು. ಜಾಗತಿಕ ಮಟ್ಟದಲ್ಲಿ ಆಹಾರದ ಕೊರತೆ ಕುರಿತು ಜಾಗೃತಿ, ಅಭಿಯಾನ ಜೊತೆಗೆ ಹಸಿವಿನಿಂದ ಸಾಯುವವರ ನೋವಿನ ವಿಚಾರಗಳನ್ನು ಜನಸಾಮಾನ್ಯರಿಗೆ ತಿಳಿಸುವ, ತಲುಪಿಸುವ ಏಕೈಕ ಉದ್ದೇಶದ ಜೊತೆಗೆ ಆಹಾರ ಸಮಸ್ಯೆ ಕುರಿತು ವ್ಯಾಪಕವಾಗಿ ಅರಿವು ಮೂಡಿಸುವ ನಿಟ್ಟಿನಲ್ಲಿ ಮತ್ತು ಪೌಷ್ಟಿಕ ಆಹಾರ ಮಹತ್ವದ ಬಗ್ಗೆ ಜನತೆಗೆ ಜನಜಾಗೃತಿ ಅಭಿಯಾನ, ಗೋಷ್ಠಿ, ವಿಚಾರ ಸಂಕೀರ್ಣ ಹಾಗೂ ಇನ್ನಿತರ ಕಾರ್ಯಕ್ರಮಗಳ ಮೂಲಕ ತಿಳಿ ಹೇಳಲು ಆಹಾರ ದಿನವನ್ನು ಆಚರಣೆ ಮಾಡಲಾಗುತ್ತಿದೆ.

ನಾಗಾವಿ ತಾಂಡದಲ್ಲಿ ಜಲಜೀವನ ಯೋಜನೆಗೆ ಚಾಲನೆ

ತಾಲೂಕಿನ ನಾಗಾವಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ನಾಗಾವಿ ತಾಂಡದಲ್ಲಿ ಹಾಗೂ ಬಿಂಕದಕಟ್ಟಿ, ಮಲ್ಲಸಮುದ್ರ ಗ್ರಾಮಗಳಲ್ಲಿ ಜಲ ಜೀವನ ಮಿಷನ್ ಯೋಜನೆಯ ಕಾಮಗಾರಿಗೆ ಭಾನುವಾರ ಶಾಸಕ ಎಚ್.ಕೆ.ಪಾಟೀಲ ಭೂಮಿ ಪೂಜೆ ನೆರವೇರಿಸಿದರು.

ಕೊರೊನಾ ಭಯ – ಹಲವೆಡೆ ಸ್ವಯಂ ಪ್ರೇರಿತ ಬಂದ್!

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಆತಂಕ ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಹಲವಡೆ ಸ್ವಯಂ…