ಲಕ್ಷ್ಮೇಶ್ವರ: ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ರೈತರ ಕ್ರಿಯಾ ಯೋಜನೆ ಅಭಿಯಾನದ ಅಂಗವಾಗಿ ಲಕ್ಷ್ಮೇಶ್ವರ ತಾಲೂಕು ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಕಾಮಗಾರಿ ಬೇಡಿಕೆ ಪೆಟ್ಟಿಗೆ ಇಡಲಾಗಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಆರ್.ವೈ.ಗುರಿಕಾರ ತಿಳಿಸಿದ್ದಾರೆ.

ಲಕ್ಷ್ಮೇಶ್ವರ ತಾಲೂಕಿನ ದೊಡ್ಡೂರ ಗ್ರಾಮದಲ್ಲಿ  ಕಾಮಗಾರಿ ಬೇಡಿಕೆ ಪೆಟ್ಟಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು  ಮಾತನಾಡಿದರು.

ರೈತರ ಕ್ರಿಯಾ ಯೋಜನೆ ಅಭಿಯಾನದ ಅಡಿ ರೈತರು ವೈಯಕ್ತಿಕ ಹಾಗೂ ಸಾಮುದಾಯಿಕ ಕಾಮಗಾರಿಗೆ ಬೇಡಿಕೆ ಸಲ್ಲಿಸಬಹುದಾಗಿದೆ. ದನದ ಶೆಡ್, ಕೃಷಿ ಹೊಂಡ, ಬದುವಿನ ಮೇಲೆ ಸಸಿ ನೆಡುವುದು, ತೆಂಗು, ಗುಲಾಬಿ, ದಾಳಿಂಬೆ, ಬಾಳೆ, ರೇಷ್ಮೆ, ಹೆಬ್ಬೇವು, ಮಲ್ಲಿಗೆ ಹೂ ಬೆಳೆಯಲು ಸಹಾಯಧನ ನೀಡಲಾವುದು. 

ನರೇಗಾ ಸಹಾಯಕ ನಿರ್ದೇಶಕ ಶಿವಕುಮಾರ ವಾಲಿ ಮಾತನಾಡಿ, ಕಳೆದ ಆರ್ಥಿಕ ವರ್ಷದಲ್ಲಿ ತಾಲೂಕಿನ ವ್ಯಾಪ್ತಿಯ ಗ್ರಾಮಗಳಲ್ಲಿ  ನರೇಗಾ ಕಾಮಗಾರಿಗಳು ಉತ್ತಮ ರೀತಿಯಿಂದ ಜರುಗಿವೆ. ಗ್ರಾಮೀಣ ಜನರ ಕಲ್ಯಾಣಕ್ಕಾಗಿಯೇ ಇರುವ ಈ ಯೋಜನೆಯನ್ನು ಗ್ರಾಮಸ್ಥರು ಸದುಪಯೋಗ ಪಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು. ನರೇಗಾ ಯೋಜನೆಯಡಿ ಕೆಲಸ ಮಾಡುವವರಿಗೆ ಪ್ರತಿದಿನಕ್ಕೆ 275 ರೂ. ಕೂಲಿ ನೀಡಲಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಗ್ರಾಪಂ ಕಾರ್ಯದರ್ಶಿ ಎಸ್.ಎಫ್. ಹಳ್ಯಾಳ, ಗ್ರಾಪಂ ಸಿಬ್ಬಂದಿ ಕಾರ್ಯನಿರ್ವಾಹಕ ಅಧಿಕಾರಿ ಆರ್.ವೈ. ಗುರಿಕಾರ ಚಾಲನೆ ನೀಡಿದರು.

Leave a Reply

Your email address will not be published. Required fields are marked *

You May Also Like

ಕೆಜಿಎಫ್-2 ಚಿತ್ರ ಬಿಡುಗಡೆ: ಗದಗ ನಗರದಲ್ಲಿ ಅಭಿಮಾನಿಗಳ ಸಂಭ್ರಮ

ಉತ್ತರಪ್ರಭ ಸುದ್ದಿಗದಗ: ನಗರದ ವೆಂಕಟೇಶ್ ಹಾಗೂ ಮಹಾಲಕ್ಷ್ಮೀ ಚಿತ್ರ ಮಂದಿರದಲ್ಲಿ ಕೆಜಿಎಫ್-2 ಚಿತ್ರ ಬಿಡುಗಡೆ ಹಿನ್ನಲೆ…

ಕನ್ನಡ ರಾಜ್ಯೋತ್ಸವ ದಿನದಂದ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟಿಸಲು ಮುಂದಾದ ಮಹಾರಾಷ್ಟ್ರ ಸಚಿವರು!

ಬೆಳಗಾವಿ : ರಾಜ್ಯದಲ್ಲಿ ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ತಯಾರಿ ನಡೆದಿದೆ. ಆದರೆ, ಮಹಾರಾಷ್ಟ್ರ ಸರ್ಕಾರ, ಇದನ್ನು ವಿರೋಧಿಸುವ ಪ್ರಯತ್ನ ನಡೆಸುತ್ತಿದೆ.

ಶಾರ್ಪ ಶೂಟರಗಳಿಂದ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ ಹತ್ಯೆಗೆ ಸಂಚು ಶಾಸಕರಿಗೆ ಭದ್ರತೆ

ಬೆಂಗಳೂರು: ರಾಜ್ಯರಾಜಕಾರಣದಲ್ಲಿ ಎಲ್ಲರೂ ಬೆಚ್ಚಿಬಿಳಿಸುವ ವಿಡಿಯೊಂದು ಹರಿದಾಡುತ್ತಿದ್ದು , ಕುಳ್ಳ ದೇವರಾಜ ಮತ್ತು ಗೋಪಾಲಕೃಷ್ಣ  ಅವರ…

ಸಿಂದಗಿ ಶಾಸಕ ಎಂ.ಸಿ. ಮನಗೂಳಿ ವಿಧಿವಶ

ಉಸಿರಾಟದ ತೊಂದರೆ ಹಿನ್ನಲೆಯಲ್ಲಿ ಬನ್ನೇರುಘಟ್ಟ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಿಂದಗಿ ಕ್ಷೇತ್ರದ ಜೆಡಿಎಸ್ ಶಾಸಕ ಮಲ್ಲಪ್ಪ ಚೆನ್ನವೀರಪ್ಪ ಮನಗೂಳಿ. (85) ತಡರಾತ್ರಿ ನಿಧನರಾಗಿದ್ದಾರೆ.