ಲಖನೌ : ದೇಶದಲ್ಲಿ ಸದ್ಯ ಹತ್ರಾಸ್ ಬಾಲಕಿಯ ಅತ್ಯಾಚಾರಕ್ಕೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಪ್ರಕರಣವನ್ನು ಉತ್ತರ ಪ್ರದೇಶ ಸರ್ಕಾರ ಸಿಬಿಐಗೆ ವಹಿಸಿದೆ.

ಅತ್ಯಾಚಾರ ಹಾಗೂ ಹತ್ಯೆಗೀಡಾದ ಸಂತ್ರಸ್ತೆಯ ರಕ್ತ ಸಂಬಂಧಿ ಮತ್ತು ಮುಖ್ಯ ಆರೋಪಿ ಸಂದೀಪ್ ಠಾಕೂರ್ ನಡುವೆ 100 ಬಾರಿ ಕರೆ ಮಾಡಿ ಮಾತನಾಡಿರುವುದು ತಿಳಿದು ಬಂದಿದೆ. 

ಬಾಲಕಿಯ ಸಹೋದರ ಮತ್ತು ಮುಖ್ಯ ಆರೋಪಿ ಸಂದೀಪ್ ಠಾಕೂರ್ ಅವರ ಹೆಸರಿನಲ್ಲಿ ನೋಂದಾಯಿಸಲಾದ ದೂರವಾಣಿ ಸಂಖ್ಯೆಯಿಂದ ಅಕ್ಟೋಬರ್ 2019 ಮತ್ತು ಮಾರ್ಚ್ 2020ರ ನಡುವೆ 100 ಬಾರಿ ಮಾತನಾಡಿದ್ದಾರೆ ಎಂದು ತಿಳಿದು ಬಂದಿದೆ. 

ಹತ್ರಾಸ್ ಜಿಲ್ಲೆಯ ಬೂಲ್ಗರಿ ಗ್ರಾಮದಲ್ಲಿ ತಾಯಿಯೊಂದಿಗೆ ಹೊಲಕ್ಕೆ ಹೋಗಿದ್ದ ಬಾಲಕಿಯನ್ನು ಪಾಪಿಗಳು ಹೊತ್ತೊಯ್ದು ಅತ್ಯಾಚಾರ ನಡೆಸಿದ್ದರು. ಗಂಭೀರವಾಗಿ ಗಾಯಗೊಂಡಿದ್ದು ಬಾಲಕಿಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಜೆಎಲ್ ಎನ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಳ. 

ಆಗ್ರಾದ ಎಫ್‌ ಎಸ್‌ ಎಲ್ ನೀಡಿದ ವರದಿಯನ್ನು ಉಲ್ಲೇಖಿಸಿ ಪೊಲೀಸರು ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿಲ್ಲ ಎಂದು ಹೇಳಿದ್ದರು. ಸದ್ಯ ಈ ಕುರಿತು ತನಿಖೆ ನಡೆಯುತ್ತಿದೆ.

Leave a Reply

Your email address will not be published. Required fields are marked *

You May Also Like

ಕೊರೊನಾ ಮಹಾಮಾರಿಗೆ ವಿಲ ವಿಲ ಎನ್ನುತ್ತಿರುವ ಸಿಲಿಕಾನ್ ಸಿಟಿ!

ಕೊರೊನಾ ಮಹಾಮಾರಿಗೆ ವಿಲ ವಿಲ ಎನ್ನುತ್ತಿರುವ ಸಿಲಿಕಾನ್ ಸಿಟಿ!ಬೆಂಗಳೂರು : ರಾಜ್ಯದಲ್ಲಿ ಕೂಡ ಕೊರೊನಾ ಅಬ್ಬರ…

ಶಾಕಿಂಗ್ ನ್ಯೂಸ್: ಕೊರೋನಾ ಗಾಳಿ ಮೂಲಕ ಹರಡುತ್ತೆ, ಉಸಿರಾಡಿದಾಗ ದೇಹ ಸೇರುತ್ತೆ!

ನವದೆಹಲಿ: ಕೊರೋನಾದ ಸಣ್ಣ ಕಣಗಳು ಗಾಳಿಯಲ್ಲೇ ಇದ್ದು, ಜನದಟ್ಟಣೆಯ ವಾಸಸ್ಥಳಗಳಲ್ಲಿ ಅದು ಉಸಿರಾಟದ ಮೂಲಕವೇ ದೇಹ…

ತಿರುಪತಿ ತಿಮ್ಮಪ್ಪನ ದರ್ಶನ ಯಾವಾಗ?

ಕೇಂದ್ರ ಸರ್ಕಾರ ಜೂ. 30ರ ವರೆಗೂ ಲಾಕ್ ಡೌನ್ ಘೋಷಣೆ ಮಾಡಿದೆ. ಅಲ್ಲದೇ, ಈ ಬಾರಿ ದೇವಸ್ಥಾನಗಳನ್ನು ತೆರೆಯಲು ಅನುಮತಿ ನೀಡಿದ್ದು, ಅದಕ್ಕಾಗಿ ಈ ವಾರವೇ ಹೊಸ ಮಾರ್ಗಸೂಚಿಗಳನ್ನು ಪ್ರಕಟಿಸಲಿದೆ.

ಹಳೆಯ ಧಾರಾವಾಹಿಗಳಿಗೆ ಮೊರೆ: ದಾಖಲೆ ಸೇರಿದ ರಾಮಾಯಣ ಧಾರಾವಾಹಿ

ಲಾಕ್ ಡೌನ್ ಹಿನ್ನೆಲೆ ಬಹುತೇಕ ಚಾಲ್ತಿಯಲ್ಲಿರು ಧಾರಾವಾಹಿ ಶೂಟಿಂಗ್ ಕಾರ್ಯ ಕೂಡ ನಿಂತಿದೆ. ಇದರಿಂದಾಗಿ ಡಿಡಿ ವಾಹಿನಿ ಮತ್ತೆ ರಾಮಾಯಣ ಧಾರಾವಾಹಿ ಮರುಪ್ರಸಾರ ಮಾಡಿದ್ದು ವೀಕ್ಷಕರ ಸಂಖ್ಯೆಯಲ್ಲಿ ದಾಖಲೆ ಮೆರೆದಿದೆ.