ಬೆಂಗಳೂರು : ಇತ್ತೀಚೆಗಷ್ಟೇ ನಿಧನರಾಗಿರುವ ನಟ ಚಿರಂಜೀವಿ ಸರ್ಜಾ ಅವರ ಪತ್ನಿ ಮೇಘನಾ ರಾಜ್ ಅವರು ಅಭಿಮಾನಿಗಳು ಗುಡ್ ನ್ಯೂಸ್ ಕೊಟ್ಟಿದ್ದಾರೆ.

ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಮೇಘನಾ ಅವರ ಸೀಮಂತ ಕಾರ್ಯ ನಡೆದಿದೆ. ಇದರ ಬೆನ್ನಲ್ಲಿಯೇ ಅಭಿಮಾನಿಗಳೊಂದಿಗೆ ಮೇಘನಾ ಸಂತಸದಿಂದ ಮಾತನಾಡಿದ್ದಾರೆ. ಚಿರಂಜೀವಿ ಸರ್ಜಾ ಅವರು ಕೊನೆಯ ಬಾರಿ ನಟಿಸಿದ್ದ ಚಿತ್ರ ಶಿವಾರ್ಜುನ. ಈ ಸಿನಿಮಾ ಅ. 16ರಂದು ತೆರೆಯ ಮೇಲೆ ಬರಲಿದೆ. ಈ ಸಿಹಿ ಸುದ್ದಿಯನ್ನು ಮೇಘನಾ ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಚಿರು ಮತ್ತೆ ಉದಯಿಸುತ್ತಿದ್ದಾರೆ, ಅದಕ್ಕೆ ಕಾರಣ ಅಕ್ಟೋಬರ್ 16ರಂದು ಶಿವಾರ್ಜುನ ಸಿನಿಮಾ ಮತ್ತೆ ಬಿಡುಗಡೆಯಾಗುತ್ತಿದೆ ಎಂದು ಕ್ಯಾಪ್ಶನ್ ಹಾಕಿಕೊಂಡಿದ್ದಾರೆ. ಜೊತೆಗೆ ಸಿನಿಮಾ ಪೋಸ್ಟರನ್ನು ಪೋಸ್ಟ್ ಕೂಡ ಮಾಡಿದ್ದಾರೆ. ಅ.17ರಂದು ಚಿರಂಜೀವಿ ಹುಟ್ಟುಹಬ್ಬ ಇದೆ. ಈ ಹಿನ್ನೆಲೆಯಲ್ಲಿ ಚಿರುವಿನ ಕೊನೆಯ ಸಿನಿಮಾವನ್ನು ಬಿಡುಗಡೆ ಮಾಡಲಾಗುತ್ತಿದೆ ಎನ್ನಲಾಗಿದೆ.

ಶಿವಾರ್ಜುನ ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ತೀವ್ರ ಕುತೂಹಲವಿತ್ತು. ಚಿತ್ರದ ಶೂಟಿಂಗ್ ಪ್ರಾರಂಭವಾದಾಗಿನಿಂದಲೂ ಈ ಚಿತ್ರ ತಂಡ ಅಭಿಮಾನಿಗಳಲ್ಲಿ ಕುತೂಹಲ ಕೆರಳಿಸುತ್ತ ಸಾಗಿತ್ತು. ಶಿವತೇಜಸ್ ನಿರ್ದೇಶನದಲ್ಲಿ ಈ ಚಿತ್ರ ಮೂಡಿ ಬಂದಿದ್ದು, ನಿರ್ಮಾಪಕ ಶಿವಾರ್ಜುನ್ ನಿರ್ಮಿಸಿದ್ದಾರೆ. ಕಾಮಿಡಿ, ಫ್ಯಾಮಿಲಿ, ಎಮೋಷನ್ ಹೀಗೆ ಎಲ್ಲಾ ಅಂಶಗಳು ಈ ಸಿನಿಮಾದಲ್ಲಿ ಇವೆ. ಕಿಶೋರ್, ಸಾಧುಕೋಕಿಲಾ, ನಯನಾ, ಕುರಿ ಪ್ರತಾಪ್ ಸೇರಿದಂತೆ ಕಾಮಿಡಿ ಬಳಗವೇ ಸಿನಿಮಾದಲ್ಲಿದೆ.

