ಲಕ್ನೋ: ಹತ್ರಾಸ್ ಪ್ರಕರಣದ ಪ್ರಮುಖ ಆರೋಪಿ ಸಂದೀಪ್ ಎಸ್ಪಿಪಗೆ ಪತ್ರ ಬರೆದಿರುವ ವಿಚಾರ ಬೆಳಕಿಗೆ ಬಂದಿದೆ. ಆರೋಪಿಯು ಸೆ. 7ರಂದು ಜೈಲಿನಿಂದಲೇ ಹತ್ರಾಸ್ ಎಸ್ ಪಿಗೆ ಪತ್ರ ಬರೆದಿದ್ದಾನೆ.
ಸಂದೀಪ್ ಸೇರಿದಂತೆ ಇನ್ನುಳಿದ ಮೂವರು ಅಪರಾಧಿಗಳು ಅದಕ್ಕೆ ಸಹಿ ಮಾಡಿದ್ದಾರೆ. ಪತ್ರದಲ್ಲಿ ಆಕೆಯ ತಾಯಿ ಮತ್ತು ಸೋದರನ ವಿರುದ್ಧ ಆರೋಪ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಯುವತಿ ಜೊತೆ ನನ್ನ ಸ್ನೇಹವಿತ್ತು. ಆದರೆ, ನಮ್ಮಿಬ್ಬರ ಸ್ನೇಹ ಕುಟುಂಬಸ್ಥರಿಗೆ ಇಷ್ಟವಿರಲಿಲ್ಲ. ಘಟನೆಯ ದಿನ ನಾನು ಸ್ಥಳದಲ್ಲಿದ್ದೆ. ಆದರೆ, ಯುವತಿ ತಾಯಿ ಮತ್ತು ಸಹೋದರ ನನ್ನನ್ನು ಮನೆಗೆ ಕಳುಹಿಸಿದ್ದರು. ಆ ನಂತರ ನನ್ನನ್ನು ಆರೋಪಿಯೆಂದು ಬಂಧಿಸಿ ಜೈಲಿಗೆ ಕರೆತರಲಾಯಿತು. ಯುವತಿಯ ಮೇಲೆ ಆಕೆ ತಾಯಿ ಮತ್ತು ಸೋದರ ಹಲ್ಲೆ ನಡೆಸಿದ್ದರಿಂದ ಅವಳು ಸಾವನ್ನಪ್ಪಿದ್ದಾಳೆ. ಆದರೆ, ಈ ಪ್ರಕರಣವನ್ನು ನಮ್ಮ ಮೇಲೆ ಹಾಕಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ನಾವಿಬ್ಬರು ಸ್ನೇಹ ಇದ್ದ ಕಾರಣ ಪೋನ್ ನಲ್ಲಿ ಮಾತನಾಡುತ್ತಿದ್ದೇವು. ಹೊಲದಲ್ಲಿ ನನ್ನ ಜೊತೆಗಿನ ಸ್ನೇಹದ ವಿಚಾರವಾಗಿ ಆಕೆಯ ಮೇಲೆ ಕುಟುಂಬಸ್ಥರು ಹಲ್ಲೆ ನಡೆಸಿರುವ ವಿಚಾರ ನನಗೆ ತಿಳಿಯಿತು. ಹಲ್ಲೆ ಆರೋಪದಿಂದ ತಪ್ಪಿಸಿಕೊಳ್ಳಲು ಯುವತಿಯ ತಾಯಿ ಮತ್ತು ಸಹೋದರ ಸುಳ್ಳು ಆರೋಪ ಮಾಡಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.