ಲಕ್ಷ್ಮೇಶ್ವರ: ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ರೈತರ ಕ್ರಿಯಾ ಯೋಜನೆ ಅಭಿಯಾನದ ಅಂಗವಾಗಿ ಲಕ್ಷ್ಮೇಶ್ವರ ತಾಲೂಕು ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಕಾಮಗಾರಿ ಬೇಡಿಕೆ ಪೆಟ್ಟಿಗೆ ಇಡಲಾಗಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಆರ್.ವೈ.ಗುರಿಕಾರ ತಿಳಿಸಿದ್ದಾರೆ.

ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರ ಗ್ರಾಮದಲ್ಲಿ  ಕಾಮಗಾರಿ ಬೇಡಿಕೆ ಪೆಟ್ಟಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು  ಮಾತನಾಡಿದರು.

ರೈತರ ಕ್ರಿಯಾ ಯೋಜನೆ ಅಭಿಯಾನದ ಅಡಿ ರೈತರು ವೈಯಕ್ತಿಕ ಹಾಗೂ ಸಾಮುದಾಯಿಕ ಕಾಮಗಾರಿಗೆ ಬೇಡಿಕೆ ಸಲ್ಲಿಸಬಹುದಾಗಿದೆ. ದನದ ಶೆಡ್, ಕೃಷಿ ಹೊಂಡ, ಬದುವಿನ ಮೇಲೆ ಸಸಿ ನೆಡುವುದು, ತೆಂಗು, ಗುಲಾಬಿ, ದಾಳಿಂಬೆ, ಬಾಳೆ, ರೇಷ್ಮೆ, ಹೆಬ್ಬೇವು, ಮಲ್ಲಿಗೆ ಹೂ ಬೆಳೆಯಲು ಸಹಾಯಧನ ನೀಡಲಾವುದು. 

ನರೇಗಾ ಸಹಾಯಕ ನಿರ್ದೇಶಕ ಶಿವಕುಮಾರ ವಾಲಿ ಮಾತನಾಡಿ, ಕಳೆದ ಆರ್ಥಿಕ ವರ್ಷದಲ್ಲಿ ತಾಲೂಕಿನ ವ್ಯಾಪ್ತಿಯ ಗ್ರಾಮಗಳಲ್ಲಿ  ನರೇಗಾ ಕಾಮಗಾರಿಗಳು ಉತ್ತಮ ರೀತಿಯಿಂದ ಜರುಗಿವೆ. ಗ್ರಾಮೀಣ ಜನರ ಕಲ್ಯಾಣಕ್ಕಾಗಿಯೇ ಇರುವ ಈ ಯೋಜನೆಯನ್ನು ಗ್ರಾಮಸ್ಥರು ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು. ನರೇಗಾ ಯೋಜನೆಯಡಿ ಕೆಲಸ ಮಾಡುವವರಿಗೆ ಪ್ರತಿದಿನಕ್ಕೆ 275 ರೂ. ಕೂಲಿ ನೀಡಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಗ್ರಾಪಂ ಕಾರ್ಯದರ್ಶಿ ಎಸ್.ಎಫ್. ಹಳ್ಯಾಳ, ಗ್ರಾಪಂ ಸಿಬ್ಬಂದಿ ಕಾರ್ಯನಿರ್ವಾಹಕ ಅಧಿಕಾರಿ ಆರ್.ವೈ. ಗುರಿಕಾರ ಚಾಲನೆ ನೀಡಿದರು.

Leave a Reply

Your email address will not be published. Required fields are marked *

You May Also Like

ರಾಜಕೀಯ ಹಗ್ಗ ಜಗ್ಗಾಟ: ಪಾಳುಬಿದ್ದ ಆಶ್ರಯ ಮನೆಗಳ ಪ್ರವೇಶಿಸಿದ ಜನರು

ನರೇಗಲ್ಲ: ರಾಜಕೀಯ ನಾಯಕರ ಹಗ್ಗ ಜಗ್ಗಾಟದಲ್ಲಿ 10 ವರ್ಷಗಳಿಂದ ಪಾಳುಬಿದಿದ್ದ ಆಶ್ರಯ ಮನೆಳಿಗೆ ಜನಸಾಮಾನ್ಯರು ಪ್ರವೇಶ ಪಡೆದಿದ್ದಾರೆ. ಇರುವ ಆಶ್ರಯ ಮನೆಗಳು ತಮ್ಮ ಹೆಸರಿಗೆ ಬಾರದಿದ್ದರೂ ಆಡಳಿತ ಯಂತ್ರದ ನಿರ್ಲಕ್ಷ್ಯ ಹಾಗೂ ತಮ್ಮ ಸಂಕಷ್ಟ ಸಹಿಸಲಾರದೆ ಮನೆಗಳನ್ನು ಸ್ವಚ್ಛಗೊಳಿಸಿಕೊಂಡು ಪ್ರವೇಶಿಸಿದ್ದಾರೆ.

ಬಳಗಾನೂರಿನಲ್ಲಿ ಚೆನ್ನಮ್ಮ, ರಾಯಣ್ಣ ಪುತ್ಥಳಿ ಸ್ಥಾಪನೆಗೆ ಮನವಿ

ಪಂಚಮಸಾಲಿ ಸಮಾಜದ ಶಹರ ಘಟಕ ದಿಂದ ಗದಗ ಜಿಲ್ಲಾ ಬಳಗಾನೂರ ಗ್ರಾಮದಲ್ಲಿ ವೀರರಾಣಿ ಕಿತ್ತೂರು ಚನ್ನಮ್ಮ ಹಾಗೂ ಸಂಗೊಳ್ಳಿ ರಾಯಣ್ಣ ಪುತ್ಥಳಿ ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಲಾಯಿತು.

ಜುಲೈ ತಿಂಗಳಲ್ಲಿ ರಾಜ್ಯದಲ್ಲಿ ಹೆಚ್ಚಾಗಲಿದೆ ಸೋಂಕು : ಸುಧಾಕರ್

ರಾಜ್ಯದಲ್ಲಿ ಜುಲೈ ತಿಂಗಳಲ್ಲಿ ಅತೀ ಹೆಚ್ಚು ಕೊರೊನಾ ಸೋಂಕು ಹರಡುವ ಸಾಧ್ಯತೆ ಇದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ತಿಳಿಸಿದ್ದಾರೆ.