Leave a Reply

Your email address will not be published. Required fields are marked *

You May Also Like

ಶೂಟಿಂಗ್ ಮುಗಿಸಿ ಬರುತ್ತಿದ್ದ ವೇಳೆ ಅಲ್ಲು ಅರ್ಜುನ್ ಕಾರ್ ಗೆ ಅಪಘಾತ!

ಮುಂಬಯಿ : ಶೂಟಿಂಗ್ ಮುಗಿಸಿ ಮರಳಿ ಬರುತ್ತಿದ್ದ ಸಂದರ್ಭದಲ್ಲಿ ನಟ ಅಲ್ಲು ಅರ್ಜುನ್ ಅವರ ಕ್ಯಾರವಾನ್ ಗೆ ಹಿಂದಿನಿಂದ ಲಾರಿ ಗುದ್ದಿದ ಘಟನೆ ನಡೆದಿದೆ.

ರಾಗ ಪೊಲ್ಕ್ ಪ್ಯೂಜನ್ ಬ್ಯಾಂಡ್ ವತಿಯಿಂದ ಸಂಗೀತ ತರಗತಿಗಳು

ರಾಗ ಪೊಲ್ಕ್ ಪ್ಯೂಜನ್ ಬ್ಯಾಂಡ್ ವತಿಯಿಂದ ಗದಗನಲ್ಲಿ ಪ್ರಪ್ರಥಮ ಬಾರಿಗೆ ಆರು ವಿವಿಧ ಸಂಗೀತ ವಾದ್ಯಗಳನ್ನು ಕಲಿಯುವ ಆಶಕ್ತಿಯುಳ್ಳ ಸಂಗೀತ ಪ್ರೀಯರಿಗೆ ಅದರಲ್ಲಿ ವಿಶೇಷವಾಗಿ ಕೊಳಲು, ಡಿಜಂಬೆ, ತಬಲಾ, ಗೀಟಾರ್, ಕಾಜನ, ಕೀ ಬೋರ್ಡ, ಧೋಲ್ ತಾಶಾ ಸಂಗೀತ ತರಗತಿಗಳು ಇದೇ ತಿಂಗಳು ಜೂನ್

ಸಿನಿಮಾದಲ್ಲಿ ಮೂಡಿ ಬರಲಿದೆ ಮುರಳೀಧರನ್ ಜೀವನ!

ವಿಶ್ವ ಬ್ಯಾಟಿಂಗ್ ದಿಗ್ಗಜರ ನಿದ್ದೆಗೆಡಿಸಿದ್ದ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ ಅವರ ಬಯೋಪಿಕ್ ನಲ್ಲಿ ತಮಿಳು ನಟ ವಿಜಯ್ ಸೇತುಪತಿ ನಟಿಸಲಿದ್ದಾರೆ ಎಂದು ತಿಳಿದು ಬಂದಿದೆ.

ನಿಖಿಲ್ ಕುಮಾರಸ್ವಾಮಿ ವಿವಾಹ: ಪಾಸ್ ನೀಡಿದ ವಾಹನಗಳ ವಿವರಣೆ ಕೇಳಿದ ಕೋರ್ಟ್..!

ದೇಶಾದ್ಯಂತ ಲಾಕ್ ಡೌನ್ ಮದ್ಯೆಯೂ ನಟ ಹಾಗೂ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರಸ್ವಾಮಿ ಅವರ ವಿವಾಹ ಇತ್ತಿಚೆಗಷ್ಟೆ ನಡೆದಿತ್ತು. ವಿವಾಹ ಸಂದರ್ಭದಲ್ಲಿ ಎಷ್ಟು ವಾಹನಗಳಿಗೆ ಪಾಸ್ ನೀಡಲಾಗಿತ್ತು ಎನ್ನುವ ಬಗ್ಗೆ ಮಾಹಿತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.