ಲಕ್ನೋ: ಹತ್ರಾಸ್ ಪ್ರಕರಣದ ಪ್ರಮುಖ ಆರೋಪಿ ಸಂದೀಪ್ ಎಸ್ಪಿಪಗೆ ಪತ್ರ ಬರೆದಿರುವ ವಿಚಾರ ಬೆಳಕಿಗೆ ಬಂದಿದೆ. ಆರೋಪಿಯು ಸೆ. 7ರಂದು ಜೈಲಿನಿಂದಲೇ ಹತ್ರಾಸ್ ಎಸ್ ಪಿಗೆ ಪತ್ರ ಬರೆದಿದ್ದಾನೆ.

ಸಂದೀಪ್ ಸೇರಿದಂತೆ ಇನ್ನುಳಿದ ಮೂವರು ಅಪರಾಧಿಗಳು ಅದಕ್ಕೆ ಸಹಿ ಮಾಡಿದ್ದಾರೆ. ಪತ್ರದಲ್ಲಿ ಆಕೆಯ ತಾಯಿ ಮತ್ತು ಸೋದರನ ವಿರುದ್ಧ ಆರೋಪ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಯುವತಿ ಜೊತೆ ನನ್ನ ಸ್ನೇಹವಿತ್ತು. ಆದರೆ, ನಮ್ಮಿಬ್ಬರ ಸ್ನೇಹ ಕುಟುಂಬಸ್ಥರಿಗೆ ಇಷ್ಟವಿರಲಿಲ್ಲ. ಘಟನೆಯ ದಿನ ನಾನು ಸ್ಥಳದಲ್ಲಿದ್ದೆ. ಆದರೆ, ಯುವತಿ ತಾಯಿ ಮತ್ತು ಸಹೋದರ ನನ್ನನ್ನು ಮನೆಗೆ ಕಳುಹಿಸಿದ್ದರು. ಆ ನಂತರ ನನ್ನನ್ನು ಆರೋಪಿಯೆಂದು ಬಂಧಿಸಿ ಜೈಲಿಗೆ ಕರೆತರಲಾಯಿತು. ಯುವತಿಯ ಮೇಲೆ ಆಕೆ ತಾಯಿ ಮತ್ತು ಸೋದರ ಹಲ್ಲೆ ನಡೆಸಿದ್ದರಿಂದ ಅವಳು ಸಾವನ್ನಪ್ಪಿದ್ದಾಳೆ. ಆದರೆ, ಈ ಪ್ರಕರಣವನ್ನು ನಮ್ಮ ಮೇಲೆ ಹಾಕಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ನಾವಿಬ್ಬರು ಸ್ನೇಹ ಇದ್ದ ಕಾರಣ ಪೋನ್ ನಲ್ಲಿ ಮಾತನಾಡುತ್ತಿದ್ದೇವು. ಹೊಲದಲ್ಲಿ ನನ್ನ ಜೊತೆಗಿನ ಸ್ನೇಹದ ವಿಚಾರವಾಗಿ ಆಕೆಯ ಮೇಲೆ ಕುಟುಂಬಸ್ಥರು ಹಲ್ಲೆ ನಡೆಸಿರುವ ವಿಚಾರ ನನಗೆ ತಿಳಿಯಿತು. ಹಲ್ಲೆ ಆರೋಪದಿಂದ ತಪ್ಪಿಸಿಕೊಳ್ಳಲು ಯುವತಿಯ ತಾಯಿ ಮತ್ತು ಸಹೋದರ ಸುಳ್ಳು ಆರೋಪ ಮಾಡಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಶೇಂಗಾ ಚಿಕ್ಕಿಗೀಗ ಜಿಐ ಮಾನ್ಯತೆ

ಶೇಂಗಾ ಚಿಕ್ಕಿ ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಶೇಂಗಾ ಚಿಕ್ಕಿ ರುಚಿಯ ಜೊತೆಗೆ ಪೌಷ್ಟಿಕವೂ ಹೌದು. ಅಂತಹ ಶೇಂಗಾ ಚಿಕ್ಕಿಗೀಗ ಜಿಐ ಮಾನ್ಯತೆ ದೊರೆತಿದೆ. ಏನಿದು ಐಜಿ ಮಾನ್ಯತೆ ಎಂದರೆ…??

ಯುದ್ಧಕ್ಕೆ ಸಿದ್ಧ ಎಂಬ ಸಂದೇಶವನ್ನು ಚೀನಾಕ್ಕೆ ನೀಡುತ್ತಿದೆ ಭಾರತ?

ಲಡಾಖ್‌: ಲಡಾಖ್‌ನಲ್ಲಿ ಚೀನಾ ಸೇನೆಯಿಂದ ಗಡಿ ಕ್ಯಾತೆ ಮುಂದುವರೆದ ನಡುವೆಯೇ ಭಾರತ ಯುದ್ಧಕ್ಕೆ ಸಿದ್ಧ ಎಂಬ…

ಗಡಿಯಲ್ಲಿ ಕ್ಯಾತೆ ಆರಂಭಿಸಿದ ಚೀನಾ!

ನವದೆಹಲಿ: ಉತ್ತರ ಸಿಕ್ಕಿಂ ನಲ್ಲಿ ಚೀನಾದ ಸೈನಿಕರು ಭಾರತೀಯ ಸೈನಿಕರೊಂದಿಗೆ ಕ್ಯಾತಿ ತೆಗೆದಿದ್ದಾರೆ. ಪರಿಣಾಮವಾಗಿ ಭಾರತೀಯ…

ದೇಶದಲ್ಲಿ 73 ಲಕ್ಷದ ಗಡಿ ದಾಟಿದ ಮಹಾಮಾರಿ!

ನವದೆಹಲಿ : ದೇಶದಲ್ಲಿ ಮಹಾಮಾರಿಯ ಅಟ್ಟಹಾಸ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 63,371 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ, 895 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.