ಶ್ರೀನಗರ : ಉಗ್ರರಿಂದ ಬಿಜೆಪಿ ನಾಯಕನನ್ನು ರಕ್ಷಿಸಿ ಪೊಲೀಸ್ ಪೇದೆ ಮೊಹಮ್ಮದ್ ಅಲ್ತಾಫ್ ಹುಸೈನ್ ಹುತಾತ್ಮರಾಗಿದ್ದಾರೆ.

ಬಿಜೆಪಿ ನಾಯಕ ಗುಲಾಮ್ ಖಾದೀರ್ ಅವರು ತಮ್ಮ ಭದ್ರತಾ ಸಿಬ್ಬಂದಿಯೊಂದಿಗೆ ಕಂಗನ್ ನಗರಕ್ಕೆ ಹೊರಟಿದ್ದ ಸಂದರ್ಭದಲ್ಲಿ ಅವರ ಮೇಲೆ ಉಗ್ರರು ದಾಳಿ ನಡೆಸಿದ್ದರು. ಈ ಸಂದರ್ಭದಲ್ಲಿ ಭದ್ರತಾ ಪಡೆಯಲ್ಲಿದ್ದ ಮೊಹಮ್ಮದ್ ಅವರನ್ನು ರಕ್ಷಿಸಿ ಹುತಾತ್ಮರಾಗಿದ್ದಾರೆ.

ಬಿಜೆಪಿ ನಾಯಕ ಖಾದೀರ್ ಅವರ ರಕ್ಷಣೆಗಾಗಿ ಇದ್ದ ಪೊಲೀಸ್ ತಂಡದಲ್ಲಿ ಮೊಹಮ್ಮದ್ ಕೂಡ ಇದ್ದರು. ಉಗ್ರರು ದಾಳಿ ನಡೆಸುತ್ತಿದ್ದಂತೆ ಪೊಲೀಸರು ಕೂಡ ದಾಳಿ ನಡೆಸಿದ್ದಾರೆ. ಗುಂಡಿನ ಚಕಮಕಿಗೆ ಹೆದರದ ಮೊಹಮ್ಮದ್ ಅಲ್ತಾಫ್ ಓರ್ವ ಉಗ್ರನನ್ನು ಬಲಿ ಪಡೆದು ತಾವು ಬಲಿಯಾಗಿದ್ದಾರೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮೊಹಮ್ಮದ್ ಅವರನ್ನು ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಹುತಾತ್ಮರಾಗಿದ್ದಾರೆ.

ಮೃತ ಉಗ್ರನನ್ನು ಪುಲ್ವಾಮದ ಶಬ್ಬೀರ್ ಎಂದು ಗುರುತಿಸಲಾಗಿದೆ. ಮೊಹಮ್ಮದ್ ಅಲ್ತಾಫ್ ಶ್ರೀನಗರ ನಿವಾಸಿಯಾಗಿದ್ದಾರೆ. ಇವರು ಕಳೆದ 9 ವರ್ಷಗಳ ಹಿಂದೆಯೇ ಪೊಲೀಸ್ ಆಗಿದ್ದರು. ಮೂರು ತಿಂಗಳಿಂದ ಇವರನ್ನು ಖಾದಿರ್ ಅವರ ಭದ್ರತಾ ಸಿಬ್ಬಂದಿಯಾಗಿ ನೇಮಕ ಮಾಡಲಾಗಿತ್ತು. ಇವರಿಗೆ ಪತ್ನಿ, ತಂದೆ – ತಾಯಿ ಹಾಗೂ ಒಂದು ವರ್ಷದ ಮಗು ಇದೆ.

Leave a Reply

Your email address will not be published. Required fields are marked *

You May Also Like

ಮಹಿಳಾ ಸಚಿವೆ ಕುರಿತು ಹೇಳಿದ ಹೇಳಿಕೆಗೆ ಮಾಜಿ ಸಿಎಂ ಹೇಳಿದ್ದೇನು?

ಭೋಪಾಲ್ : ಬಿಜೆಪಿ ಜನರು, ಮತದಾರರನ್ನು ತಪ್ಪು ದಾರಿಗೆಳೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವ್ಹಾಣ್ ಅವರಿಗೆ ಮಾಜಿ ಸಿಎಂ ಕಮಲ್ ನಾಥ್ ಪತ್ರ ಬರೆದಿದ್ದಾರೆ.

ಕಾರ್ಮಿಕರನ್ನು ಗಮ್ಯ ಸ್ಥಾನಕ್ಕೆ ತಲುಪಿಸುತ್ತಿರುವ ರೈಲ್ವೆ ಇಲಾಖೆ!

ಲಾಕ್ ಡೌನ್ ಹಿನ್ನೆಲೆಯಲ್ಲಿ ಸಿಲುಕಿದ್ದ ಕಾರ್ಮಿಕರು, ವಿದ್ಯಾರ್ಥಿಗಳು ಹಾಗೂ ಯಾತ್ರಾರ್ಥಿಗಳನ್ನು ಸಾಗಿಸುವ ಕಾರ್ಯ ನಡೆದಿದೆ. ವಿಶೇಷ ರೈಲಿನಲ್ಲಿ ಸುಮಾರು 1200 ವಲಸಿಗರನ್ನು ಹೊತ್ತ ರೈಲು ತನ್ನ ಪ್ರಯಾಣ ಪ್ರಾರಂಭಿಸಿದೆ.

ಸೈನಿಕರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ: ಪ್ರಧಾನಿ ಮೋದಿ

ನವದೆಹಲಿ: ಭಾರತ – ಚೀನಾ ಗಡಿಯಲ್ಲಿ ಮುಸುಕಿನ ಗುದ್ದಾಟ ಶುರುವಾಗಿದೆ. ಈ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಿರುವ…

ದಿನದಿಂದ ದಿನಕ್ಕೆ ದೇಶದಲ್ಲಿ ಹೆಚ್ಚಾಗುತ್ತಿದೆ ಕೊರೊನಾ ಆತಂಕ!

ಬೆಂಗಳೂರು: ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಹಲವು ದೇಶಗಳಲ್ಲಂತೂ ಇದರ ನಾಗಾಲೋಟ…