ಬೆಂಗಳೂರು : ಇತ್ತೀಚೆಗಷ್ಟೇ ನಿಧನರಾಗಿರುವ ನಟ ಚಿರಂಜೀವಿ ಸರ್ಜಾ ಅವರ ಪತ್ನಿ ಮೇಘನಾ ರಾಜ್ ಅವರು ಅಭಿಮಾನಿಗಳು ಗುಡ್ ನ್ಯೂಸ್ ಕೊಟ್ಟಿದ್ದಾರೆ.

ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಮೇಘನಾ ಅವರ ಸೀಮಂತ ಕಾರ್ಯ ನಡೆದಿದೆ. ಇದರ ಬೆನ್ನಲ್ಲಿಯೇ ಅಭಿಮಾನಿಗಳೊಂದಿಗೆ ಮೇಘನಾ ಸಂತಸದಿಂದ ಮಾತನಾಡಿದ್ದಾರೆ. ಚಿರಂಜೀವಿ ಸರ್ಜಾ ಅವರು ಕೊನೆಯ ಬಾರಿ ನಟಿಸಿದ್ದ ಚಿತ್ರ ಶಿವಾರ್ಜುನ. ಈ ಸಿನಿಮಾ ಅ. 16ರಂದು ತೆರೆಯ ಮೇಲೆ ಬರಲಿದೆ. ಈ ಸಿಹಿ ಸುದ್ದಿಯನ್ನು ಮೇಘನಾ ತಮ್ಮ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ಚಿರು ಮತ್ತೆ ಉದಯಿಸುತ್ತಿದ್ದಾರೆ, ಅದಕ್ಕೆ ಕಾರಣ ಅಕ್ಟೋಬರ್ 16ರಂದು ಶಿವಾರ್ಜುನ ಸಿನಿಮಾ ಮತ್ತೆ ಬಿಡುಗಡೆಯಾಗುತ್ತಿದೆ ಎಂದು ಕ್ಯಾಪ್ಶನ್ ಹಾಕಿಕೊಂಡಿದ್ದಾರೆ. ಜೊತೆಗೆ ಸಿನಿಮಾ ಪೋಸ್ಟರನ್ನು ಪೋಸ್ಟ್ ಕೂಡ ಮಾಡಿದ್ದಾರೆ. ಅ.17ರಂದು ಚಿರಂಜೀವಿ ಹುಟ್ಟುಹಬ್ಬ ಇದೆ. ಈ ಹಿನ್ನೆಲೆಯಲ್ಲಿ ಚಿರುವಿನ ಕೊನೆಯ ಸಿನಿಮಾವನ್ನು ಬಿಡುಗಡೆ ಮಾಡಲಾಗುತ್ತಿದೆ ಎನ್ನಲಾಗಿದೆ.

ಶಿವಾರ್ಜುನ ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ತೀವ್ರ ಕುತೂಹಲವಿತ್ತು. ಚಿತ್ರದ ಶೂಟಿಂಗ್ ಪ್ರಾರಂಭವಾದಾಗಿನಿಂದಲೂ ಈ ಚಿತ್ರ ತಂಡ ಅಭಿಮಾನಿಗಳಲ್ಲಿ ಕುತೂಹಲ ಕೆರಳಿಸುತ್ತ ಸಾಗಿತ್ತು. ಶಿವತೇಜಸ್ ನಿರ್ದೇಶನದಲ್ಲಿ ಈ ಚಿತ್ರ ಮೂಡಿ ಬಂದಿದ್ದು, ನಿರ್ಮಾಪಕ ಶಿವಾರ್ಜುನ್ ನಿರ್ಮಿಸಿದ್ದಾರೆ. ಕಾಮಿಡಿ, ಫ್ಯಾಮಿಲಿ, ಎಮೋಷನ್ ಹೀಗೆ ಎಲ್ಲಾ ಅಂಶಗಳು ಈ ಸಿನಿಮಾದಲ್ಲಿ ಇವೆ. ಕಿಶೋರ್, ಸಾಧುಕೋಕಿಲಾ, ನಯನಾ, ಕುರಿ ಪ್ರತಾಪ್ ಸೇರಿದಂತೆ ಕಾಮಿಡಿ ಬಳಗವೇ ಸಿನಿಮಾದಲ್ಲಿದೆ.

