ನವದೆಹಲಿ : ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಆತಂಕ ಮೂಡಿಸುತ್ತಿದೆ. ಕಳೆದ 24 ಭಾರತ ದೇಶದಲ್ಲಿ ಸೋಂಕಿತರು ಬೇಗ ಚೇತರಿಸಿಕೊಳ್ಳುತ್ತಿದ್ದಾರೆ.

ಕೊರೊನಾ ವಾರಿಯರ್ಸ್ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವುದು ಇದರಿಂದ ತಿಳಿದು ಬರುತ್ತಿದೆ. ಸದ್ಯ ದೇಶದಲ್ಲಿ 9,07,883 ಸಕ್ರಿಯ ಪ್ರಕರಣಗಳಿವೆ. ಒಟ್ಟು ಸೋಂಕಿತರ ಸಂಖ್ಯೆ 67,57,132ಕ್ಕೆ ಏರಿಕೆ ಕಂಡಿದೆ. ದೇಶದಲ್ಲಿ ಇದುವರೆಗೂ 8,22,71,657 ಜನ ಕೊರೊನಾ ಟೆಸ್ಟ್ ಗೆ ಒಳಪಟ್ಟಿದ್ದಾರೆ.ಗಂಟೆಗಳಲ್ಲಿ 72,049 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಮಹಾರಾಷ್ಟ್ರ ರಾಜ್ಯ ಮಹಾಮಾರಿಗೆ ಹೆಚ್ಚು ಪೆಟ್ಟು ತಿನ್ನುತ್ತಿದೆ. ಉಳಿದಂತೆ ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡು ಹಾಗೂ ಉತ್ತರ ಪ್ರದೇಶ ರಾಜ್ಯಗಳಿವೆ. ಮಹಾರಾಷ್ಟ್ರ (14,65,911), ಆಂಧ್ರ ಪ್ರದೇಶ (7,29,307), ಕರ್ನಾಟಕ (6,57,705), ತಮಿಳುನಾಡು(6,30,408) ಮತ್ತು ಉತ್ತರ ಪ್ರದೇಶ (4,20,937) ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಮಹಾರಾಷ್ಟ್ರ ರಾಜ್ಯವೊಂದರಲ್ಲಿಯೇ ಮಹಾಮಾರಿಗೆ 38,717 ಜನರು ಬಲಿಯಾಗಿದ್ದಾರೆ.

ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 67 ಲಕ್ಷದ ಗಡಿ ದಾಟಿದೆ. ಅಲ್ಲದೇ, ಈ ಮಾಹಾಮಾರಿಗೆ ಒಂದೇ ದಿನ 986 ಜನರು ಬಲಿಯಾಗಿದ್ದಾರೆ. ಕೊರೊನಾ ಪೀಡಿತ ರಾಷ್ಟ್ರಗಳಲ್ಲಿ ಭಾರತ ಎರಡನೇ ಸ್ಥಾನದಲ್ಲಿ ಮುಂದುವರೆದಿದೆ. ಪ್ರಾರಂಭದಿಂದಲೂ ಕೊರೊನಾ ಹೊಡೆತಕ್ಕೆ ಸಿಲುಕಿರುವ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ ಇಳಿಮುಖ ಕಾಣುತ್ತಿಲ್ಲ. ಅಲ್ಲಿನ ಸೋಂಕಿತರ ಸಂಖ್ಯೆ 74,97,847ಕ್ಕೆ ಏರಿಕೆ ಕಂಡಿದೆ. ಅಮೆರಿಕದಲ್ಲಿ 43,34,605 ಸಕ್ರಿಯ ಪ್ರಕರಣಗಳಿದ್ದು, 2,10,852 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.

ಆದರೆ, ನೆಮ್ಮದಿಯ ಸಂಗತಿ ಎಂದರೆ ಈ ವರ್ಷಾಂತ್ಯಕ್ಕೆ ಕೊರೊನಾ ಲಸಿಕೆ ಸಿದ್ಧವಾಗಲಿದೆ ಎಂದು ವಿಶ್ವಸಂಸ್ಥೆ ಹೇಳಿದೆ. ಒಂದು ವೇಳೆ ಔಷಧಿ ಸಿಕ್ಕರೆ, ಅಮೆರಿಕ, ಭಾರತ, ಬ್ರೆಜಿಲ್, ರಷ್ಯಾ, ಸ್ಪೇನ್, ಪೆರು, ಬ್ರಿಟನ್ ಸೇರಿದಂತೆ ಕೊರೊನಾ ಹೊಡೆತಕ್ಕೆ ತೀವ್ರವಾಗಿ ಬಲಿಯಾಗಿರುವ ರಾಷ್ಟ್ರಗಳಲ್ಲಿನ ಜನರು ನೆಮ್ಮದಿಯ ಉಸಿರು ಬಿಡಲಿದ್ದಾರೆ.

Leave a Reply

Your email address will not be published. Required fields are marked *

You May Also Like

ಇಂದು ಸಾರಿಗೆ ಸಚಿವರ ಗದಗ ಜಿಲ್ಲಾ ಪ್ರವಾಸ

ಉತ್ತರಪ್ರಭಗದಗ: ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಬಿ. ಶ್ರೀರಾಮುಲು ಅವರು ಗದಗ ಜಿಲ್ಲಾ…

ಮಕ್ಕಳಿಗೆ ಕೊರೊನಾ ಚಿಕಿತ್ಸೆ ಬಗ್ಗೆ ಸರ್ಕಾರದ ಬಳಿ ಪ್ರೊಟೊಕಾಲ್ ಇಲ್ವಂತೆ – ಶಾಸಕ ಎಚ್.ಕೆ.ಪಾಟೀಲ್ ಆರೋಪ

ಗದಗ: ಸರ್ಕಾರಕ್ಕೆ ಎರಡನೇ ಅಲೆಯ ಬಗ್ಗೆಯೇ ಇನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ಅಂಥದ್ರಲ್ಲಿ ಮೂರನೇ ಅಲೆಯ ಬಗ್ಗೆ ಏನು ಸಿದ್ಧತೆ ಮಾಡಿಕೊಂಡಿಲ್ಲ. ಹಾವೇರಿ ಜಿಲ್ಲೆಯಲ್ಲಿ 721 ಮಕ್ಕಳಿಗೆ ಪಾಸಿಟಿವ್ ದೃಢಪಟ್ಟಿದೆ. ಆದರೆ ಈವರೆಗೆ ಸರ್ಕಾರದಿಂದ ಮಕ್ಕಳಿಗಾಗಿ ಚಿಕಿತ್ಸೆಯ ಪ್ರೊಟೊಕಾಲ್ ಬಂದಿಲ್ಲ ಎಂದು ಶಾಸಕ ಎಚ್.ಕೆ.ಪಾಟೀಲ್ ಬೇಸರ ವ್ಯಕ್ತಪಡಿಸಿದರು.

ರಾಜ್ಯದಲ್ಲಿಂದು ನಿಲ್ಲದ ಕೊರೊನಾ ಸೋಂಕಿನ ಸ್ಪೋಟ : ಇಂದು 1925 ಪಾಸಿಟಿವ್!

ಬೆಂಗಳೂರು: ಸತತ 3 ದಿನಗಳಿಂದ 1500ಕ್ಕಿಂತ ಹೆಚ್ಚು ಪಾಸಿಟಿವ್ ಪ್ರಕರಣಗಳನ್ನು ಕಾಣತ್ತಿರುವ ರಾಜ್ಯದಲ್ಲಿ ಇಂದು 1,925…

7 ದಿನಗಳಿಂದ ಗ್ರಾ.ಪಂ ನೌಕರರ ಕಾರ್ಯ ಸ್ಥಗಿತ ; ಸಾರ್ವಜನಿಕರಿಗೆ ಪರದಾಟ ; ಧರಣಿ ‘ಕೈ’ ಬಿಡದ ಗ್ರಾ.ಪಂ ಒಕ್ಕೂಟ..!

ಉತ್ತರಪ್ರಭ ಗದಗ :ಕಳೆದ 7 ದಿನಗಳಿಂದ ರಾಜ್ಯಾದ್ಯಂತ ಗ್ರಾ.ಪಂ ಅಭಿವೃದ್ಧಿ ಅಧಿಕಾರಿಗಳು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತನ…