ಲಕ್ನೋ : ಹತ್ರಾಸ್ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೊಂದು ಆಘಾತಕಾರಿ ಸಂಗತಿ ಹೊರ ಹಾಕಿದ್ದಾರೆ. 

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಗ್ರಾಮದ ಸಂದೀಪ್ ಸಿಂಗ್ ಪ್ರಮುಖ ಆರೋಪಿಯಾಗಿದ್ದಾನೆ. ಆದರೆ, ಈ ವ್ಯಕ್ತಿಯೊಂದಿಗೆ ಬಾಲಕಿ ನಿರಂತರ ಸಂಪರ್ಕದಲ್ಲಿ ಇದ್ದಳು ಎಂದು ಪೊಲೀಸರಿಗೆ ತನಿಖೆಯ ವೇಳೆ ತಿಳಿದು ಬಂದಿದೆ. ತನಿಖೆ ಕೈಗೊಂಡಿದ್ದ ಪೊಲೀಸರು, ಸಂತ್ರಸ್ತೆಯ ಕುಟುಂಬ ಮತ್ತು ಆರೋಪಿ ಸಂದೀಪ್ ನ ಫೋನ್ ಟ್ರ್ಯಾಕ್ ಮಾಡಿದ್ದರು.

ಸಂತ್ರಸ್ತೆಯ ಮೇಲಿನ ಅತ್ಯಾಚಾರದ ಪ್ರಮುಖ ಆರೋಪಿಯಾಗಿರುವ 19 ವರ್ಷದ ಬಾಲಕನೊಂದಿಗೆ ಸಂತ್ರಸ್ತೆ ನಿರಂತರ ಸಂಪರ್ಕದಲ್ಲಿದ್ದಳು ಎಂದು ಉತ್ತರಪ್ರದೇಶದ ಪೊಲೀಸರು ತಿಳಿಸಿದ್ದಾರೆ. ಆರೋಪಿಯು, ಯುವತಿಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದ. ಸಂತ್ರಸ್ತೆಯ ಸಹೋದರನ ಹೆಸರಿನಲ್ಲಿ ಸಂದೀಪ್ ಗೆ ಒಂದೇ ನಂಬರ್ ನಿಂದ ನಿರಂತರವಾಗಿ ಫೋನ್ ಕರೆಗಳು ಬರುತ್ತಿದ್ದವು. 2019 ರಿಂದ ಈ ನಂಬರ್ ಗಳು ಬಂದಿವೆ ಎಂದು ತಿಳಿದು ಬಂದಿದೆ.

ಸಂತ್ರಸ್ತೆ ನೆಲೆಸಿದ್ದ ಹಳ್ಳಿ ಬೂಲ್ ಗಾಹಿಯಿಂದ ಕೇವಲ 2 ಕಿ.ಮೀ ದೂರದಲ್ಲಿರುವ ಚಂದಪಾ ಪ್ರದೇಶದಲ್ಲಿನ ಸೆಲ್ ಟವರ್ ಗಳಿಂದ ಹೆಚ್ಚಿನ ಕರೆಗಳು ಬಂದಿವೆ. ಎರಡು ನಂಬರ್ ಗಳಿಂದ 62 ಹೊರ ಕರೆ ಹಾಗೂ 42 ಒಳ ಕರೆಗಳು ಬಂದಿವೆ. ಒಟ್ಟು 104 ಬಾರಿ ಸಂಪರ್ಕ ಈ ನಂಬರ್ ಗಳಿಂದ ಬಂದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಯಿಯೊಂದಿಗೆ ಹುಲ್ಲು ತರಲೆಂದು ಯುವತಿ, ಜಮೀನಿಗೆ ತೆರಳಿದ್ದ ಸಂದರ್ಭದಲ್ಲಿ ನಾಲ್ವರು ಪಾಪಿಗಳು ಎಳೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದರು. ಅಲ್ಲದೇ ನಾಲಿಗೆ ಕತ್ತರಿಸಿ, ಬೆನ್ನು ಮೂಳೆ, ಕತ್ತಿಗೆ ಗಂಭೀರವಾಗಿ ಹಾನಿ ಮಾಡಿದ್ದರು. ಈ ಘಟನೆಗೆ ಇಡೀ ದೇಶವೇ ಆಕ್ರೋಶ ವ್ಯಕ್ತಪಡಿಸಿತ್ತು. ಘಟನೆ ನಡೆದು ಎರಡು ವಾರಗಳ ನಂತರ ಬಾಲಕಿ ಸಾವನ್ನಪ್ಪಿದ್ದಳು.

Leave a Reply

Your email address will not be published. Required fields are marked *

You May Also Like

ಹತ್ರಾಸ್ ಸಂತ್ರಸ್ತೆ ಕುಟುಂಬ ಭೇಟಿಗೆ ರಾಹುಲ್ ಸಜ್ಜು

ಉತ್ತರಪ್ರದೇಶದ ಹತ್ರಾಸ್ ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯ ಕುಟುಂಬಸ್ತರ ಭೇಟಿಗೆ ಇಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ತೆರಳಲಿದ್ದಾರೆ. ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದ ವಿರುದ್ಧ ದೇಶಾದ್ಯಂತ ವಿಪಕ್ಷಗಳು, ದಲಿತಪರ ಸಂಘಟನೆಗಳು ಮತ್ತು ವಿವಿಧ ಸಂಘಟನೆಗಳು ಮತ್ತು ಜಾಲತಾಣಗಳಲ್ಲಿ ಕೂಡ ಜನರಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ದೇಶದ ಪ್ರತಿಯೊಬ್ಬ ನಾಗರಿಕನಿಗೂ ಉಚಿತ ಕೊರೊನಾ ಲಸಿಕೆ ಎಂದು ಹೇಳಿದ ಬಿಜೆಪಿ!

ನವದೆಹಲಿ : ದೇಶದ ಎಲ್ಲ ಜನರಿಗೂ ಉಚಿತ ಕೊರೊನಾ ಲಸಿಕೆ ನೀಡಲಾಗುವುದು ಎಂದು ಕೇಂದ್ರ ಸಚಿವ ಪ್ರತಾಪ್ ಸಾರಂಗಿ ಹೇಳಿ ಎಲ್ಲ ಟೀಕೆಗಳಿಗೂ ಸ್ಪಷ್ಟನೆ ನೀಡಿದ್ದಾರೆ.

ಕೊರೋನಾ ಸಂಕಷ್ಟ ವಲಸಿಗರ ವಿಚಾರದಲ್ಲೂ ರಾಜಕಾರಣ..!

ಅಣ್ಣಾ ನಾನು ಊರಿಗೆ ಬರ್ತಿನಿ, ಬೇಕಾದ್ರೆ ಕ್ವಾರೈಂಟೈನ್ ನಲ್ಲಾದ್ರು ಇರ್ತಿನಿ ಆದ್ರೆ ಊರಿಗೆ ಬಂದ್ರೆ ಸಾಕು ಅನ್ನಿಸ್ತಿದೆ, ಹೇಗಾದ್ರು ಮಾಡಿ ನನ್ನನ್ನು ಕರಿಸಿಕೋ ಎನ್ನುವ ಮೊಬೈಲ್ ಕರೆಗಳೀಗ ಸಾಮಾನ್ಯವಾಗಿವೆ. ನಮಗೆ ಒಂದೊತ್ತಿನ ಊಟಕ್ಕೂ ಪರದಾಟವಿದೆ. ದುಡಿಯುವ ಕೈಗಳಿಗೆ ಕೆಲಸವೇ ಇಲ್ಲದೇ ನಾವು ಪರದಾಡುತ್ತಿದ್ದೇವೆ ಬೇಗ ನಮ್ಮನ್ನು ಊರಿಗೆ ಕರೆಸಿಕೊಳ್ಳಿ ಎನ್ನುವ ಅಂಗಲಾಚುವ ಧ್ವನಿ. ಒಂದೆಡೆ ಕಾರ್ಮಿಕರ ಗೋಳು ಮತ್ತೊಂದೆಡೆ ತಮ್ಮ ದೇಹವನ್ನೆ ಬಂಡವಾಳವಾಗಿಸಿಕೊಂಡು ಮುಂಬೈ-ಪುಣೆಯನ್ನೆ ಆಶ್ರಯಿಸಿಕೊಂಡಿದ್ದ ಲೈಂಗಿಕ ಕಾರ್ಯಕರ್ತೆಯರು ಒಪ್ಪತ್ತಿನೂಟಕ್ಕೆ ಪಡುತ್ತಿರುವ ಗೋಳಾಟ ಅಷ್ಟಿಷ್ಟಲ್ಲ.

ಕೋವಿಡ್ ಬಾಧಿತ ಮಕ್ಕಳಿಗೆ ಕವಾಸಾಕಿ ಕಾಯಿಲೆ ಕಾಟ :ಏನಿದು ಕಾಯಿಲೆ? ಲಕ್ಷಣಗಳೇನು?

ಕೋವಿಡ್ ಬಾಧಿತ ಎಲ್ಲ ಮಕ್ಕಳಲ್ಲೂ ಇದು ಕಂಡು ಬಂದಿಲ್ಲವಾದರೂ, ಭಾರತ ಸೇರಿ ವಿಶ್ವಾದ್ಯಂತ ಹಲವಾರು ಪ್ರಕರಣಗಳು ವರದಿಯಾಗಿವೆ.ಕೋವಿಡ್ ಬಾಧಿತ ಮಕ್ಕಳಲ್ಲಿ, ಸೋಂಕಿಗೆ ಒಳಗಾದ 2-3 ವಾರಕ್ಕೆ