ನರೇಗಲ್ಲ: ಅಂತ್ಯಕ್ರಿಯೇಗೆ ಸರಿಯಾದ ವ್ಯವಸ್ಥೆ ಇಲ್ಲದ ಕಾರಣ ಹಾಗೂ ಕೆಸರು ಗದ್ದೆಯಂತಾದ ರಸ್ತೆಗಳಿಂದ ಶವಸಂಸ್ಕಾರಕ್ಕೆ ಜನರು ಪರದಾಡುವಂತಾಗಿದ್ದು, ಈ ಬಗ್ಗೆ ಸ್ಥಳೀಯ ಪಟ್ಟಣ ಪಂಚಾಯತಿ ಗಮನ ಹರಿಸದೇ ಇರುವ ಕ್ರಮ ಖಂಡಿಸಿ ಇಂದು ನರೇಗಲ್ ಪಟ್ಟಣ ಪಂಚಾಯತಿ ಎದುರು ಶವ ಇಟ್ಟು ಪ್ರತಿಭಟನೆ ನಡೆಸಿದ ಘಟನೆ ನರೇಗಲ್ಲನಲ್ಲಿ ನಡೆಯಿತು.

ಇಲ್ಲಿನ 14ನೇ ವಾರ್ಡಿನ ನಿವಾಸಿಗಳು ಪ್ರತಿಭಟನೆ ನಡೆಸಿ ಪಟ್ಟಣ ಪಂಚಾಯತಿ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತ ಪಡಿಸಿದರು. ಈಗಾಗಲೇ ಈ ಬಗ್ಗೆ ಸಾಕಷ್ಟು ಬಾರಿ ಅಧಿಕಾರಿಗಳ ಗಮನಕ್ಕೆ ತರಲಾಗಿದ್ದು, ಅಧಿಕಾರಿಗಳು ಸಂಪೂರ್ಣ ನಿರ್ಲಕ್ಷ್ಯ ತೋರಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದರು.

ಸ್ಮಶಾನಕ್ಕೆ ಹೋಗುವ ದಾರಿ ಹಾಗೂ ಹೂಳುವ ಜಾಗ ಹದಿಗೆಟ್ಟಿದೆ ಅದನ್ನು ಅಭಿವೃದ್ಧಿ ಪಡಿಸಿ ಎಂದು ಐದಾರು ತಿಂಗಳಿನಿಂದ ಹೇಳಿದರೂ, ಅಭಿವೃದ್ಧಿಗೆ ಮುಂದಾಗಿಲ್ಲ ಎಂದು ಪಟ್ಟಣ ಪಂಚಾಯತಿ ಅಧಿಕಾರಿಯನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.

ರಸ್ತೆಯಲ್ಲ ಕೆಸರು ಗದ್ದೆಯಾಗಿದೆ ಹಾಗೂ ಸ್ಮಶಾನದ ತುಂಬೆಲ್ಲ ನೀರು ನಿಂತಿದೆ. ಗಿಡ ಕಂಟಿ ಬೆಳೆದು ಸ್ಮಶಾನ ಹುಡುಕುವ ಸ್ಥಿತಿ ಬಂದಿದೆ. ಒಬ್ಬರ ಶವವನ್ನು ಪಟ್ಟಣ ಪಂಚಾಯ್ತಿ ಎದುರು ಇಟ್ಟು ಪ್ರತಿಭಟಿಸಿದರು.

ಸ್ಥಳೀಯರು ಈ ಹಿಂದೆ ರಸ್ತೆ, ಸ್ಮಶಾನ ಅಭಿವೃದ್ಧಿ ಮಾಡಿಸುವಂತೆ ಹಲವು ಬಾರಿ ಮನವಿ ಮಾಡಿದ್ದರು. ಆದರೆ ಅಧಿಕಾರಿಗಳು ನೆಪ ಹೇಳುತ್ತಾ ದಿನಗಳನ್ನು ಮುಂದೆ ಹಾಕಿದ್ದಾರೆ. ಸ್ಮಶಾನಕ್ಕೆ ಹೋಗುವ ರಸ್ತೆ ಒತ್ತುವರಿಯಾಗಿದೆ ತೆರವು ಮಾಡಬೇಕೆಂದು ಒತ್ತಾಯಿಸಿದರು.

ಸ್ಥಳಕ್ಕೆ ಆಗಮಿಸಿದ ನರೇಗಲ್ ಪೊಲೀಸ್ ಠಾಣೆಯ ಪಿಎಸ್ಐ ಬಸವರಾಜ ಬಿ. ಕೊಳ್ಳಿ, ಮುಖ್ಯಾಧಿಕಾರಿ ಮಹೇಶ ಬಿ. ನಿಡಶೇಸಿ, ಪಟ್ಟಣ ಪಂಚಾಯ್ತಿ ಆರೋಗ್ಯ ನಿರೀಕ್ಷಕು ರಾಮಚಂದ್ರ ಕಜ್ಜಿಯವರು ಸ್ಥಳೀಯರನ್ನು ಮನವೊಲಿಸಿದರು.

