ನವದೆಹಲಿ : ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಆತಂಕ ಮೂಡಿಸುತ್ತಿದೆ. ಒಂದೇ ದಿನ ದೇಶದಲ್ಲಿ 88,600 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿರುವ ಸೋಂಕಿತರ ಸಂಖ್ಯೆ 9,56,402ಕ್ಕೆ ಏರಿಕೆ ಕಂಡಿದೆ. 

ಕಳೆದ 24 ಗಂಟೆಗಳಲ್ಲಿ ಮಹಾಮಾರಿಗೆ 1,124 ಜನರು ಸಾವನ್ನಪ್ಪಿದ್ದಾರೆ. ಈ ಮೂಲಕ ಇದುವರೆಗೂ ಸಾವನ್ನಪ್ಪಿದವರ ಸಂಖ್ಯೆ 94,503ಕ್ಕೆ ಏರಿಕೆ ಕಂಡಿದೆ. ದೇಶದಲ್ಲಿ 59,92,533 ಪ್ರಕರಣಗಳು ವರದಿಯಾಗಿವೆ. ಸೆ. 2 ರಿಂದ ಪ್ರತಿ ನಿತ್ಯ ದೇಶದಲ್ಲಿ ಒಂದು ಸಾವಿರಕ್ಕೂ ಅಧಿಕ ಜನರು ಸಾವನ್ನಪ್ಪುತ್ತಿದ್ದಾರೆ. 

ಕೊರೊನಾ ಸೋಂಕಿತರ ಸಂಖ್ಯೆ ಏರಿಕೆ ಪ್ರಮಾಣ ಶೇ. 6.3ರಿಂದ ಶೇ. 8.9ಕ್ಕೆ ಏರಿಕೆ ಕಂಡಿದೆ. ಈ ಆಘಾತಕಾರಿ ಅಂಶವನ್ನು ಆರೋಗ್ಯ ಸಚಿವಾಲಯದ ಅಂಕಿ – ಅಂಶಗಳು ಸ್ಪಷ್ಟವಾಗಿ ಹೇಳುತ್ತಿವೆ. ಇನ್ನು ಗುಣಮುಖ ಪ್ರಮಾಣ ಶೇ. 82.1ರಷ್ಟಿದೆ.

ಮಹಾರಾಷ್ಟ್ರ, ಕರ್ನಾಟಕ, ಆಂಧ್ರ ಪ್ರದೇಶ, ಕೇರಳ ಮತ್ತು ತಮಿಳುನಾಡು ರಾಜ್ಯಗಳಿಂದಲೇ ಅತ್ಯಧಿಕ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಈ ಐದು ರಾಜ್ಯಗಳಲ್ಲಿಯೇ ನಿನನೆ ಒಂದೇ ದಿನ 49,176 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಒಟ್ಟು ಪ್ರಕರಣಗಳಲ್ಲಿ ಶೇ. 55ರಷ್ಟು ಪಾಲು ಈ ಐದು ರಾಜ್ಯಗಳದ್ದಾಗಿದೆ.

Leave a Reply

Your email address will not be published. Required fields are marked *

You May Also Like

ಕೊರೊನಾ ಚಿಕಿತ್ಸಾ ವೆಚ್ಚಕ್ಕೆ ಸಿದ್ದರಾಮಯ್ಯ ವಿರೋಧ

ಬೆಂಗಳೂರು: ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸೆಗಾಗಿ @CMofKarnataka ನಿಗದಿಪಡಿಸಿರುವ ವೆಚ್ಚದ ವಿವರ ಸೋಂಕಿತರಿಗೆ ಹೃದಯಾಘಾತವಾಗುವಂತಿದೆ. ಒಂದು…

ಸುರೇಶ್ ಕುಟುಂಬಕ್ಕೆ ಪರಿಹಾರ, ಪ್ರಕರಣ ಸಿಬಿಐ ತನಿಖೆಗೆ ಒತ್ತಾಯ

ಕಲಬುರಗಿಯಲ್ಲಿ ನಡದ ಘಟನೆಯಲ್ಲಿ ಗೋಂಧಳಿ ಸಮಾಜದ ಸುರೇಶ್ ಎಂಬ ವ್ಯಕ್ತಿ ಕೊಲೆಯಾಗಿದ್ದು, ಸರ್ಕಾರ ತನ ಕುಟುಂಬಕ್ಕೆ 30 ಲಕ್ಷ ಪರಿಹಾರ ಹಾಗು ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಗೋಂಧಳಿ ಸಮಾಜದ ರಾಜ್ಯಾಧ್ಯಕ್ಷ ವಿಠಲ್ ಗಣಾಚಾರಿ ಒತ್ತಾಯಿಸಿದರು.

ಲಕ್ಷ್ಮೇಶ್ವರ:ಬತ್ತಿದ ಬೋರ್ ವೆಲ್ ನಲ್ಲಿ ಜಲಲ ಧಾರೆ…!

ಅಂತರ್ಜಲ ಹೆಚ್ಚಳದಿಂದ ಬತ್ತಿದ ಕೊಳವೆ ಬಾವಿಯಲ್ಲಿ ನೀರು ಚಿಮ್ಮುತ್ತಿದೆ. ಇದರಿಂದ ರೈತರಲ್ಲಿ ಸಂತಸ ಮೂಡಿದೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಲಕ್ಷ್ಮೇಶ್ವರ ತಾಲೂಕಿನ ಅಡರಕಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ.

ಶಾಲೆಗಳಿಗೆ ತಹಶಿಲ್ದಾರ ಸತೀಶ್ ಕೂಡಲಗಿ ಭೇಟಿ- ಕಾನೂನು ಸುವ್ಯವಸ್ಥೆ ಪರಿಶೀಲನೆ ಖುಷಿಯಿಂದ ಶಾಲೆಗೆ ಮರಳಿದ ಮಕ್ಕಳು

ಚಿತ್ರ ವರದಿ : ಗುಲಾಬಚಂದ ಜಾಧವಆಲಮಟ್ಟಿ : ಹಿಜಾಬ್- ಕೇಸರಿ ಜಟಾಪಟಿ ವಿವಾದದಿಂದ ಆತಂಕ ಸೃಷ್ಟಿಯಾಗಿ…