ತುಮಕೂರು: ಇಲ್ಲಿನ ವಿಶ್ವ ವಿದ್ಯಾಲಯ ವ್ಯಾಪ್ತಿಯ ಬಿಇಡಿ., ವಿದ್ಯಾರ್ಥಿಗಳ ಎರಡನೇ ಸೆಮಿಸ್ಟರ್ ಪರಿಕ್ಷೇಗಳನ್ನು ರದ್ದುಗೊಳಿಸಿ ಮುಂದಿನ ಸೆಮಿಸ್ಟರ್ ಗೆ ತೇರ್ಗಡೆ ಮಾಡಬೇಕು ಎಂದು ಒತ್ತಾಯಿಸಿ SFI ನಿಂದ ತುಮಕೂರು ವಿಶ್ವವಿದ್ಯಾಲಯದ ಮುಂದೆ ಪ್ರತಿಭಟನೆ ನಡೆಯಿತು.

ಪ್ರತಿಭಟನೆಗೆ ಮಣಿದ ತುಮಕೂರು ವಿವಿಯ ಕುಲಸಚಿವ (ಪರೀಕ್ಷಾಂಗ) ಕೊಟ್ರೇಶ್ ಪ್ರತಿಭಟನೆಯ ಸ್ಥಳದಲ್ಲೇ ನಿರ್ಧಾರ ತೆಗೆದುಕೊಂಡು, ಪರೀಕ್ಷೆಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದರು.

ಈ ಮೊದಲು ಈ ತಿಂಗಳ ಕೊನೆಯ ದಿನಾಂಕದೊಳಗೆ ಪರೀಕ್ಷಾ ಶುಲ್ಕ ಪಾವತಿಸಲು ಆದೇಶ ಮತ್ತು ಅಕ್ಟೋಬರ್ -19 ರಿಂದ ಬಿಇಡ್ ವಿದ್ಯಾರ್ಥಿಗಳ ಪರೀಕ್ಷೆ ನಡೆಸಲು ತುಮಕೂರು ವಿವಿ ನಿರ್ಣಯಿಸಿತ್ತು. ಎಸ್ಎಫ್ಐ ಹೋರಾಟದಿಂದ ಈ ಆದೇಶಗಳನ್ನು ವಿಶ್ವವಿದ್ಯಾಲಯ ವಾಪಸ್ ಪಡೆದಿದೆ.

ಈ ಕುರಿತು ಪ್ರತಿಕ್ರಿಯಿಸಿದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ SFI ರಾಜ್ಯ ಕಾರ್ಯದರ್ಶಿ ವಾಸುದೇವ ರೆಡ್ಡಿ, ಇದು #SFI_ಹೋರಾಟಕ್ಕೆ ಸಂದ ಜಯ ಎಂದು ಹರ್ಷ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಎಸ್ ಎಫ್ ಐ ಜಿಲ್ಲಾದ್ಯಕ್ಷ ಈ ಶಿವಣ್ಣ, ಡಿವೈಎಫ್ಐ ಮುಖಂಡ ಜಿ.ದರ್ಶನ್, ಬಿಇಡಿ ವಿದ್ಯಾರ್ಥಿಗಳಾದ ಲೋಕೇಶ್ ಸಿ, ಸೌಂದರ್ಯ, ಆಶಾ, ಕಿರಣ, ತಿಲಕ, ಮಹೇಶ್, ಪುಟ್ಟರಾಜು, ಹನುಮಂತರಾಜು ಹಾಗೂ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

You May Also Like

ತೋಂಟದಾರ್ಯ ಇಂಜಿನೀಯರಿಂಗ್ ಕಾಲೇಜಿನ 07 ವಿದ್ಯಾರ್ಥಿಗಳು ಟಿಸಿಎಸ್ ಕಂಪನಿಗೆ ಆಯ್ಕೆ

ಗದಗ: ನಗರದ ತೋಂಟದಾರ್ಯ ಇಂಜಿನೀಯರಿಂಗ್ ಕಾಲೇಜಿನ 07 ವಿದ್ಯಾರ್ಥಿಗಳು ಟಿಸಿಎಸ್ ಕಂಪನಿಗೆ ಆಯ್ಕೆಯಾಗಿದ್ದು. ಪ್ರತಿಷ್ಠಿತ ಬಹುರಾಷ್ಟಿಯ…

ರಾಜ್ಯಕ್ಕೆ 7ನೇ ರ‍್ಯಾಂಕ್ ಪಡೆದ ಚಡಚಣ್ಣವರ

ಸ್ಥಳೀಯ ಜ್ಞಾನ ಜ್ಯೋತಿ ಕೊಚಿಂಗ್ ಸೆಂಟರ್ ವಿದ್ಯಾರ್ಥಿ ಮಂಜುನಾಥ ಚಡಚಣ್ಣವರ ಮೊರಾರ್ಜಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 7ನೇ ರ‍್ಯಾಂಕ್ ಹಾಗೂ ಜಿಲ್ಲೆಗೆ 2ನೇ ಪಡೆದುಕೊಂಡಿದ್ದಾರೆ.

ಅತಿಥಿ ಉಪನ್ಯಾಸಕರಿಗೆ ಶುಭ ಸುದ್ದಿ- ಸೇವೆ ಮುಂದುವರೆಸಿ ಆದೇಶ

ಅತಿಥಿ ಉಪನ್ಯಾಸಕರ ಸೇವೆಯನ್ನು 2020-21 ನೇ ಸಾಲಿಗೂ ಮುಂದುವರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಸದ್ದಿಲ್ಲದೆ ಸಾಗುತ್ತಿದೆ ಶೈಕ್ಷಣಿಕ ಮತ್ತು ಸಾಮಾಜಿಕ ಕ್ರಾಂತಿ:ಸಾವಿತ್ರಿ ಬಾಯಿ ಫುಲೆ” ಕಲಿಕಾ ಕೇಂದ್ರ

ಕೋರೊನಾ ಈ ಹೆಸರಿನ ಮಹಾಮಾರಿ ಯಾರಿಗೆ ಗೊತ್ತಿಲ್ಲ ದೇಶದಲ್ಲಿ ಈ ಮಹಾಮಾರಿಯಿಂದ ಆರ್ಥಿಕವಾಗಿ ಸಾಮಾಜಿಕವಾಗಿ ಸಂಪ್ರದಾಯಿಕವಾಗಿ…