ನವದೆಹಲಿ : ಕೊರೊನಾ ಹಾವಳಿಯಿಂದ ಇಡೀ ಜಗತ್ತೇ ಇಂದು ಆತಂಕದಲ್ಲಿ ಕಾಲ ಕಳೆಯುತ್ತಿದೆ. ಇದು ಉದ್ಯೋಗದ ಮೇಲೆಯೂ ಪರಿಣಾಮ ಬೀರಿದೆ. ಇದರಿಂದಾಗಿ ಉದ್ಯೋಗಿಗಳ ಮೇಲೆ ಒತ್ತಡ ಹೆಚ್ಚಾಗುತ್ತಿದೆ ಎಂದು ಅಧ್ಯಯನವೊಂದು ತಿಳಿಸಿದೆ.

ಭಾರತದ ಶೇ. 41ಕ್ಕಿಂತ ಹೆಚ್ಚಿನ ಕಾರ್ಮಿಕರು ಮನೆಯಿಂದಲೇ ಕೆಲಸವಾಗಲಿ, ಕಚೇರಿಯ ಕೆಲಸವಾಗಲಿ ಉದ್ಯೋಗದಲ್ಲಿ ತುಂಬಾ ಒತ್ತಡ ಎದುರಿಸುತ್ತಿದ್ದಾರೆ ಎಂದು ಮೈಕ್ರೋಸಾಫ್ಟ್ ಅಧ್ಯಯನವೊಂದು ಬಹಿರಂಗಪಡಿಸಿದೆ.

ಕೊರೊನಾದಿಂದಾಗಿ ಸದ್ಯ ಹಲವು ಕಳೆದ ಆರು ತಿಂಗಳಲ್ಲಿ ಭಾರತದ ಉದ್ಯೋಗದಲ್ಲಿ ಸಮಸ್ಯೆ ಉಂಟಾಗುತ್ತಿದೆ. ಭಾರತದ ಮೂರನೇ ಒಂದು ಭಾಗದಷ್ಟು ಕಾರ್ಮಿಕರಿಗೆ ಕೆಲಸದ ಕುರಿತ ಒತ್ತಡಗಳು ಹೆಚ್ಚಾಗುತ್ತಿವೆ.
ಕೊರೊನಾದಿಂದಾಗಿ ಕೆಲವು ನಿಯಮಗಳಲ್ಲಿ ಬದಲಾವಣೆಗಳಾಗಿವೆ. ಅಲ್ಲದೇ, ಹಲವರು ಕೆಲಸ ಕಳೆದುಕೊಂಡು ಬೇರೆಡೆ ಕೆಲಸಕ್ಕೆ ತೆರಳಿದ್ದಾರೆ. ಹೀಗಾಗಿ ಹೊಸ ಕೆಲಸದ ಪರಿಸ್ಥಿತಿಯ ಒತ್ತಡಗಳು ಅವರನ್ನು ಕಾಡುತ್ತಿದೆ.

ಆಸ್ಟ್ರೇಲಿಯಾ, ಜಪಾನ್, ಭಾರತ ಮತ್ತು ಸಿಂಗಾಪುರ ಸೇರಿದಂತೆ ಎಂಟು ದೇಶಗಳಲ್ಲಿ ಈ ಅಧ್ಯಯನ ಕೈಗೊಳ್ಳಲಾಗಿತ್ತು. ಮೊದಲ ಸಾಲಿನ ಕಾರ್ಮಿಕರನ್ನು ಸಮೀಕ್ಷೆಗೆ ಒಳಪಡಿಸಲಾಗಿತ್ತು. ಜಗತ್ತಿನ ವಿಷಯವನ್ನು ಗಮನಿಸುವುದಾದರೆ, ಏಷ್ಯಾದಲ್ಲಿಯೇ ಉದ್ಯೋಗ ಆತಂಕ ಹೆಚ್ಚಾಗುತ್ತಿದೆ. ಭಾರತದಲ್ಲಿ ಈ ಪ್ರಮಾಣ ಶೇ. 29 ರಷ್ಟಿದೆ. ಒತ್ತಡಕ್ಕೆ ಒಳಗಾದವರು ಧ್ಯಾನ, ಯೋಗಗಳ ಮೊರೆ ಹೋಗಿ ಒತ್ತಡಗಳನ್ನು ಕಡಿಮೆ ಮಾಡಿಕೊಳ್ಳುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಪಚನ ಶಕ್ತಿ ವೃದ್ಧಿಗೆ ಮೊಳಕೆ ಒಡೆದ ಹೆಸರು ಕಾಳು

