ಜೈಪುರ : 6 ವರ್ಷಗಳಿಂದ ಪ್ರೀತಿ ಮಾಡುತ್ತಿದ್ದ ಯುವತಿ ಕೈ ಕೊಟ್ಟಿದ್ದಾಳೆ ಎಂಬ ಕಾರಣಕ್ಕೆ ಯುವಕನೊಬ್ಬ ಇಡೀ ಸಮಾಜವೇ ತಲೆ ತಗ್ಗಿಸುವಂತಹ ನೀಚ ಕೃತ್ಯಕ್ಕೆ ಕೈ ಹಾಕಿರುವ ಘಟನೆ ನಡೆದಿದೆ. 

ಯುವತಿಯ ಫೋಟೋ ಎಡಿಟ್ ಮಾಡಿ ಸೆಕ್ಸ್ ವರ್ಕರ್ ಎಂದು ಹಾಕಿ ನಂಬರ್ ಅಪ್ಲೋಡ್ ಮಾಡಿದ್ದಾನೆ. ಯುವತಿ ಜೈಪುರ ನಗರದ ಮಾನಸರೋವರ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿದ್ದಾರೆ. ಹುಡುಗನ ಕೃತ್ಯಕ್ಕೆ ಮನನೊಂದು  ಯುವಕನ ವಿರುದ್ಧ ದೂರು ದಾಖಲಿಸಿದ್ದಾರೆ. 

 ಈ ಯುವತಿ ಕಳೆದ 6 ವರ್ಷಗಳಿಂದ ಲಕ್ಷ್ ಎಂಬ ಯುವಕನನ್ನು ಪ್ರೀತಿಸುತ್ತಿದ್ದರು. ಆದರೆ, ಇತ್ತೀಚೆಗೆ ಇಬ್ಬರ ಮಧ್ಯೆ ಭಿನ್ನಾಭಿಪ್ರಾಯ ಉಂಟಾಗಿದೆ. ಹೀಗಾಗಿ ಯುವತಿ ಬ್ರೇಕಪ್ ಮಾಡಿಕೊಂಡಿದ್ದಾಳೆ. 

ಇದಕ್ಕೆ ಕೋಪಗೊಂಡ ಹುಡುಗ, ಯುವತಿಯ ಪೋಟೋ ಎಡಿಟ್ ಮಾಡಿ ಮೊಬೈಲ್ ನಂಬರ್ ಹಾಕಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾನೆ. ಇದರೊಂದಿಗೆ ಮನೆಯ ವಿಳಾಸವನ್ನು ಕೂಡ ಹಾಕಿದ್ದಾನೆ. ಕಳೆದ 6 ತಿಂಗಳಿನಿಂದ ಯುವತಿಗೆ ಅಪರಿಚಿತರು ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಿದ್ದಾರೆ. ಹೀಗಾಗಿ ಯುವತಿ ಮಾನಸಿಕವಾಗಿ ತುಂಬಾ ನೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. 

Leave a Reply

Your email address will not be published. Required fields are marked *

You May Also Like

ಹತ್ರಾಸ್ ಅತ್ಯಾಚಾರ ಪ್ರಕರಣ – ಆಘಾತಕಾರಿ ವಿಷಯ ಹೊರ ಹಾಕಿದ ಪೊಲೀಸರು!

ಲಕ್ನೋ : ಹತ್ರಾಸ್ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತೊಂದು ಆಘಾತಕಾರಿ ಸಂಗತಿ ಹೊರ ಹಾಕಿದ್ದಾರೆ.

ನಿಮ್ಮ ಡೇಟಾ ಇದ್ದರೆ ಕೂಡಲೇ ಸೇವ್ ಮಾಡಿಕೊಳ್ಳಿ

ಫೆ.24 ರಿಂದ ಆಚೆಗೆ ತನ್ನ ಪ್ಲೇ ಮ್ಯೂಸಿಕ್ ಅಪ್ಲಿಕೇಶನ್ ಅನ್ನು ಸ್ಥಗಿತಗೊಳಿಸುವುದಾಗಿ ತನ್ನ ಬಳಕೆದಾರರಿಗೆ ಇ-ಮೇಲ್ ಮುಖಾಂತರ ಈಗಾಗಲೇ ತಿಳಿಸಿದೆ.

ಅನಾರೋಗ್ಯ ಹಿನ್ನೆಲೆ ಬಾಲಿವುಡ್ ನಟ ರಿಷಿ ಕಪೂರ್ ಆಸ್ಪತ್ರೆಗೆ ದಾಖಲು

ಅನಾರೋಗ್ಯದ ಹಿನ್ನೆಲೆಯಲ್ಲಿ ಬಾಲಿವುಡ್ ನ ಹಿರಿಯ ನಟ ರಿಷಿ ಕಪೂರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ.ಈ ಕುರಿತು ರಿಷಿ ಅವರ ಸಹೋದರ ರಣಧೀರ್ ಕಪೂರ್ ತಿಳಿಸಿದ್ದಾರೆ.

ರೈತರ ವಿರುದ್ಧ ನಿಂತಿದೆ “ನಾಗ” ಕಂಪನಿ: ಶ್ರೀ ಹರ್ಷಾನಂದ್ ಜಿ. ಮಹಾರಾಜ್

ರೈತರ ವಿರುದ್ಧ ‘ನಾಗ’ಎಂಬ ಕಂಪನಿ ನಿಂತಿದೆ. ನಾಗ ಎಂದರೆ“ನರೇಂದ್ರ, ಅಮಿತ್‌, ಗೌತಮ್‌, ಅದಾನಿ’ ಹೀಗೆ ಹೇಳಿದ್ದು ಯೋಗ ದರ್ಶನ ಪಾರಮಾರ್ಥಿಕ ಟ್ರಸ್ಟ್‌ ಸಂಸ್ಥಾಪಕ ಶ್ರೀ ಹರ್ಷಾನಂದಜಿ ಮಹಾರಾಜ್‌.