ಕೋಲ್ಕತಾ : ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಗುರುವಾರ ಹಿಂಸಾತ್ಮಕ ಘಷರ್ಣೆ ನಡೆದಿರುವ ಘಟನೆ ಪಶ್ಚಿಮ ಬಂಗಳಾದಲ್ಲಿ ನಡೆದಿದೆ.

ಈ ಘಟನೆಯಲ್ಲಿ ಪೊಲೀಸರು ಬಿಜೆಪಿ ಕಾರ್ಯಕರ್ತರಿಂದ ಬಂದೂಕು ವಶಪಡಿಸಿಕೊಂಡಿದ್ದಾರೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿದ್ದ ಬಿಜೆಪಿ ಕಾರ್ಯಕರ್ತರು, ಪಶ್ಚಿಮ ಬಂಗಾಳ ಸಚಿವಾಲಯದ ಹತ್ತಿರ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದ್ದರು.

ಈ ಪ್ರತಿಭಟನೆಗೆ ಪೊಲೀಸರು ವಿರೋಧ ವ್ಯಕ್ತಪಡಿಸಿದ್ದರು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಪೊಲೀಸರು, ಬ್ಯಾರಿಕೇಡ್‌ಗಳನ್ನು ಭೇದಿಸಲು ಯತ್ನಿಸಿದ್ದಾರೆ. ಈ ವೇಳೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಹೌರಾದ ಸಂತಗಾಚಿಯಲ್ಲಿ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಬಿಜೆಪಿ ಕಾರ್ಯಕರ್ತರ ಮೇಲೆ ಅಶ್ರುವಾಯು, ನೀರಿನ ಫಿರಂಗಿಯನ್ನು ಬಳಸಿದ್ದಾರೆ. ಇದಕ್ಕೆ ಜಗ್ಗದ ಕೇಸರಿ ಪಕ್ಷದ ಬೆಂಬಲಿಗರು ಬಂಗಾಳ ಪೊಲೀಸರೊಂದಿಗೆ ಘರ್ಷಣೆಗಿಳಿದ್ದಾರೆ. ಈ ಸಂದರ್ಭದಲ್ಲಿ ಪ್ರತಿಭಟನಾಕಾರರಲ್ಲಿ ಒಬ್ಬರಿಂದ ಬಂದೂಕನ್ನು ವಶಪಡಿಸಿಕೊಳ್ಳಲಾಗಿದೆ.

ಪೊಲೀಸರೊಂದಿಗೆ ನಡೆದ ಘರ್ಷಣೆಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ರಾಜು ಬ್ಯಾನರ್ಜಿ ಮತ್ತು ಸಂಸದ ಜ್ಯೋತಿರ್ಮೊಯ್ ಸಿಂಗ್ ಮಹತೋ ಅವರು ಗಾಯಗೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಕೊರೊನಾ ಪರೀಕ್ಷೆ: ದೇಶಾದ್ಯಂತ ಸಮಂಜಸ ದರ ನಿಗದಿಗೆ ಸುಪ್ರೀಂ ಸೂಚನೆ

ದೆಹಲಿ: ಕೊರೊನಾ ಪರೀಕ್ಷೆಗೆ ಸಮಂಜಸ ದರ ನಿಗದಿಮಾಡಬೇಕು ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಭೂಷಣ್ ಹೇಳಿದ್ದಾರೆ.…

ತೀವ್ರಗತಿಯಲ್ಲಿಯೇ ಏರುತ್ತಿದೆ ಸೋಂಕು!!

ಮಹಾಮಾರಿ ಕೊರೊನಾಗೆ ದೇಶದಲ್ಲಿ ದಿನದಿಂದ ದಿನಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಏರಿಕೆಯಾಗುತ್ತಿದೆ.

ನಟಿ ಖುಷ್ಬೂ ಅವರನ್ನು ಬಂಧಿಸಿದ ಪೊಲೀಸರು!

ಚೆನ್ನೈ : ನಟಿ ಖುಷ್ಬೂ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅವರು ತಮಿಳುನಾಡಿನ ಚಿದಂಬರಂಗೆ ಹೋಗುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಬಂಧಿಸಿದ್ದಾರೆ.

ಕೇಸ್ ನಂ 1 ರಿಂದ ಕೊರೊನಾ ಸೋಂಕು 8 ಲಕ್ಷ ತಲುಪಿದ್ದು ಹೇಗೆ? : ಮೂರೇ ದಿನದಲ್ಲಿ 1 ಲಕ್ಷ ಹೊಸ ಪಾಸಿಟಿವ್

ನವದೆಹಲಿ: ಮೂರು ದಿನದ ಹಿಂದಷ್ಟೇ ದೇಶದಲ್ಲಿ 7 ಲಕ್ಷ ದಾಟಿದ್ದ ಕೋರೊನಾ ಸೋಂಕಿತರ ಸಂಖ್ಯೆ ಈಗ…