ಕೋಲ್ಕತಾ : ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಗುರುವಾರ ಹಿಂಸಾತ್ಮಕ ಘಷರ್ಣೆ ನಡೆದಿರುವ ಘಟನೆ ಪಶ್ಚಿಮ ಬಂಗಳಾದಲ್ಲಿ ನಡೆದಿದೆ.

ಈ ಘಟನೆಯಲ್ಲಿ ಪೊಲೀಸರು ಬಿಜೆಪಿ ಕಾರ್ಯಕರ್ತರಿಂದ ಬಂದೂಕು ವಶಪಡಿಸಿಕೊಂಡಿದ್ದಾರೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿದ್ದ ಬಿಜೆಪಿ ಕಾರ್ಯಕರ್ತರು, ಪಶ್ಚಿಮ ಬಂಗಾಳ ಸಚಿವಾಲಯದ ಹತ್ತಿರ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದರು.

ಈ ಪ್ರತಿಭಟನೆಗೆ ಪೊಲೀಸರು ವಿರೋಧ ವ್ಯಕ್ತಪಡಿಸಿದ್ದರು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಪೊಲೀಸರು, ಬ್ಯಾರಿಕೇಡ್‌ಗಳನ್ನು ಭೇದಿಸಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಹೌರಾದ ಸಂತಗಾಚಿಯಲ್ಲಿ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಬಿಜೆಪಿ ಕಾರ್ಯಕರ್ತರ ಮೇಲೆ ಅಶ್ರುವಾಯು, ನೀರಿನ ಫಿರಂಗಿಯನ್ನು ಬಳಸಿದ್ದಾರೆ. ಇದಕ್ಕೆ ಜಗ್ಗದ ಕೇಸರಿ ಪಕ್ಷದ ಬೆಂಬಲಿಗರು ಬಂಗಾಳ ಪೊಲೀಸರೊಂದಿಗೆ ಘರ್ಷಣೆಗಿಳಿದ್ದಾರೆ. ಈ ಸಂದರ್ಭದಲ್ಲಿ ಪ್ರತಿಭಟನಾಕಾರರಲ್ಲಿ ಒಬ್ಬರಿಂದ ಬಂದೂಕನ್ನು ವಶಪಡಿಸಿಕೊಳ್ಳಲಾಗಿದೆ.

ಪೊಲೀಸರೊಂದಿಗೆ ನಡೆದ ಘರ್ಷಣೆಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ರಾಜು ಬ್ಯಾನರ್ಜಿ ಮತ್ತು ಸಂಸದ ಜ್ಯೋತಿರ್ಮೊಯ್ ಸಿಂಗ್ ಮಹತೋ ಅವರು ಗಾಯಗೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಅಬುದಾಬಿಯಿಂದ ರಾಜ್ಯಕ್ಕೆ ಬಂದ 179 ಜನ – ಬೆಂಗಳೂರಿಗರಲ್ಲಿ ಆತಂಕ!

ಕೊರೊನಾ ಲಾಕ್ ಡೌನ್ ನಿಂದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ನ ರಾಜಧಾನಿ ಅಬುದಾಬಿಯಿಂದ 179 ಜನ ಭಾರತೀಯರು ಬೆಂಗಳೂರಿಗೆ ಬಂದಿದ್ದಾರೆ.

ದೆಹಲಿಯಲ್ಲಿ ಸಮುದಾಯದ ಹಂತ ತಲುಪಿದ ಕೊರೊನಾ – ಘೋಷಣೆಗೆ ಕೇಂದ್ರದ ಮೀನಮೇಷ!

ರಾಷ್ಟ್ರ ರಾಜಧಾನಿಯಲ್ಲಿ ಕೊರೊನಾ ತನ್ನ ಅಟ್ಟಹಾಸ ಮುಂದುವರೆಸಿದ್ದು, ಸಮುದಾಯ ಹಂತ ತಲುಪಿದೆ. ಆದರೆ, ಕೇಂದ್ರ ಸರ್ಕಾರದ ಘೋಷಣೆಗಾಗಿ ಕಾಯುತ್ತಿದ್ದೇವೆ ಎಂದು ಆರೋಗ್ಯ ಸಚಿವ ಸತ್ಯೇಂದರ್ ಜೈನ್ ತಿಳಿಸಿದ್ದಾರೆ.

ದೇಶದಲ್ಲಿ ಕೊರೊನಾ ಕಸ ಸೃಷ್ಟಿಯಾಗಿದ್ದು ಎಷ್ಟು ಗೊತ್ತಾ?

ನವದೆಹಲಿ : ದೇಶದಲ್ಲಿ ಕೊರೊನಾ ಹಾವಳಿ ಹೆಚ್ಚಾಗಿದ್ದರಿಂದಾಗಿ ಆಸ್ಪತ್ರೆಯಲ್ಲಿ ಕೂಡ ತ್ಯಾಜ್ಯ ಹೆಚ್ಚಾಗುತ್ತಿದೆ. ಜೂನ್ ನಿಂದ ಸೆಪ್ಟೆಂಬರ್ ವರೆಗೆ ದೇಶದಲ್ಲಿ 18 ಸಾವಿರಕ್ಕೂ ಅಧಿಕ ಟನ್ ವೈದ್ಯಕೀಯ ತ್ಯಾಜ್ಯ ಸಂಗ್ರಹವಾಗಿದೆ ಎಂದು ತಿಳಿದು ಬಂದಿದೆ.

ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಏರಿಕೆ?

ನವದೆಹಲಿ: 2021 ರ ಆರಂಭದಲ್ಲೇ ಕೇಂದ್ರ ಸರ್ಕಾರಿ ನೌಕರರಿಗೆ ಜನವರಿ 2021 ರಿಂದ ಅನ್ವಯವಾಗುವಂತೆ, ತುಟ್ಟಿ…