ನವದೆಹಲಿ : ದೇಶದಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಆತಂಕ ಮೂಡಿಸುತ್ತಿದೆ. ಕಳೆದ 24 ಭಾರತ ದೇಶದಲ್ಲಿ ಸೋಂಕಿತರು ಬೇಗ ಚೇತರಿಸಿಕೊಳ್ಳುತ್ತಿದ್ದಾರೆ.

ಕೊರೊನಾ ವಾರಿಯರ್ಸ್ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವುದು ಇದರಿಂದ ತಿಳಿದು ಬರುತ್ತಿದೆ. ಸದ್ಯ ದೇಶದಲ್ಲಿ 9,07,883 ಸಕ್ರಿಯ ಪ್ರಕರಣಗಳಿವೆ. ಒಟ್ಟು ಸೋಂಕಿತರ ಸಂಖ್ಯೆ 67,57,132ಕ್ಕೆ ಏರಿಕೆ ಕಂಡಿದೆ. ದೇಶದಲ್ಲಿ ಇದುವರೆಗೂ 8,22,71,657 ಜನ ಕೊರೊನಾ ಟೆಸ್ಟ್ ಗೆ ಒಳಪಟ್ಟಿದ್ದಾರೆ.ಗಂಟೆಗಳಲ್ಲಿ 72,049 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ.

ಮಹಾರಾಷ್ಟ್ರ ರಾಜ್ಯ ಮಹಾಮಾರಿಗೆ ಹೆಚ್ಚು ಪೆಟ್ಟು ತಿನ್ನುತ್ತಿದೆ. ಉಳಿದಂತೆ ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡು ಹಾಗೂ ಉತ್ತರ ಪ್ರದೇಶ ರಾಜ್ಯಗಳಿವೆ. ಮಹಾರಾಷ್ಟ್ರ (14,65,911), ಆಂಧ್ರ ಪ್ರದೇಶ (7,29,307), ಕರ್ನಾಟಕ (6,57,705), ತಮಿಳುನಾಡು(6,30,408) ಮತ್ತು ಉತ್ತರ ಪ್ರದೇಶ (4,20,937) ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಮಹಾರಾಷ್ಟ್ರ ರಾಜ್ಯವೊಂದರಲ್ಲಿಯೇ ಮಹಾಮಾರಿಗೆ 38,717 ಜನರು ಬಲಿಯಾಗಿದ್ದಾರೆ.

ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 67 ಲಕ್ಷದ ಗಡಿ ದಾಟಿದೆ. ಅಲ್ಲದೇ, ಈ ಮಾಹಾಮಾರಿಗೆ ಒಂದೇ ದಿನ 986 ಜನರು ಬಲಿಯಾಗಿದ್ದಾರೆ. ಕೊರೊನಾ ಪೀಡಿತ ರಾಷ್ಟ್ರಗಳಲ್ಲಿ ಭಾರತ ಎರಡನೇ ಸ್ಥಾನದಲ್ಲಿ ಮುಂದುವರೆದಿದೆ. ಪ್ರಾರಂಭದಿಂದಲೂ ಕೊರೊನಾ ಹೊಡೆತಕ್ಕೆ ಸಿಲುಕಿರುವ ಅಮೆರಿಕದಲ್ಲಿ ಸೋಂಕಿತರ ಸಂಖ್ಯೆ ಇಳಿಮುಖ ಕಾಣುತ್ತಿಲ್ಲ. ಅಲ್ಲಿನ ಸೋಂಕಿತರ ಸಂಖ್ಯೆ 74,97,847ಕ್ಕೆ ಏರಿಕೆ ಕಂಡಿದೆ. ಅಮೆರಿಕದಲ್ಲಿ 43,34,605 ಸಕ್ರಿಯ ಪ್ರಕರಣಗಳಿದ್ದು, 2,10,852 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.

ಆದರೆ, ನೆಮ್ಮದಿಯ ಸಂಗತಿ ಎಂದರೆ ಈ ವರ್ಷಾಂತ್ಯಕ್ಕೆ ಕೊರೊನಾ ಲಸಿಕೆ ಸಿದ್ಧವಾಗಲಿದೆ ಎಂದು ವಿಶ್ವಸಂಸ್ಥೆ ಹೇಳಿದೆ. ಒಂದು ವೇಳೆ ಔಷಧಿ ಸಿಕ್ಕರೆ, ಅಮೆರಿಕ, ಭಾರತ, ಬ್ರೆಜಿಲ್, ರಷ್ಯಾ, ಸ್ಪೇನ್, ಪೆರು, ಬ್ರಿಟನ್ ಸೇರಿದಂತೆ ಕೊರೊನಾ ಹೊಡೆತಕ್ಕೆ ತೀವ್ರವಾಗಿ ಬಲಿಯಾಗಿರುವ ರಾಷ್ಟ್ರಗಳಲ್ಲಿನ ಜನರು ನೆಮ್ಮದಿಯ ಉಸಿರು ಬಿಡಲಿದ್ದಾರೆ.