ಸದ್ಯ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಮಹಾಮಾರಿ ತಡೆಗಟ್ಟಲು ಆತ್ಮವಿಶ್ವಾಸದ ಜೊತೆಗೆ ರೋಗನಿರೋಧಕ ಶಕ್ತಿ ಹೆಚ್ಚಾಗಿ ಬೇಕಾಗುತ್ತದೆ. ಇದಕ್ಕಾಗಿ ಸಾರ್ವಜನಿಕರು ಜಾಗೃತಿ ವಹಿಸುವ ಅಗತ್ಯತೆ ತುಂಬಾ ಇದೆ. ಮಕ್ಕಳು, ವೃದ್ಧರು ಸೇರಿದಂತೆ ಎಲ್ಲ ವಯಸ್ಸಿನವರು ಇಮ್ಯೂನಿಟಿ ಪವರ್ ಹೆಚ್ಚಿಸುವ ಆಹಾರದತ್ತ ಹೆಚ್ಚಿನ ಗಮನ ಹರಿಸುವ ಅಗತ್ಯತೆ ಈ ಸಂದರ್ಭದಲ್ಲಿ ತುಂಬಾ ಇದೆ. ಇದಕ್ಕೆ ರಾಮಬಾಣ ಎಂಬಂತೆ ವರ್ತಿಸುವ ಹೆಸರುಕಾಳನ್ನು ಜನರು ಹೆಚ್ಚಾಗಿ ಬಳಸುವ ಅವಶ್ಯಕತೆ ಇದೆ.

ಕೋರಾನಾ: ಭಾರತೀಯ ಔಷಧಿಗೆ ತಡೆ ನೀಡಿದ ವಿಶ್ವ ಆರೋಗ್ಯ ಸಂಸ್ಥೆ!

ಜಿನೆವಾ: ಕೊರೊನಾ ವೈರಸ್ ಗೆ ಪರಿಣಾಮಕಾರಿ ಮದ್ದು ಎನ್ನಲಾಗುತ್ತಿದ್ದ ಹೈಡ್ರಾಕ್ಸಿಕ್ಲೋರೋಕ್ವಿನ್ ಔಷಧದ ವೈದ್ಯಕೀಯ ಪ್ರಯೋಗಕ್ಕೆ ವಿಶ್ವ…

ಕೊರೊನಾ ಹಿನ್ನೆಲೆ : ಆ.31ರವರೆಗೆ ಪರಿಹಾರ ಸಾಮಗ್ರಿಗಳ ಆಮದಿನ ಮೇಲಿನ ತೆರಿಗೆ ವಿನಾಯಿತಿ ವಿಸ್ತರಣೆ

ನವದೆಹಲಿ: ಜಿಎಸ್‌ಟಿ ಕೌನ್ಸಿಲ್ ತನ್ನ ಸಭೆಯಲ್ಲಿ ಕೊರೊನಾ ವೈರಸ್ ಪರಿಹಾರ ಸಾಮಗ್ರಿಗಳ ಆಮದಿಗೆ ಆಗಸ್ಟ್ 31ರವರೆಗೆ ತೆರಿಗೆ ವಿನಾಯಿತಿ ನೀಡಲು ನಿರ್ಧರಿಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ಘೋಷಿಸಿದರು. ರಾಜ್ಯ ಹಣಕಾಸು ಸಚಿವರನ್ನು ಒಳಗೊಂಡ 43ನೇ ಜಿಎಸ್ಟಿ ಕೌನ್ಸಿಲ್ ಸಭೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ನಡೆಯಿತು. ಕೌನ್ಸಿಲ್ ಸುಮಾರು ಎಂಟು ತಿಂಗಳಲ್ಲಿ ಮೊದಲ ಬಾರಿಗೆ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.

ಸಾಮಾಜಿಕ ಜಾಲತಾಣಗಳಿಗೆ ಖಡಕ್ ಎಚ್ಚರಿಕೆ ನೀಡಿದ ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್

ಸಾಮಾಜಿಕ ಜಾಲತಾಣ ದೈತ್ಯ ಟ್ವಿಟರ್ ಮತ್ತು ಫೇಸ್ ಬುಕ್, ವಾಟ್ಸ್ ಆಯಪ್ ಮುಂತಾದ ಸಾಮಾಜಿಕ ಜಾಲತಾಣಗಳು ನೆಲದ ನಿಯಮವನ್ನು ಪಾಲಿಸಬೇಕು ಎಂದು ಕೇಂದ್ರ ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಗುರುವಾರ ತಿಳಿಸಿದರು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ, ದ್ವೇಷ ಹರಡುವುದನ್ನು ಸರ್ಕಾರ ಸಹಿಸುವುದಿಲ್ಲ ಎಂದು ಹೇಳಿದರು.