ಲಕ್ಷ್ಮೇಶ್ವರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ನಿವಾಸ ಹಾಗೂ ಕಚೇರಿ ಮೇಲೆ ಸಿಬಿಐ ದಾಳಿ ಖಂಡಿಸಿ ಲಕ್ಷ್ಮೇಶ್ವರ ಕಾಂಗ್ರೆಸ್ ಕಾರ್ಯಕರ್ತರು ಪಟ್ಟಣ್ಣದ ಶಿಗ್ಲಿ ನಾಕಾದಲ್ಲಿ ಟೈರಗೆ ಬೆಂಕಿ ಹಂಚಿ ಪ್ರತಿಭಟನೆ ಮಾಡಿದರು.

ಲಕ್ಷ್ಮೇಶ್ವರ ಪಟ್ಟಣದಲ್ಲಿ ಅಖಿಲ ಕರ್ನಾಟಕ ಡಿ.ಕೆ.ಶಿ ಅಭಿಮಾನಿ ಬಳಗದಿಂದ ಶಿಗ್ಲಿ ವೃತ್ತದಲ್ಲಿ ಪ್ರತಿಭಟಿಸಿದರು.

ಈ ವೇಳೆ ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಬಿ.ಎಸ್.ಯಡಿಯೂರಪ್ಪ ಹಾಗೂ ಶ್ರೀಯೋಗಿ ಆದಿತ್ಯನಾಥ, ಉತ್ತರ ಪ್ರದೇಶದ ಮಹಿಳೆ ಮೇಲೆ ಅತ್ಯಾಚಾರ ಮುಚ್ಚುಹಾಕಲು ಹೊರಟಿರುವ ಬಿಜೆಪಿ ಸರಕಾಕ್ಕೆ ನಾಚಿಕೆ ಯಾಗಬೇಕು ಎಂದು ತಮ್ಮ ಆಕ್ರೋಶ ಹೊರಹಾಕಿದರು.

ಚುನಾವಣಾ ಸಂದರ್ಭದಲ್ಲಿ ಕಾಂಗ್ರೆಸ್ ಹತ್ತಿಕ್ಕಲು ಬಿಜೆಪಿ ರಣತಂತ್ರ ಮಾಡ್ತಿದೆ ಅಂತ ಆರೋಪಿಸಿದರು.

ಎಸಿಬಿ, ಸಿಬಿಐ ಸರ್ಕಾರದ ಕೈಗೊಂಬೆಯಾಗಿವೆ. ದೇಶದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಇದು ಹೀಗೆ ಮುಂದುವರೆದ್ರೆ ಮುಂದಿನ ಚುನಾವಣೆಯಲ್ಲಿ ಜನ ತಕ್ಕಪಾಠ ಕಲಿಸಲಿದ್ದಾರೆ ಅಂತ ಬಿಜೆಪಿ ವಿರುದ್ಧ ಕಿಡಿಕಾರಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಎಸ್.ಪಿ.ಬಳಿಗಾರ, ವಿ.ಜಿ.ಪಡಗೇರಿ, ಟಿ.ಈಶ್ವರ, ಜಯಕ್ಕ ಕಳ್ಳಿ, ವಿರುಪಾಕ್ಷಿ ನಂದೆಣ್ಣವರ, ರಾಮು ಗಡದವರ, ರಾಮು ಅಡಗಿನಮನಿ, ಭಾಗ್ರಶ್ರಿ ಬಾಬಣ್ಣ, ಲಕ್ಷ್ಮವ ಕುರಿ, ಚನ್ಬಪ್ಪ ಜಗಲಿ, ನೀಲಪ್ಪ ಶೆರಶೂರಿ, ವಿರೇಂದ್ರ ಪಾಟೀಲ್, ಶೇಖಣ್ಣ ಕಾಳಿ, ಅಬಜ್ಜ ರೀತಿ, ಸತೀಶ ಬಾರ್ಕಿ, ಬಾಬಣ್ಣ ಅಳವಂಡಿ, ಅಂಬರೀಶ ತೆಂಬದಮನಿ, ಎಂ.ಎಸ್.ದೊಡ್ಡಗೌಡ್ರು, ಶಾಹಾಭಜಾನ ಹವಾಲ್ದಾರ ಸೇರಿ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

You May Also Like

ಆರೋಗ್ಯ ಸಚಿವರಿಂದಲೇ ಲಾಕ್ ಡೌನ್ ಉಲ್ಲಂಘನೆ: ಬೇಲಿಯೇ ಎದ್ದು ಹೊಲ ಮೇಯ್ದರೆ ಹೇಗೆ…?

ಕೋರೋನಾ ಲಾಕ್ ಡೌನ್ ನಡುವೆಯೇ ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರೇ ಲಾಕ್ ಡೌನ್ ಉಲ್ಲಂಘನೆ ಆರೋಪಕ್ಕೆ ಗುರಿಯಾಗಿದ್ದಾರೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಪರಶುರಾಂಪುರದಲ್ಲಿ ತಾವು ಭಾಗಿಯಾಗಿದ್ದ ಕಾರ್ಯಕ್ರಮದಲ್ಲಿ ನೂರಾರು ಜನರು ಸೇರಿ ಸಚಿವ ಶ್ರೀರಾಮುಲು ಅವರಿಗೆ ಹೂಮಳೆ ಗೈದಿದ್ದಾರೆ.

ಗದಗ ಜಿಲ್ಲೆಗೂ ಒಂದು ವಾರದ ಲಾಕ್ಡೌನ್?

ಸಿಎಂ ಯಡಿಯೂರಪ್ಪ ಸೋಂಕು ಹೆಚ್ಚುತ್ತಿರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆ ವಿಡೀಯೋ ಸಂವಾದ ನಡೆಸುತ್ತಿದ್ದಾರೆ. ಅಭಿಪ್ರಾಯ ಆಧರಿಸಿ ಲಾಕ್ ಡೌನ್ ಜಾರಿ ಮಾಡಬಹುದು ಎನ್ನಲಾಗಿದೆ.

ವಿವಿಧ ಸಂಘಟನೆಗಳಿಂದ 916ನೇ ಬಸವ ಜಯಂತಿ ಆಚರಣೆ

ಬಸವಣ್ಣನವರ ತತ್ವಗಳು ಸರ್ವಕಾಲಿ ಸತ್ಯಗಳಾಗಿವೆ ಉತ್ತರಪ್ರಭ ಸುದ್ದಿ ಗದಗ : ಶ್ರೀ ತೋಂಟದಾರ್ಯ ಮಠದ ಪೂಜ್ಯ…

ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

ಬಾವಿಗೆ ಹಾರಿ ಮಹಿಳೆಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಮಾಳಮಡ್ಡಿ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಸುಮಾ ಜೋಶಿ (35) ಮೃತಪಟ್ಟ ಮಹಿಳೆ ಯಾಗಿದ್ದಾಳೆ.