ಈ ವೇಳೆ ಮುಖ್ಯಾಧಿಕಾರಿ ಕೆಲವೇ ದಿನಗಳಲ್ಲಿ ಅಭಿವೃದ್ದಿ ಪಡಿಸುವ ಭರವಸೆಯನ್ನು ನೀಡಿದರು. ಸ್ಥಳದಲ್ಲಿ ಶೇಖಪ್ಪ ಲಕ್ಕನಗೌಡ್ರ, ಆನಂದ ಕಳಕೊಣ್ಣವರ, ಮಲ್ಲಪ್ಪ ಗಂಗರಗೊಂಡ. ಶಶಿ ಹಕ್ಕಿ, ಸತೀಶ್ ಮಾಳವಾಡ, ಚಂದ್ರು ಲಕ್ಕನಗೌಡ್ರ, ವೀರುಪಾಕ್ಷಿ ಸೋಮಗೊಂಡ ಇದ್ದರು.

Leave a Reply

Your email address will not be published. Required fields are marked *

You May Also Like

ಗದಗ ಸಮಾಜ ಕಲ್ಯಾಣ ಇಲಾಖೆಯ ವಿವಿಧ ವಸತಿ ನಿಲಯಗಳಲ್ಲಿ ಸಂತ ಶ್ರೀ ಸೇವಾಲಾಲ್ ಮಹಾರಾಜರ 283 ನೇ ಜಯಂತಿಯ ಆಚರಣೆ

ಗದಗ:PPG SC/ST ವಸತಿ ನಿಲಯ ಗದಗದಲ್ಲಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಜಯಂತಿ ಆಚರಿಸಲಾಯಿತು.ಈ ಸಂದರ್ಭದಲ್ಲಿ…

ಬೆಳಿಗ್ಗೆ ಅಪ್ಪನ ಸಾವಿನ ದುರಂತ: ಗದಗನಲ್ಲಿ ಎಸ್.ಎಸ್.ಎಲ್.ಸಿ ಅಗ್ನಿ ಪರಿಕ್ಷೆ ಎದುರಿಸಿದ ಅನುಷಾ!

ಗದಗ: ಮುಂಜಾನೆ ಮರಳಿ ಬಾರದ ಲೋಕಕ್ಕೆ ಅಪ್ಪ ಹೋಗಿದ್ದಾನೆ. ಮನೆ ತುಂಬ ದು:ಖದ ವಾತಾವರಣ. ನೆರೆಹೊರೆಯವರು, ಸಂಬಂಧಿಕರು ಜಮಾಯಿಸುತ್ತಿದ್ದಾರೆ. ಈ ದುಗೂಡದಲ್ಲಿಯೂ ಗದಗಿನ ಈಶ್ವರ ನಗರದ ನಿವಾಸಿ, ತೋಂಟದಾರ್ಯ ಪ್ರೌಢ ಶಾಲೆಯ ವಿದ್ಯಾರ್ಥಿನಿ 16ರ ಬಾಲಕಿ ಪಾಲಿಗೆ ಇವತ್ತಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಕೇವಲ ಪರೀಕ್ಷೆ ಆಗಿರಲಿಲ್ಲ. ಇದು ಅಗ್ನಿ ಪರೀಕ್ಷೆ, ಧರ್ಮ ಪರೀಕ್ಷೆ.

ಗದಗನಲ್ಲಿಂದು ಒಂದು ಕೊರೊನಾ ಪಾಸಿಟಿವ್!

ಗದಗ: ಜಿಲ್ಲೆಯಲ್ಲಿಂದು ಒಂದು ಕೊರೊನಾ ಪಾಸಟಿವ್ ಪ್ರಕರಣ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 79…

ಕೊರ್ಲಹಳ್ಳಿಯಲ್ಲಿ ನೀರಿನ ಗೋಳು: ತುಂಗೆಯ ಪಾತ್ರದಲ್ಲೂ ನೀರಿಗೆ ತಾಪತ್ರಯ!

ನದಿ ನೀರಿನ ಪಾತ್ರದ ಗ್ರಾಮಗಳಲ್ಲೂ ನೀರಿನ ಸಮಸ್ಯೆ ಇದೆ ಎಂದರೆ ನಿಜಕ್ಕೂ ಆಶ್ಚರ್ಯ. ಹೌದು ನೀರಿನ ಸಮಸ್ಯೆ ಎಂದರೆ ಒಂದೆಡೆ ಆಳುವವರ ನಿರ್ಲಕ್ಷ್ಯ, ಮತ್ತೊಂದೆಡೆ ಇರುವ ಶುದ್ಧ ಕುಡಿಯುವ ನೀರಿನ ಘಟಕದ ಹೆಚ್ಚಿನ ಹಣದ ವಸೂಲಿ. ಇದರಿಂದ ಗ್ರಾಮಸ್ಥರು ತತ್ತಿರಿಸುವಂತಾದ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಕೊರ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.