Leave a Reply

Your email address will not be published. Required fields are marked *

You May Also Like

ನಟಿ ಕಂಗನಾ ವಿರುದ್ಧ ಮತ್ತೊಮ್ಮೆ ಮುಗಿಬಿದ್ದ ರಾಖಿ!

ಮುಂಬಯಿ : ನಟಿ ಕಂಗನಾ ರಣಾವತ್ ಅವರ ವಿರುದ್ಧ ಡವ್ ರಾಣಿ ರಾಖಿ ಸಾವಂತ್ ಮತ್ತೊಮ್ಮೆ ಮುಗಿ ಬಿದ್ದಿದ್ದಾರೆ. ಈ ಬಾರಿ ಮಹಾರಾಷ್ಟ್ರ ಸರ್ಕಾರ ಹಾಗೂ ಸಿಎಂ ಉದ್ಧವ್ ಠಾಕ್ರೆ ಅವರ ಕ್ಷಮೆ ಕೇಳಬೇಕು ಎಂದು ನಟಿ ರಾಖಿ ಸೂಚಿಸಿದ್ದಾರೆ.

ಅಭಿಮಾನಿಗಳ ಹೆಸರಿಗಾಗಿ ಸೋಶಿಯಲ್ ಮಿಡಿಯಾ ಮೊರೆಹೋದ ಡಿಂಪಲ್ ನಟಿ

ಬೆಂಗಳೂರು: “ಅಭಿಮಾನಿಗಳೇ ದೇವರು” ಎಂದ ಅಣ್ಣಾವ್ರ ಮಾತು ಅಕ್ಷರಶಃ ಸತ್ಯ, ಪ್ರತಿದಿನ ಎಷ್ಟೋ ಅಭಿಮಾನಿಗಳು ಸೋಷಿಯಲ್…

ಲಾಕ್ ಡೌನ್ ಸಮಯದಲ್ಲಿ ಬಾಲಿವುಡ್ ನಟ ಸಲ್ಲು ಬಾಯ್ ಮಾಡಿದ್ದೆನು ಗೊತ್ತಾ..?

ಬಾಲಿವುಡ್ ನಟ ಸಲ್ಲು ಬಾಯ್ ಅಭಿಮಾನಿಗಳಿಗೆ ಮಾತ್ರ ಲಾಕ್ ಡೌನ್ ನಲ್ಲಿ ಸಲ್ಲುಭಾಯ್ ಏನು ಮಾಡ್ತಿದ್ದಾರೆ ಅಂತ ಕುತೂಹಲ ಇತ್ತು. ಆದ್ರೆ ಅಭಿಮಾನಿಗಳಿಗೆ ತಾವು ಈ ಬಿಡುವಿನಲ್ಲಿ ಏನು ಮಾಡ್ತಿದ್ದಾರೆ ಅಂತ ತೋರಿಸಿದ್ದಾರೆ.

ಈ ನಟ ಈಗ ಟಾಪ್ ನಟರ ಪಟ್ಟಿಯಲ್ಲಿ ಮೊದಲಿಗ!

ಡಿಯರ್‌ ಕಾಮ್ರೇಡ್‌, ಟ್ಯಾಕ್ಸಿವಾಲ, ನೋಟಾ ಚಿತ್ರಗಳು ಗಲ್ಲಾಪೆಟ್ಟಿಗೆಯಲ್ಲಿ ಸಾಧನೆ ಮಾಡಲಿಲ್ಲ. ಆದರೂ ಬಾಲಿವುಡ್ ನ ಕೆಲವು ನಾಯಕರನ್ನು ಮಣಿಸಿ ದೇವರಕೊಂಡ ಮುನ್ನುಗ್ಗುತ್ತಿದ್ದಾರೆ.