ಬೆಂಗಳೂರು: ಕೋವಿಡ್ 19 ಸೋಂಕು ಕರ್ನಾಟಕದಲ್ಲಿ ಕಾಣಿಸಿಕೊಂಡ ದಿನದಿಂದ ಸರ್ಕಾರವು ಸೋಂಕನ್ನು ತಡೆಯಲು ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ. ಕಾಲಕಾಲಕ್ಕೆ ಕೇಂದ್ರದ ಮಾರ್ಗಸೂಚಿಗಳನ್ವಯ ರಾಜ್ಯದಲ್ಲಿಯೂ ಸಹ ಲಾಕ್ ಡೌನ್ ವಿಧಿಸುವುದರಲ್ಲದೆ, ಕಡ್ಡಾಯವಾಗಿ ಮಾಸ್ಕ ಬಳಕೆ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯಗೋಳಿಸಲಾಗಿದೆ.

ಕೋವಿಡ್ 19 ಸೋಂಕನ್ನು ತಡೆಯಲು ಇದುವರೆಗೂ ‌ಯಾವುದೇ ಲಸಿಕೆ, ಇರದೇ‌ ಇರುದರಿಂದ ಪ್ರಸ್ತುತ ಮಾಸ್ಕ‌ ಬಳಕೆ, ಸ್ಯಾನಿಟೈಸ್ ಉಪಯೋಗ, ಸಾಮಾಜಿಕ ಅಂತರ ಕಾಯ್ದುಕೊಳ್ಳವುದು ಅನಿವಾರ್ಯ ವಾಗಿದೆ. ಇತ್ತಿಚಿನ‌ ಆದೇಶದಲ್ಲಿ ಸರ್ಕಾರವು ನಗರ ಪ್ರದೇಶದಲ್ಲಿ ಮಾಸ್ಕ ಬಳಸದಿದ್ದರೆ ರೂ.1000 ದಂಡ ಮತ್ತು ಗ್ರಾಮೀಣ ಪ್ರದೇಶದಲ್ಲಿ ರೂ.500 ದಂಡ‌ ವಿಧಿಸಲು ಕ್ರಮ ಕೈಗೊಳ್ಳಲಾಗಿರುತ್ತದೆ.

ಆದರೆ ಸಾರ್ವಜನಿಕ ವಿರೋಧ ಮತ್ತು ತಜ್ಞರ ‌ಅಭಿಪ್ರಾಯ ಹಿನ್ನೆಲೆಯಲ್ಲಿ ದಂಡದ ಪ್ರಮಾಣದಲ್ಲಿ ನಗರ ಪ್ರದೇಶಗಳಲ್ಲಿ ರೂ.1000 ದಿಂದ ರೂ.200 ರೂ.ಮತ್ತು ‌ಗ್ರಾಮೀಣ ಪ್ರದೇಶದಲ್ಲಿ 500 ರೂ.ದಿಂದ 100 ರೂ.ಗೆ ಇಳಿಸಲು ತೀರ್ಮಾನಿಸಲಾಗಿರುತ್ತದೆ.

ಪ್ರಧಾನಿ ನರೇಂದ್ರ ಮೋದಿ ಹೇಳಿತುವಂತೆ ಜೀವ ಮತ್ತು ‌ಜೀವನ ಎರಡನ್ನು ಸರಿದೂಗಿಸಿಕೊಂಡು‌ ಹೋಗಲು ಸರ್ಕಾರವು ಸರ್ವ ಪ್ರಯತ್ನಗಳನ್ನು ಮಾಡುತ್ತಿದ್ದು, ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಮಾಸ್ಕ,‌ ಸ್ಯಾನಿಟೈಸರ್ ಬಳಕೆ ಹಾಗೂ ಸಾಮಾಜಿಕ ಅಂತರವನ್ನು ಕಾಯ್ದುಕೋಳ್ಳುವುದರ ಮೂಲಕ ಸರ್ಕಾರದೊಂದಿಗೆ ಸಹಕರಿಸುಂತೆ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯ ಹೆಲ್ತ್ ಕಾರ್ಡ್ ಮೂಲಕ 5 ಲಕ್ಷ ರೂ ಗಳವರೆಗೂ ಉಚಿತ ಆರೋಗ್ಯ ಸೇವೆ ಪಡೆದುಕೊಳ್ಳಬಹುದು: ಡಾ: ಕೆ.ಸುಧಾಕರ್

ಉತ್ತರಪ್ರಭ ಸುದ್ದಿ ಬಾಗೇಪಲ್ಲಿ: 100 ದಿನಗಳ ಅವಧಿಯಲ್ಲಿ ರಾಜ್ಯದ 5 ಲಕ್ಷ 20 ಸಾವಿರ ನಾಗರೀಕರಿಗೆ…

ಆದರಹಳ್ಳಿಗೆ ಹಾದಿ ಯಾವುದು..? ದೇವಿಹಾಳಕ್ಕೆ ಹೋಗುವ ದಾರಿ ಎಲ್ಲಿ?

ರಸ್ತೆಗಳು ನಿರ್ಮಾಣ ಮಾಡಿದ ಮೇಲೆ ನಿರ್ಮಿಸಿದ ರಸ್ತೆಗಳ ಮೇಲೆ ಇಷ್ಟೆ ಸಾಮಾರ್ಥ್ಯದ ವಾಹನಗಳು ಓಡಾಡಬೇಕು ಎನ್ನುವ ನಿಯಮವಿದೆ. ಆದರೆ ಅದ್ಯಾವ ನಿಉಮವನ್ನು ಪಾಲಿಸದೇ ಇರುವ ಕಾರಣಕ್ಕೆ ರಸ್ತೆಯೊಂದು ಹಳ್ಳ ಹಿಡಿದಿದೆ.

ಖಾಸಗಿ ಶಾಲಾ ಶಿಕ್ಷಕರ ಗೋಳು ಕೇಳುವವರು ಯಾರು?: ಶಿಕ್ಷಕರ ಸಮಸ್ಯೆಗೆ ಸ್ಪಂದಿಸಬೇಕಿದೆ ಸರ್ಕಾರ

ಲಾಕ್ ಡೌನ್ ಹಿನ್ನೆಲೆ ಜೂನ್ 1 ಕ್ಕೆ ಆರಂಭವಾಗಬೇಕಿದ್ದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಈವರೆಗೆ ಆರಂಭವಾಗಿಲ್ಲ. ಇದರಿಂದ ಖಾಸಗಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ತೀವ್ರ ತೊಂದರೆಗೀಡಾಗಿದ್ದಾರೆ.