ಲಕ್ಷ್ಮೇಶ್ವರ: ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ರೈತರ ಕ್ರಿಯಾ ಯೋಜನೆ ಅಭಿಯಾನದ ಅಂಗವಾಗಿ ಲಕ್ಷ್ಮೇಶ್ವರ ತಾಲೂಕು ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಕಾಮಗಾರಿ ಬೇಡಿಕೆ ಪೆಟ್ಟಿಗೆ ಇಡಲಾಗಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಆರ್.ವೈ.ಗುರಿಕಾರ ತಿಳಿಸಿದ್ದಾರೆ.

ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರ ಗ್ರಾಮದಲ್ಲಿ  ಕಾಮಗಾರಿ ಬೇಡಿಕೆ ಪೆಟ್ಟಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು  ಮಾತನಾಡಿದರು.

ರೈತರ ಕ್ರಿಯಾ ಯೋಜನೆ ಅಭಿಯಾನದ ಅಡಿ ರೈತರು ವೈಯಕ್ತಿಕ ಹಾಗೂ ಸಾಮುದಾಯಿಕ ಕಾಮಗಾರಿಗೆ ಬೇಡಿಕೆ ಸಲ್ಲಿಸಬಹುದಾಗಿದೆ. ದನದ ಶೆಡ್, ಕೃಷಿ ಹೊಂಡ, ಬದುವಿನ ಮೇಲೆ ಸಸಿ ನೆಡುವುದು, ತೆಂಗು, ಗುಲಾಬಿ, ದಾಳಿಂಬೆ, ಬಾಳೆ, ರೇಷ್ಮೆ, ಹೆಬ್ಬೇವು, ಮಲ್ಲಿಗೆ ಹೂ ಬೆಳೆಯಲು ಸಹಾಯಧನ ನೀಡಲಾವುದು. 

ನರೇಗಾ ಸಹಾಯಕ ನಿರ್ದೇಶಕ ಶಿವಕುಮಾರ ವಾಲಿ ಮಾತನಾಡಿ, ಕಳೆದ ಆರ್ಥಿಕ ವರ್ಷದಲ್ಲಿ ತಾಲೂಕಿನ ವ್ಯಾಪ್ತಿಯ ಗ್ರಾಮಗಳಲ್ಲಿ  ನರೇಗಾ ಕಾಮಗಾರಿಗಳು ಉತ್ತಮ ರೀತಿಯಿಂದ ಜರುಗಿವೆ. ಗ್ರಾಮೀಣ ಜನರ ಕಲ್ಯಾಣಕ್ಕಾಗಿಯೇ ಇರುವ ಈ ಯೋಜನೆಯನ್ನು ಗ್ರಾಮಸ್ಥರು ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು. ನರೇಗಾ ಯೋಜನೆಯಡಿ ಕೆಲಸ ಮಾಡುವವರಿಗೆ ಪ್ರತಿದಿನಕ್ಕೆ 275 ರೂ. ಕೂಲಿ ನೀಡಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಗ್ರಾಪಂ ಕಾರ್ಯದರ್ಶಿ ಎಸ್.ಎಫ್. ಹಳ್ಯಾಳ, ಗ್ರಾಪಂ ಸಿಬ್ಬಂದಿ ಕಾರ್ಯನಿರ್ವಾಹಕ ಅಧಿಕಾರಿ ಆರ್.ವೈ. ಗುರಿಕಾರ ಚಾಲನೆ ನೀಡಿದರು.

Leave a Reply

Your email address will not be published. Required fields are marked *

You May Also Like

ಮುಶಿಗೇರಿ: ನಾಗನಗೌಡ ಗೌಡರ ರಾಜ್ಯಕ್ಕೆ 2ನೇ ರ್ಯಾಂ ಕ್ ಪಡೆದು ಸೈಂಟಿಫಿಕ್ ಆಪೀಸರ್ ಹುದ್ದೆಗೆ ಆಯ್ಕೆ

ಗದಗ: ಪೊಲೀಸ್ ಇಲಾಖೆ ವತಿಯಿಂದ ಕಳೆದ ವರ್ಷ 28.05.2021 ರಂದು  ವಿಧಿವಿಜ್ಞಾನ  ಪ್ರಯೋಗಾಲಯ ವಿಭಾಗದಲ್ಲಿ  84…

ಕೋವೀಡ್ ನಿಂದ ಮೃತಪಟ್ಟ ಕೊರೊನಾ ವಾರಿಯರ್ಸ್ ಕುಟುಂಬಕ್ಕೆ ಪರಿಹಾರ ನೀಡಿ-ಸಿದ್ದರಾಮಯ್ಯ

ಬೆಂಗಳೂರು: ಕೊರೋನಾ ಸಾಂಕ್ರಾಮಿಕವನ್ನು ನಿಭಾಯಿಸುವಲ್ಲಿ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಗ್ರಾಮ ಪಂಚಾಯತಿಗಳ ತಳ ಮಟ್ಟದ ಸಿಬ್ಬಂದಿಗಳು, ಶಿಕ್ಷಕರು, ಆರೋಗ್ಯ ಇಲಾಖೆ, ಪೊಲೀಸ್, ಕಂದಾಯ, ಸಾರಿಗೆ ಇಲಾಖೆ, ನಗರ ಸ್ಥಳೀಯ ಸಂಸ್ಥೆಗಳ ಸಿಬ್ಬಂದಿಗಳು, ಪಶುವೈದ್ಯರು ಮುಂತಾದವರು ನೇರವಾಗಿ ಜನರ ಜೊತೆ ಇದ್ದು ಕೆಲಸ ಮಾಡುತ್ತಿದ್ದಾರೆ. ಇವರುಗಳಿಗೆ ವಿಶೇಷ ರಕ್ಷಣೆ ನೀಡಬೇಕಾದದ್ದು ಸರ್ಕಾರದ ಜವಾಬ್ಧಾರಿ ಎಂದು ಮಾಜಿ ಸಿಎಂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ದಾವಣಗೆರೆ ಜಿಲ್ಲೆಯಲ್ಲಿ 21 ಕೊರೋನಾ ಪಾಸಿಟಿವ್: ರಾಜ್ಯದಲ್ಲಿ 642ಕ್ಕೆ ಏರಿಕೆ

ದಾವಣಗೆರೆ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಜನರ ಆತಂಕಕ್ಕೆ ಕಾರಣವಾಗುತ್ತಿದೆ.

ನಟ ಚಿರಂಜೀವಿಗೆ ಕೊರೊನಾ ಪಾಸಿಟಿವ್!

ಹೈದರಾಬಾದ್ : ನಟ ಚಿರಂಜೀವಿ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ.