ನರೇಗಲ್ಲ: ಅಂತ್ಯಕ್ರಿಯೇಗೆ ಸರಿಯಾದ ವ್ಯವಸ್ಥೆ ಇಲ್ಲದ ಕಾರಣ ಹಾಗೂ ಕೆಸರು ಗದ್ದೆಯಂತಾದ ರಸ್ತೆಗಳಿಂದ ಶವಸಂಸ್ಕಾರಕ್ಕೆ ಜನರು ಪರದಾಡುವಂತಾಗಿದ್ದು, ಈ ಬಗ್ಗೆ ಸ್ಥಳೀಯ ಪಟ್ಟಣ ಪಂಚಾಯತಿ ಗಮನ ಹರಿಸದೇ ಇರುವ ಕ್ರಮ ಖಂಡಿಸಿ ಇಂದು ನರೇಗಲ್ ಪಟ್ಟಣ ಪಂಚಾಯತಿ ಎದುರು ಶವ ಇಟ್ಟು ಪ್ರತಿಭಟನೆ ನಡೆಸಿದ ಘಟನೆ ನರೇಗಲ್ಲನಲ್ಲಿ ನಡೆಯಿತು.

ಇಲ್ಲಿನ 14ನೇ ವಾರ್ಡಿನ ನಿವಾಸಿಗಳು ಪ್ರತಿಭಟನೆ ನಡೆಸಿ ಪಟ್ಟಣ ಪಂಚಾಯತಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದರು. ಈಗಾಗಲೇ ಈ ಬಗ್ಗೆ ಸಾಕಷ್ಟು ಬಾರಿ ಅಧಿಕಾರಿಗಳ ಗಮನಕ್ಕೆ ತರಲಾಗಿದ್ದು, ಅಧಿಕಾರಿಗಳು ಸಂಪೂರ್ಣ ನಿರ್ಲಕ್ಷ್ಯ ತೋರಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದರು.

ಸ್ಮಶಾನಕ್ಕೆ ಹೋಗುವ ದಾರಿ ಹಾಗೂ ಹೂಳುವ ಜಾಗ ಹದಿಗೆಟ್ಟಿದೆ ಅದನ್ನು ಅಭಿವೃದ್ಧಿ ಪಡಿಸಿ ಎಂದು ಐದಾರು ತಿಂಗಳಿನಿಂದ ಹೇಳಿದರೂ, ಅಭಿವೃದ್ಧಿಗೆ ಮುಂದಾಗಿಲ್ಲ ಎಂದು ಪಟ್ಟಣ ಪಂಚಾಯತಿ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.

ರಸ್ತೆಯಲ್ಲ ಕೆಸರು ಗದ್ದೆಯಾಗಿದೆ ಹಾಗೂ ಸ್ಮಶಾನದ ತುಂಬೆಲ್ಲ ನೀರು ನಿಂತಿದೆ. ಗಿಡ ಕಂಟಿ ಬೆಳೆದು ಸ್ಮಶಾನ ಹುಡುಕುವ ಸ್ಥಿತಿ ಬಂದಿದೆ. ಒಬ್ಬರ ಶವವನ್ನು ಪಟ್ಟಣ ಪಂಚಾಯ್ತಿ ಎದುರು ಇಟ್ಟು ಪ್ರತಿಭಟಿಸಿದರು.

ಸ್ಥಳೀಯರು ಈ ಹಿಂದೆ ರಸ್ತೆ, ಸ್ಮಶಾನ ಅಭಿವೃದ್ಧಿ ಮಾಡಿಸುವಂತೆ ಹಲವು ಬಾರಿ ಮನವಿ ಮಾಡಿದ್ದರು. ಆದರೆ ಅಧಿಕಾರಿಗಳು ನೆಪ ಹೇಳುತ್ತಾ ದಿನಗಳನ್ನು ಮುಂದೆ ಹಾಕಿದ್ದಾರೆ. ಸ್ಮಶಾನಕ್ಕೆ ಹೋಗುವ ರಸ್ತೆ ಒತ್ತುವರಿಯಾಗಿದೆ ತೆರವು ಮಾಡಬೇಕೆಂದು ಒತ್ತಾಯಿಸಿದರು.

