ಮತ್ತೆ ಬಾಲ ಬಿಚ್ಚಿದ ಪಾಕ್ – ಓರ್ವ ಸೇನಾಧಿಕಾರಿ ಹುತಾತ್ಮ

ಜಮ್ಮು: ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣಾ ರೇಖೆಯ ಬಳಿ ಪಾಕಿಸ್ತಾನ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆಯ ಓರ್ವ ಕಿರಿಯ ಸೇನಾಧಿಕಾರಿ(ಜೆಸಿಒ) ಹುತಾತ್ಮರಾಗಿದ್ದಾರೆ ಎಂದು ಸೇನೆಯ ಮೂಲಗಳು ತಿಳಿಸಿವೆ.

ರಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್‌ ನ ಬಾಬಖೋರಿಯ ಗಡಿ ನಿಯಂತ್ರಣಾ ರೇಖೆಯಲ್ಲಿ ಸಂಜೆ ಪಾಕಿಸ್ತಾನ ಪಡೆಗಳು ಅಪ್ರಚೋದಿತ ಗುಂಡಿನ ದಾಳಿ ನಡೆಸಿವೆ. 

ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆಯ ಓರ್ವ ಜೆಸಿಓ ತೀವ್ರವಾಗಿ ಗಾಯಗೊಂಡಿದ್ದು, ನಂತರ ಸಾವನ್ನಪ್ಪಿದ್ದಾರೆ ಎಂದು ಸೇನೆಯ ಮೂಲ ತಿಳಿಸಿದ್ದು, ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ ಎಂದು ತಿಳಿದು ಬಂದಿದೆ. 

Exit mobile version