ಚಂಡೀಗಢ : ಸಿಬಿಐನ ಮಾಜಿ ನಿರ್ದೇಶಕ, ನಾಗಲ್ಯಾಂಡ್ ಮಾಜಿ ರಾಜ್ಯಪಾಲ ಅಶ್ವನಿ ಕುಮಾರ್ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಿಮ್ಲಾದ ಅವರ ನಿವಾಸದಲ್ಲಿ ಬುಧವಾರ ನೇಣು ಬಿಗಿದ ಸ್ಥಿತಿಯಲ್ಲಿ ಅಶ್ವನಿ ಅವರ ಶವ ಪತ್ತೆಯಾಗಿದೆ.

ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, ಅದನ್ನು ಪೊಲಿಸರು ವಶಕ್ಕೆ ಪಡೆದಿದ್ದಾರೆ. ಡೆತ್ ನೋಟ್ ನಲ್ಲಿ ಜೀವನದಲ್ಲಿ ತುಂಬಾ ಬೇಸರಗೊಂಡಿದ್ದೇನೆ. ಹೀಗಾಗಿ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಅಶ್ವನಿ ಬರೆದುಕೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಮನೆಯಲ್ಲಿರುವ ದೇವರ ಕೋಣೆಯಲ್ಲಿ ಅಶ್ವನಿ ಶವ ಪತ್ತೆಯಾಗಿದೆ. ಅವರ ಪತ್ನಿ, ಮಗ ಹಾಗೂ ಮಗಳು ಮನೆಯ ಕೆಳ ಮಹಡಿಯಲ್ಲಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಎಸ್ ಪಿ ಶಿಮ್ಲಾ ಮೋಹಿತ್, ಪ್ರಕರಣದ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿಯ ಬಳಿಕವೇ ನಿಖರ ಕಾರಣ ತಿಳಿಯಬಹುದಾಗಿದೆ ಎಂದು ಹೇಳಿದ್ದಾರೆ.

ಅಶ್ವನಿ ಅವರು ಕೆಲ ದಿನಗಳಿಂದ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಎಲ್ಲ ಆಯಾಮಗಳಲ್ಲಿಯೂ ತನಿಖೆ ನಡೆಸಲಾಗುವುದು. ಸಂಜೆ ವಾಕಿಂಗ್ ಹೋಗಿ ಬಂದಿದ್ದ ಅಶ್ವನಿ ಅವರು ಪ್ರಾರ್ಥನೆ ಸಲ್ಲಿಸಲೆಂದು ದೇವರ ಕೋಣೆಗೆ ಹೋಗಿದ್ದರು.

ಹೀಗೆ ಹೋದವರು ಕೆಲ ಸಮಯವಾದರೂ ವಾಪಸ್ ಬರದೇ ಇದ್ದಾಗ ಆತಂಕಗೊಂಡ ಕುಟುಂಬಸ್ಥರು ದೇವರ ಕೋಣೆಗೆ ಹೋಗಿ ನೋಡಿದಾಗ ಅಶ್ವನಿ ಅವರ ಶವ ಪತ್ತೆಯಾಗಿದೆ ಎಂದು ಡಿಜಿಪಿ ವಿವರಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಅಬ್ಬಾ…! ಮಹಾರಾಷ್ಟ್ರದಲ್ಲಿ ಎಷ್ಟು ಜನ ಪೊಲೀಸರಿಗೆ ಕೊರೊನಾ ಬಂದಿದೆ ಗೊತ್ತಾ?

ಮುಂಬಯಿ: ಮಹಾರಾಷ್ಟ್ರ ರಾಜ್ಯದಲ್ಲಿ ಕೊರೊನಾ ಮಹಾಮಾರಿಯ ಹಾವಳಿ ಮಿತಿ ಮೀರುತ್ತಿದೆ. ಕೊರೊನಾ ವಾರಿಯರ್ಸ್ ನ್ನು ಅದು…

ಕೊರೊನಾ ಹೋರಾಟದಲ್ಲಿ ನಾವು ಯಶಸ್ವಿಯಾಗುತ್ತಿದ್ದೇವೆ – ಕೇಂದ್ರ ಸರ್ಕಾರ!

ನವದೆಹಲಿ: ಕೊರೊನಾ ವಿರುದ್ಧದ ಹೋರಾಟದಲ್ಲಿ ದೇಶ ಉತ್ತಮ ಸ್ಥಿತಿಯಲ್ಲಿಯೇ ಹೊರಟಿದೆ. ಆದರೂ ಮರೆಯುವಂತಿಲ್ಲ ಎಂದು ಕೇಂದ್ರ…

ರಾಜ್ಯದಲ್ಲಿಂದು 271 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 271 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 6516 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 464. ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 3440 ಕೇಸ್ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 2995 ಸಕ್ರೀಯ ಪ್ರಕರಣಗಳಿವೆ.

ನಟಿ ಖುಷ್ಬೂ ಅವರನ್ನು ಬಂಧಿಸಿದ ಪೊಲೀಸರು!

ಚೆನ್ನೈ : ನಟಿ ಖುಷ್ಬೂ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಅವರು ತಮಿಳುನಾಡಿನ ಚಿದಂಬರಂಗೆ ಹೋಗುತ್ತಿದ್ದ ಸಂದರ್ಭದಲ್ಲಿ ಪೊಲೀಸರು ಬಂಧಿಸಿದ್ದಾರೆ.