ಲಕ್ನೋ: ಹತ್ರಾಸ್ ಪ್ರಕರಣದ ಪ್ರಮುಖ ಆರೋಪಿ ಸಂದೀಪ್ ಎಸ್ಪಿಪಗೆ ಪತ್ರ ಬರೆದಿರುವ ವಿಚಾರ ಬೆಳಕಿಗೆ ಬಂದಿದೆ. ಆರೋಪಿಯು ಸೆ. 7ರಂದು ಜೈಲಿನಿಂದಲೇ ಹತ್ರಾಸ್ ಎಸ್ ಪಿಗೆ ಪತ್ರ ಬರೆದಿದ್ದಾನೆ.

ಸಂದೀಪ್ ಸೇರಿದಂತೆ ಇನ್ನುಳಿದ ಮೂವರು ಅಪರಾಧಿಗಳು ಅದಕ್ಕೆ ಸಹಿ ಮಾಡಿದ್ದಾರೆ. ಪತ್ರದಲ್ಲಿ ಆಕೆಯ ತಾಯಿ ಮತ್ತು ಸೋದರನ ವಿರುದ್ಧ ಆರೋಪ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಯುವತಿ ಜೊತೆ ನನ್ನ ಸ್ನೇಹವಿತ್ತು. ಆದರೆ, ನಮ್ಮಿಬ್ಬರ ಸ್ನೇಹ ಕುಟುಂಬಸ್ಥರಿಗೆ ಇಷ್ಟವಿರಲಿಲ್ಲ. ಘಟನೆಯ ದಿನ ನಾನು ಸ್ಥಳದಲ್ಲಿದ್ದೆ. ಆದರೆ, ಯುವತಿ ತಾಯಿ ಮತ್ತು ಸಹೋದರ ನನ್ನನ್ನು ಮನೆಗೆ ಕಳುಹಿಸಿದ್ದರು. ಆ ನಂತರ ನನ್ನನ್ನು ಆರೋಪಿಯೆಂದು ಬಂಧಿಸಿ ಜೈಲಿಗೆ ಕರೆತರಲಾಯಿತು. ಯುವತಿಯ ಮೇಲೆ ಆಕೆ ತಾಯಿ ಮತ್ತು ಸೋದರ ಹಲ್ಲೆ ನಡೆಸಿದ್ದರಿಂದ ಅವಳು ಸಾವನ್ನಪ್ಪಿದ್ದಾಳೆ. ಆದರೆ, ಈ ಪ್ರಕರಣವನ್ನು ನಮ್ಮ ಮೇಲೆ ಹಾಕಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ನಾವಿಬ್ಬರು ಸ್ನೇಹ ಇದ್ದ ಕಾರಣ ಪೋನ್ ನಲ್ಲಿ ಮಾತನಾಡುತ್ತಿದ್ದೇವು. ಹೊಲದಲ್ಲಿ ನನ್ನ ಜೊತೆಗಿನ ಸ್ನೇಹದ ವಿಚಾರವಾಗಿ ಆಕೆಯ ಮೇಲೆ ಕುಟುಂಬಸ್ಥರು ಹಲ್ಲೆ ನಡೆಸಿರುವ ವಿಚಾರ ನನಗೆ ತಿಳಿಯಿತು. ಹಲ್ಲೆ ಆರೋಪದಿಂದ ತಪ್ಪಿಸಿಕೊಳ್ಳಲು ಯುವತಿಯ ತಾಯಿ ಮತ್ತು ಸಹೋದರ ಸುಳ್ಳು ಆರೋಪ ಮಾಡಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಕೋವಿಡ್ ಬಾಧಿತ ಮಕ್ಕಳಿಗೆ ಕವಾಸಾಕಿ ಕಾಯಿಲೆ ಕಾಟ :ಏನಿದು ಕಾಯಿಲೆ? ಲಕ್ಷಣಗಳೇನು?

ಕೋವಿಡ್ ಬಾಧಿತ ಎಲ್ಲ ಮಕ್ಕಳಲ್ಲೂ ಇದು ಕಂಡು ಬಂದಿಲ್ಲವಾದರೂ, ಭಾರತ ಸೇರಿ ವಿಶ್ವಾದ್ಯಂತ ಹಲವಾರು ಪ್ರಕರಣಗಳು ವರದಿಯಾಗಿವೆ.ಕೋವಿಡ್ ಬಾಧಿತ ಮಕ್ಕಳಲ್ಲಿ, ಸೋಂಕಿಗೆ ಒಳಗಾದ 2-3 ವಾರಕ್ಕೆ

ಕೊರೊನಾಗೆ ಪ್ರಾಣಾಯಾಮವೇ ಪರಿಣಾಮಕಾರಿ- ಬಾಬಾ ರಾಮ್ ದೇವ್!

ಕೊರೊನಾ ಕಾಣಿಸಿಕೊಂಡ ದಿನದಿಂದಲೂ ಇಲ್ಲಿಯವರೆಗೂ ಔಷಧಿ ತಯಾರಿಸಲು ನಾವು ತಯಾರಿ ನಡೆಸುತ್ತಿದ್ದೇವೆ. ಇದಕ್ಕೆ ಪ್ರಾಣಾಯಾಮ ಪರಿಣಾಮಕಾರಿಯಾಗಿದೆ

ಒಬ್ಬನ ಕೊಲ್ಲಲು ಇಲ್ಲಿ ಲಾಂಗ್ ಹಿಡಿದು ಬಂದವರು ಎಷ್ಟು ಜನ ಗೊತ್ತಾ?

ಮುಂಬಯಿ : ಒಬ್ಬನನ್ನು ಕೊಲ್ಲಲು ನೂರು ಜನ ಲಾಂಗ್ ಹಿಡಿದುಕೊಂಡು ಬಂದಿದ್ದ ಘಟನೆ ಬೆಳಕಿಗೆ ಬಂದಿದೆ. ಈ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.

ಬಿಹಾರ ಹಾಳು ಮಾಡಿದ್ದು, ಯುಪಿಎ ಹಾಗೂ ಮೈತ್ರಿ – ಮೋದಿ!

ಬಿಹಾರ : ಯುಪಿಎ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಬಿಹಾರದಲ್ಲಿ ನಿತೀಶ್ ಕುಮಾರ್ ಸಿಎಂ ಆಗಿದ್ದರು. ಆದರೆ, ಅವರ ಪ್ರತಿಯೊಂದು ನಿರ್ಧಾರಗಳಿಗೆ ಕಾಂಗ್ರೆಸ್ ಅಡ್ಡಗಾಲು ಹಾಕಿತು. ಹೀಗಾಗಿ ರಾಜ್ಯ ಅಭಿವೃದ್ಧಿಯಿಂದ ಹಿಂದೆ ಉಳಿಯಬೇಕಾಯಿತು ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದಾರೆ.