ತುಮಕೂರು: ಇಲ್ಲಿನ ವಿಶ್ವ ವಿದ್ಯಾಲಯ ವ್ಯಾಪ್ತಿಯ ಬಿಇಡಿ., ವಿದ್ಯಾರ್ಥಿಗಳ ಎರಡನೇ ಸೆಮಿಸ್ಟರ್ ಪರಿಕ್ಷೇಗಳನ್ನು ರದ್ದುಗೊಳಿಸಿ ಮುಂದಿನ ಸೆಮಿಸ್ಟರ್ ಗೆ ತೇರ್ಗಡೆ ಮಾಡಬೇಕು ಎಂದು ಒತ್ತಾಯಿಸಿ SFI ನಿಂದ ತುಮಕೂರು ವಿಶ್ವವಿದ್ಯಾಲಯದ ಮುಂದೆ ಪ್ರತಿಭಟನೆ ನಡೆಯಿತು.

ಪ್ರತಿಭಟನೆಗೆ ಮಣಿದ ತುಮಕೂರು ವಿವಿಯ ಕುಲಸಚಿವ (ಪರೀಕ್ಷಾಂಗ) ಕೊಟ್ರೇಶ್ ಪ್ರತಿಭಟನೆಯ ಸ್ಥಳದಲ್ಲೇ ನಿರ್ಧಾರ ತೆಗೆದುಕೊಂಡು, ಪರೀಕ್ಷೆಗಳನ್ನು ರದ್ದುಗೊಳಿಸುವುದಾಗಿ ಘೋಷಿಸಿದರು.

ಈ ಮೊದಲು ಈ ತಿಂಗಳ ಕೊನೆಯ ದಿನಾಂಕದೊಳಗೆ ಪರೀಕ್ಷಾ ಶುಲ್ಕ ಪಾವತಿಸಲು ಆದೇಶ ಮತ್ತು ಅಕ್ಟೋಬರ್ -19 ರಿಂದ ಬಿಇಡ್ ವಿದ್ಯಾರ್ಥಿಗಳ ಪರೀಕ್ಷೆ ನಡೆಸಲು ತುಮಕೂರು ವಿವಿ ನಿರ್ಣಯಿಸಿತ್ತು. ಎಸ್ಎಫ್ಐ ಹೋರಾಟದಿಂದ ಈ ಆದೇಶಗಳನ್ನು ವಿಶ್ವವಿದ್ಯಾಲಯ ವಾಪಸ್ ಪಡೆದಿದೆ.

ಈ ಕುರಿತು ಪ್ರತಿಕ್ರಿಯಿಸಿದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ SFI ರಾಜ್ಯ ಕಾರ್ಯದರ್ಶಿ ವಾಸುದೇವ ರೆಡ್ಡಿ, ಇದು #SFI_ಹೋರಾಟಕ್ಕೆ ಸಂದ ಜಯ ಎಂದು ಹರ್ಷ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಎಸ್ ಎಫ್ ಐ ಜಿಲ್ಲಾದ್ಯಕ್ಷ ಈ ಶಿವಣ್ಣ, ಡಿವೈಎಫ್ಐ ಮುಖಂಡ ಜಿ.ದರ್ಶನ್, ಬಿಇಡಿ ವಿದ್ಯಾರ್ಥಿಗಳಾದ ಲೋಕೇಶ್ ಸಿ, ಸೌಂದರ್ಯ, ಆಶಾ, ಕಿರಣ, ತಿಲಕ, ಮಹೇಶ್, ಪುಟ್ಟರಾಜು, ಹನುಮಂತರಾಜು ಹಾಗೂ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *

You May Also Like

ಖಾಸಗಿ ಶಾಲಾ ಶಿಕ್ಷಕರ ಗೋಳು ಕೇಳುವವರು ಯಾರು?: ಶಿಕ್ಷಕರ ಸಮಸ್ಯೆಗೆ ಸ್ಪಂದಿಸಬೇಕಿದೆ ಸರ್ಕಾರ

ಲಾಕ್ ಡೌನ್ ಹಿನ್ನೆಲೆ ಜೂನ್ 1 ಕ್ಕೆ ಆರಂಭವಾಗಬೇಕಿದ್ದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಈವರೆಗೆ ಆರಂಭವಾಗಿಲ್ಲ. ಇದರಿಂದ ಖಾಸಗಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ತೀವ್ರ ತೊಂದರೆಗೀಡಾಗಿದ್ದಾರೆ.

ಅತಿಥಿ ಉಪನ್ಯಾಸಕರಿಗೆ ಶುಭ ಸುದ್ದಿ- ಸೇವೆ ಮುಂದುವರೆಸಿ ಆದೇಶ

ಅತಿಥಿ ಉಪನ್ಯಾಸಕರ ಸೇವೆಯನ್ನು 2020-21 ನೇ ಸಾಲಿಗೂ ಮುಂದುವರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ದಿನವೂ 24 ಕಿಮೀ ಸೈಕಲ್ ಹೊಡ್ದು ಕಲಿತಳು:10ನೇತರಗತಿಯಲ್ಲಿ ಶೇ. 98.75 ಗಳಿಸಿದಳು!

ಭೋಪಾಲ್: ಹತ್ತನೆ ಕ್ಲಾಸ್ ಪರೀಕ್ಷೆಯಲ್ಲಿ ಬರೊಬ್ಬರಿ 98.75 ಪರ್ಸೆಂಟು ಮಾಡಿದ ಈ ಛೋಟಿ, ರಾಜ್ಯಕ್ಕೆ 8ನೇ…

ಶನಿವಾರವೂ ಶಿಕ್ಷಣ ಇಲಾಖೆಗೆ ರಜೆ

ಎರಡು ಮತ್ತು ನಾಲ್ಕನೇ ಶನಿವಾರ ಮಾತ್ರ ಶಿಕ್ಷಣ ಇಲಾಖೆ ನೌಕರರಿಗೆ ರಜೆ ಘೋಶಿಸಲಾಗಿತ್ತು. ಆದರೆ ಇದೀಗ ಸಾರ್ವಜನಿಕ ಶಿಕ್ಷಣ ಇಲಾಖೆ ತಿಂಗಳ ಎಲ್ಲ ಶನಿವಾರವೂ ರಜೆ ಘೋಷಣೆ ಮಾಡಿದೆ.