ಹಾಸನ : ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಎಸ್ಟಿ ಮೀಸಲಾತಿ ಅಂತಿಮಗೊಳಿಸಿದ ಸರ್ಕಾರದ ಕ್ರಮ ಪ್ರಶ್ನಿಸಿ ಶಾಸಕ ಎಚ್.ಡಿ. ರೇವಣ್ಣ ಆಕ್ರೋಶ ಹೊರ ಹಾಕಿದ್ದಾರೆ.

ಹೀಗಾಗಿ 17 ಸ್ಥಾನಗಳನ್ನು ಗೆದ್ದರೂ ಜೆಡಿಎಸ್ ಅಧ್ಯಕ್ಷ ಸ್ಥಾನದಿಂದ ವಂಚಿತವಾಗಿದ್ದು, 13 ಸ್ಥಾನಗಳನ್ನು ಗೆದ್ದಿರುವ ಬಿಜೆಪಿಯ ಅಭ್ಯರ್ಥಿ ಅಧ್ಯಕ್ಷರಾಗುವ ಸಾಧ್ಯತೆ ಇದೆ. ಹೀಗಾಗಿಯೇ ಬೇಸರ ವ್ಯಕ್ತಪಡಿಸಿದ ರೇವಣ್ಣ ಅವರು, ನ್ಯಾಯದೇವತೆಗೆ ಬಿಜೆಪಿ ಅನ್ಯಾಯ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ಕಾಂಗ್ರೆಸ್ ಮಾಡಿದ್ದ ಕೃತ್ಯವನ್ನು ಈಗ ಬಿಜೆಪಿ ಮಾಡುತ್ತಿದೆ. ಈ ಎರಡೂ ಪಕ್ಷಗಳಿಗೂ ಜೆಡಿಎಸ್ ಬೆಳೆಯುವುದು ಹೊಟ್ಟೆ ಕಿಚ್ಚಾಗಿದೆ. ಹರಿಹರ ನಗರಸಭೆಗೆ ಮೀಸಲಾಗಿದ್ದ ಎಸ್ಟಿ ಮೀಸಲಾತಿಯನ್ನು ಹಾಸನ ನಗರಸಭೆಗೆ ಹಾಕಿದ್ದಾರೆ. ರಾಜ್ಯದಲ್ಲಿ ಎಸ್ಟಿಗೆ ಮೀಸಲು ಇರುವುದು ಎರಡೇ ಸ್ಥಾನ. ಅದು ಕೊಪ್ಪಳ ಮತ್ತು ಹರಿಹರಕ್ಕೆ. ಇದನ್ನು ಅಡ್ವೋಕೇಟ್ ಜನರಲ್ ಹೈಕೋರ್ಟಿಗೂ ನೀಡಿದ್ದರು. ಆದರೆ, ಸರ್ಕಾರ ಇದನ್ನು ಬದಲಾಯಿಸಿ ನ್ಯಾಯ ದೇವತೆಗೆ ಅನ್ಯಾಯ ಮಾಡಿದೆ ಎಂದು ಕಿಡಿಕಾರಿದ್ದಾರೆ.

ಹೀಗಾಗಿ ಕೂಡಲೇ ನ್ಯಾಯಾಲಯ ಇದನ್ನು ಗಮನಿಸಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಬೇಕು. ಜೆಡಿಎಸ್ ಗೆ ಬಹುಮತ ಇದೆ ಎಂಬ ಕಾರಣಕ್ಕೆ ಅಧಿಕಾರ ತಪ್ಪಿಸಲು ಬಿಜೆಪಿ ಈ ರೀತಿಯ ಕೃತ್ಯಕ್ಕೆ ಕೈ ಹಾಕಿದೆ ಎಂದು ದೂರಿದ್ದಾರೆ.

Leave a Reply

Your email address will not be published. Required fields are marked *

You May Also Like

ಧನ ಸಹಾಯಕ್ಕಾಗಿ ಅರ್ಜಿ ಆಹ್ವಾನ

ಗದಗ: ಕೋವಿಡ್-19ರ 2ನೇ ಅಲೆಯ ತೀವ್ರತೆಯ ಹಿನ್ನೆಲೆಯಲ್ಲಿ ವಾಣಿಜ್ಯ ಮತ್ತಿತರೆ ಚಟುವಟಿಕೆಗಳಿಗೆ ನಿರ್ಬಂಧಗಳನ್ನು ವಿಧಿಸಿರುವುದರಿಂದ ಆಟೋ ರಿಕ್ಷಾ, ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ಷರತ್ತಿಗೊಳಪಟ್ಟು 3000 ರೂ.ಗಳ ಪರಿಹಾರ ಧನವನ್ನು ನೀಡಲು ಸರ್ಕಾರ ಆದೇಶಿಸಲಾಗಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ಹಲವಾರು ಕಡೆ ಭೂ ಕಂಪನ ಅನುಭವ

ಬೆಂಗಳೂರು: ಇಂದು ಬೆಂಗಳೂರು ಸೇರಿದಂತೆ ರಾಜ್ಯದ  ಹಲವೆಡೆ ಭೂಮಿ ಕಂಪಿಸಿದ ಅನುಭವ .ರಾಮನಗರ  ಸೇರಿದಂತೆ ಮಂಡ್ಯದಲ್ಲಿಯೂ…

ನರೇಗಲ್ಲ್ ನಲ್ಲಿ ರಾಷ್ಟ್ರೀಯ ಪಲ್ಸ್ ಪೊಲೀಯೊ ಕಾರ್ಯಕ್ರಮ

ಆರೋಗ್ಯವಂತ ಮಕ್ಕಳು ದೇಶದ ಸಂಪತ್ತು. ಹಾಗು ದೇಶದ ಬಹುದೊಡ್ಡ ಆಸ್ತಿ ಎಂದು ನರೆಗಲ್ ಪಟ್ಟಣ ಪಂಚಾಯತಿ ಅಧ್ಯಕ್ಷೆ ಅಕ್ಕಮ್ಮ ಯ ಮಣೋಡ್ಡರ ಹೇಳಿದರು.

ಪಿಎಂ ಕೇರ್ಸ್ ಅಡಿ ಸಂಗ್ರಹವಾದ ಮೊತ್ತದ ಲೆಕ್ಕ ಕೊಡಿ: ಸಿದ್ದರಾಮಯ್ಯ

ಬೆಂಳೂರು: ಪ್ರತಿಪಕ್ಷ ನಾಯಕರಾಗಿ ಅಧಿಕಾರಿಗಳ ಸಭೆಯನ್ನೇ ನಡೆಸಿಲ್ಲ ಎಂದು ಬಿಜೆಪಿ ಮುಖಂಡ ಬಿ.ಎಲ್.ಸಂತೋಷ ಆರೋಪಿಸಿದ್ದಾರೆ. ವಿಧಾನಸೌಧದಲ್ಲಿರುವ…