ಸ್ಥಳಕ್ಕೆ ಆಗಮಿಸಿದ ನರೇಗಲ್ ಪೊಲೀಸ್ ಠಾಣೆಯ ಪಿಎಸ್ಐ ಬಸವರಾಜ ಬಿ. ಕೊಳ್ಳಿ, ಮುಖ್ಯಾಧಿಕಾರಿ ಮಹೇಶ ಬಿ. ನಿಡಶೇಸಿ, ಪಟ್ಟಣ ಪಂಚಾಯ್ತಿ ಆರೋಗ್ಯ ನಿರೀಕ್ಷಕು ರಾಮಚಂದ್ರ ಕಜ್ಜಿಯವರು ಸ್ಥಳೀಯರನ್ನು ಮನವೊಲಿಸಿದರು.

ಈ ವೇಳೆ ಮುಖ್ಯಾಧಿಕಾರಿ ಕೆಲವೇ ದಿನಗಳಲ್ಲಿ ಅಭಿವೃದ್ದಿ ಪಡಿಸುವ ಭರವಸೆಯನ್ನು ನೀಡಿದರು. ಸ್ಥಳದಲ್ಲಿ ಶೇಖಪ್ಪ ಲಕ್ಕನಗೌಡ್ರ, ಆನಂದ ಕಳಕೊಣ್ಣವರ, ಮಲ್ಲಪ್ಪ ಗಂಗರಗೊಂಡ. ಶಶಿ ಹಕ್ಕಿ, ಸತೀಶ್ ಮಾಳವಾಡ, ಚಂದ್ರು ಲಕ್ಕನಗೌಡ್ರ, ವೀರುಪಾಕ್ಷಿ ಸೋಮಗೊಂಡ ಇದ್ದರು.

Leave a Reply

Your email address will not be published. Required fields are marked *

You May Also Like

ಆಕಸ್ಮಿಕ ಬೆಂಕಿ: ಮನೆಯ ಮೇಲಿಟ್ಟ ವಸ್ತುಗಳಿಗೆ ಹಾನಿ

ರೋಣ: ಆಕಸ್ಮಿಕವಾಗಿ ಕಾಣಿಸಿಕೊಂಡ ಬೆಂಕಿಯಿಂದ ಮನೆಯ ಮೇಲಿಟ್ಟ ವಸ್ತುಗಳು ಸುಟ್ಟ ಘಟನೆ ರೋಣ ಪಟ್ಟಣದಲ್ಲಿ ನಡೆದಿದೆ.

ಕುರುಬರಿಗೆ ಮೀಸಲಾತಿ ಸಿಗುವವರೆಗೂ ನಮ್ಮ ಹೋರಾಟ ನಿಲ್ಲದು – ಈಶ್ವರಪ್ಪ!

ನೆಲಮಂಗಲ : ಕುರುಬ ಸಮುದಾಯಕ್ಕೆ ಎಸ್ಟಿ ಮೀಸಲಾತಿ ಸಿಗುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಐಪಿಎಲ್ ಬೆಟ್ಟಿಂಗ್ : ಗದಗನಲ್ಲಿ ಕೆಲವರ ಬಂಧನ

ಐಪಿಎಲ್ ಆರಂಭವಾದರೆ ಜೊತೆಗೆ ಬೆಟ್ಟಿಂಗ್ ದಂಧೆಗೂ ರೆಕ್ಕೆ ಪುಕ್ಕ ಬರುತ್ತವೆ. ಗದಗ ನಗರದಲ್ಲಿ ಐಪಿಎಲ್ ಬೆಟ್ಟಿಂಗ್ ನಡೆಸುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶಿವಾಜಿ ಮಹಾರಾಜರ ಜಯಂತಿ ಆಚರಿಸಲು ಷರತ್ತು ಬದ್ದ ಅನುಮತಿ

ಉತ್ತರಪ್ರಭ ಗದಗ:ದಿನಾಂಕ: 19.02.2022 ರಂದು ಶಿವಾಜಿ ಮಹಾರಾಜರ ಜಯಂತಿಯನ್ನು ಮುನ್ಸಿಪಲ್ ಹೈ-ಸ್ಕೂಲ್ ಮೈದಾನದಲ್ಲಿ ಆಚರಿಸಲು ಷರತ್ತು…