ಮಜ್ಜೂರು ಕೆರೆಗೆ ತಹಶೀಲ್ದಾರ ಭೇಟಿ

Shirahatti tahashildar visit

majju tahashildara visit

ಶಿರಹಟ್ಟಿ: ಕಳೆದ ನಾಲ್ಕೈದು ದಿನಗಳ ಹಿಂದೆ  ಸುರಿದ ಭಾರೀ ಮಳೆಗೆ ಮಜ್ಜೂರು ಗ್ರಾಮದ ಕೆರೆ ಕೋಡಿ ಬಿದ್ದು ಅಪಾರ ಪ್ರಮಾಣದ ಬೆಳೆ ಹಾನಿಯಾದ ಹೊಲಗಳಿಗೆ ತಹಶೀಲ್ದಾರ ಭೇಟಿ ನೀಡಿದರು.

ಸ್ಥಳೀಯ ರೈತರ ಮನವಿಗೆ ಸ್ಪಂದಿಸಿ ಮಂಗಳವಾರ ತಹಶೀಲ್ದಾರ ಯಲ್ಲಪ್ಪ ಗೊಣೆಣ್ಣವರ ಸ್ಥಳಕ್ಕೆ ಭೇಟಿ ನೀಡಿದರು. ಕೆರೆ ಕೊಡಿ ಬಿದ್ದು  ಕೆರೆಯ ಸುತ್ತಮುತ್ತಿಲಿನ ಬಹುತೇಕ ಜಮೀನುಗಳಿಗೆ ನೀರು ರಭಸವಾಗಿ ನುಗ್ಗಿದ್ದರಿಂದ

ಬೆಳೆಗಳು ಸಂಪೂರ್ಣವಾಗಿ ಹಾಳಾಗಿವೆ. ಅಲ್ಲದೆ ಪ್ರಸ್ತುತವಾಗಿ ಹೊಲಗಳಲ್ಲಿ ನೀರು ಶೇಖರಣೆ ಆಗಿರುವುದರಿಂದ  ಅಲ್ಪಸ್ಪಲ್ಪ ಇರುವ ಬೆಳೆ ಕೂಡಾ ನಾಶವಾಗುತ್ತಿದ್ದು, ರೈತರಿಗೆ ಸಮಸ್ಯೆಯಾಗಿರುವುದು ತಾಲೂಕಾಡಳಿತ ಗಮನಕ್ಕೆ ಬಂದಿರುತ್ತದೆ. ಇದನ್ನು ಗಂಬೀರವಾಗಿ ಪರಿಗಣಿಸಿ ಸರಕಾರದಿಂದ ಸಿಗುವ ಪರಿಹಾರವನ್ನು ಕೊಡಿಸಲಾಗುತ್ತದೆ ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಕಂದಾಯ ನಿರಿಕ್ಷಕ ಮಗದುಮ್ ಹಾಗೂ ರೈತರು ಹಾಜರಿದ್ದರು.

Exit mobile version