Leave a Reply

Your email address will not be published. Required fields are marked *

You May Also Like

ನಿಮ್ಮ ಜಿಲ್ಲೆ ಯಾವ ಝೋನ್ ನಲ್ಲಿದೆ ಅಂತ ತಿಳಿದುಕೊಳ್ಳಿ

ಮೇ.3ರ ನಂತರ ರಾಜ್ಯದ 6 ಜಿಲ್ಲೆಗಳನ್ನು ಹೊರತು ಪಡಿಸಿ ಉಳಿದ ಜಿಲ್ಲೆಗಳನ್ನು ಗ್ರೀನ್ ಹಾಗೂ ಯಲ್ಲೋ ಝೋನ್ ಗಳಾಗಿ ವಿಂಗಡಿಸಲಾಗಿದೆ. ರೆಡ್ ಮತ್ತು ಯಲ್ಲೋ ಝೋನ್ ಗಳಲ್ಲಿ ಮೇ.3ರ ನಂತರ ಲಾಕ್ ಡೌನ್ ಸ್ವಲ್ಪ ಸಡಿಲಗೊಳ್ಳುವ ಸಾದ್ಯತೆ ಇದೆ. ಯಾವ ಜಿಲ್ಲೆ ಯಾವ ಝೋನ್ ನಲ್ಲಿದೆ ಎನ್ನುವ ಮಾಹಿತಿ ಇಲ್ಲಿದೆ..

ಕೋವಿಶೀಲ್ಡ್ ಎರಡನೇ ಡೋಸ್ ಪಡೆದ ಡಿಸಿ

ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಭಾನುವಾರ ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಶೀಲ್ಡ್ ಎರಡನೇ ಡೋಸ್ ಪಡೆದಿದ್ದಾರೆ. 28 ದಿನಗಳ ಹಿಂದೆ ಮೊದಲ ಡೋಸ್ ಪಡೆದಿದ್ದ ಅವರು, ಇದೀಗ ಎರಡನೇ ಡೋಸ್ ಪಡೆದುಕೊಂಡಿದ್ದಾರೆ.

ಬಸ್ ನಿಲ್ದಾಣದಲ್ಲಿ ಶೌಚಾಲಯ ಅವ್ಯವಸ್ಥೆ ಸಾರಿಗೆ ಅಧಿಕಾರಿ ತರಾಟೆಗೆ

ಪಟ್ಟಣದ ಬಸ್ ನಿಲ್ದಾಣದಲ್ಲಿರುವ ಶೌಚಾಲಯದ ಅವ್ಯವಸ್ಥೆಯನ್ನು ಸಾರಿಗೆ ಇಲಾಖೆ ಸಂಚಾರಿ ನಿರೀಕ್ಷಕರಿಗೆ ತೋರಿಸುವ ಮೂಲತ ಜೈ ಭೀಮ ಆರ್ಮಿ ಸಂಘಟನೆ ಕಾರ್ಯಕರ್ತರು ತರಾಟೆಗೆ ತೆಗೆದುಕೊಂಡ ಘಟನೆ ಶನಿವಾರ ನಡೆದಿದೆ.

ನಿಧನ: ಗಿರಿಜಮ್ಮ ಬಸನಗೌಡ ಪಾಟೀಲ್

ಮಾಜಿ ಸಚಿವ ಎಸ್.ಎಸ್.ಪಾಟೀಲ್ ಇವರ ಅಣ್ಣಂದಿರಾದ ದಿ.ಮುದುಕನಗೌಡ ಭರಮನಗೌಡ ಪಾಟೀಲ್ ಇವರ ಹಿರಿಯ ಸುಪುತ್ರ ದಿ.ಬಸನಗೌಡ ಮುದುಕನಗೌಡ ಪಾಟೀಲ್ ಇವರ ಧರ್ಮಪತ್ನಿ ಗಿರಿಜಮ್ಮ ಬಸನಗೌಡ ಪಾಟೀಲ್(77) ಇವರು ಭಾನುವಾರ ನಿಧನ ಹೊಂದಿದರು.