ಇನ್ನಾದರೂ ಮೌನ ಮುರಿದು ಜನರ ಪ್ರಶ್ನೆಗಳಿಗೆ ಉತ್ತರಿಸಿ – ರಾಹುಲ್ ಗಾಂಧಿ!

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮತ್ತೊಮ್ಮೆ ಗುಡುಗಿದ್ದಾರೆ. 

ಅಟಲ್‍ ಟನಲ್ ನಲ್ಲಿ ಕೈ ಬೀಸಿದ ದೃಶ್ಯಗಳ ಕುರಿತಂತೆ ಪ್ರಧಾನಿ ಮೋದಿಯವರನ್ನು ರಾಹುಲ್ ಟೀಕಿಸಿದ್ದಾರೆ. ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ ಮೌನ ವಹಿಸಿದ್ದು ಸರಿಯಲ್ಲ. ಪ್ರಧಾನಿಯವರೇ ಸುರಂಗದಲ್ಲಿ ಮಾತ್ರ ಕೈ ಬೀಸುವುದನ್ನು ನಿಲ್ಲಿಸಿ. ಗಂಭೀರ ಸಮಸ್ಯೆಗಳ ಬಗ್ಗೆ ಮೌನ ಮುರಿದು ಮಾತನಾಡಿ ಎಂದು ಒತ್ತಾಯಿಸಿದ್ದಾರೆ.

ಲಡಾಖ್ ಗಡಿ ಭಾಗದಲ್ಲಿ ಸುಮಾರು 1,200 ಚ.ಕಿ.ಮೀ ಪ್ರದೇಶವನ್ನು ಚೀನಾ ಅತಿಕ್ರಮಿಸಿದೆ. ಆದರೆ ನಮ್ಮ ಹೇಡಿ ಪ್ರಧಾನಿ ಒಂದಿಂಚು ಭೂಮಿಯನ್ನೂ ಯಾರೂ ಅತಿಕ್ರಮಿಸಿಕೊಂಡಿಲ್ಲ ಎಂದು ಸುಳ್ಳು ಹೇಳಿ ಜನರನ್ನು ತಪ್ಪು ದಾರಿಗೆ ಎಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಗುಡುಗಿದ್ದಾರೆ. 

Exit mobile version