ಹಾಸನ : ಜೆಡಿಎಸ್ ಕೋಟೆಯಲ್ಲಿ ತಂತ್ರದಿಂದ ವಶಪಡಿಸಿಕೊಳ್ಳಲು ಬಿಜೆಪಿ ಹವಣಿಸುತ್ತಿದೆಯೇ ಎಂಬ ಮಾತುಗಳು ಜಿಲ್ಲೆಯಲ್ಲಿ ಕೇಳಿ ಬರುತ್ತಿವೆ. ಮೀಸಲಾತಿ ಹೆಸರಿನಲ್ಲಿ ಇಂತಹದೊಂದು ಕೃತ್ಯ ನಡೆಯುತ್ತಿದೆ ಎಂಬ ಆರೋಪ ಸದ್ಯ ಬಿಜೆಪಿಯ ವಿರುದ್ಧ ಕೇಳಿ ಬರುತ್ತಿದೆ.

ನಗರಸಭೆ ಚುನಾವಣೆಯಲ್ಲಿ 17 ಸ್ಥಾನ ಗೆದ್ದು ಅಧಿಕಾರ ಹಿಡಿಯುವ ಹುಮ್ಮಸ್ಸಿನಲ್ಲಿದ್ದ ಜೆಡಿಎಸ್ ಗೆ ಬಿಜೆಪಿ ಶಾಕ್ ನೀಡಿದೆ. ಇನ್ನೊಂದೆಡೆ ಜೆಡಿಎಸ್ ನ ಭದ್ರಕೋಟೆಯಲ್ಲಿ 13 ಸ್ಥಾನ ಗೆದ್ದು, ಮೀಸಲಾತಿ ಬಲದಿಂದ ಬಿಜೆಪಿಯು ಅಧಿಕಾರದ ಸನಿಹಕ್ಕೆ ಹೋಗಿದೆ. 

ಸ್ಥಳೀಯ ಸಂಸ್ಥೆಗಳ ಮೀಸಲಾತಿ ಪಟ್ಟಿಯನ್ನು ಸರ್ಕಾರವು ಗುರುವಾರ ಪ್ರಕಟಿಸಿದ್ದು, ಜಿಲ್ಲೆಯಲ್ಲಿ ಹಾಸನ ಮತ್ತು ಅರಸೀಕೆರೆ ನಗರಸಭೆ ಅಧ್ಯಕ್ಷ ಸ್ಥಾನವನ್ನು ಎಸ್ಟಿ ಅಭ್ಯರ್ಥಿಗೆ ಎಂದು ಘೋಷಿಸಿದೆ. ಹೀಗಾಗಿ ಹಾಸನ ಹಾಗೂ ಅರಸೀಕೆರೆ ನಗರಸಭೆಯಲ್ಲಿ ಅಧಿಕಾರದಿಂದ ಜೆಡಿಎಸ್ ದೂರ ಉಳಿದಂತಾಗಿದೆ. ಈ ಎರಡೂ ನಗರಸಭೆಗಳಲ್ಲಿ ಎಸ್ಟಿ ವರ್ಗದಿಂದ ಅಧ್ಯಕ್ಷರಾಗಲು ಯಾವುದೇ ಸದಸ್ಯರು ಇಲ್ಲದಂತಾಗಿದೆ. ಹೀಗಾಗಿ ಪಕ್ಷದ ನಾಯಕರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

35 ಸದಸ್ಯರ ಬಲ ಹೊಂದಿರುವ ಹಾಸನ ನಗರ ಸಭೆಯಲ್ಲಿ 17 ಸ್ಥಾನಗಳನ್ನು ಜೆಡಿಎಸ್ ಗೆದ್ದಿತ್ತು. ಬಿಜೆಪಿ 13 ಸ್ಥಾನದಲ್ಲಿ ಜಯಗಳಿಸಿದೆ. ಅರಸೀಕರೆ ನಗರಸಭೆಯಲ್ಲಿ ಜೆಡಿಎಸ್ 22 ಸ್ಥಾನಗಳಲ್ಲಿ ಗೆದ್ದಿದ್ದರೆ, ಬಿಜೆಪಿ ಐದು ಸ್ಥಾನಗಳಲ್ಲಿ ಮಾತ್ರ ಗೆದ್ದು ಅಧ್ಯಕ್ಷ ಸ್ಥಾನದ ಸಮೀಪಕ್ಕೆ ಹೋಗಿದೆ. 

ಹಾಸನ ಕ್ಷೇತ್ರದ ಬಿಜೆಪಿ ಶಾಸಕ ಪ್ರೀತಂ ಗೌಡ ಕೈವಾಡದಿಂದ ಮೀಸಲಾತಿಯನ್ನು ಬದಲಾವಣೆ ಮಾಡಲಾಗಿದೆ ಎಂದು ಜೆಡಿಎಸ್ ಆರೋಪ ಮಾಡುತ್ತಿದೆ. 

Leave a Reply

Your email address will not be published. Required fields are marked *

You May Also Like

ದಿ. ಮಲ್ಲನಗೌಡ ಫ ಪಾಟೀಲ ಅವರ ದ್ವೀತಿಯ ಪುಣ್ಯಸ್ಮರಣೆಯಲ್ಲಿ ಪೂಜ್ಯ ಕಲ್ಲಯ್ಯಜ್ಜನವರ ತುಲಾಭಾರ

ಪುಣ್ಯಾಶ್ರಮದ ಗುರುಬಂಧುಗಳಾದ ಸಾಸರವಾಡ ಗ್ರಾಮದ ಮಲ್ಲನಗೌಡ ಪಾಟೀಲರು ಉತ್ತಮ ಸಂಗೀತ ಕಲಾವಿದರಾಗಿದ್ದರು. ಜೊತೆಗೆ ಸಾತ್ವಿಕ ಗುಣವುಳ್ಳವರಾಗಿದ್ದರು. ಅವರು ಸರಳತೆ ಹಾಗೂ ಆದರ್ಶಪ್ರಾಯ ವ್ಯಕ್ತಿತ್ವ ಉಳ್ಳವರಾಗಿದ್ದರು. ಅವರ ಪುಣ್ಯಸ್ಮರಣೆಯ ನಿಮಿತ್ಯವಾಗಿ ವಿವಿಧ ಕ್ಷೇತ್ರದ ಸಾಧಕರನ್ನು ಗುರುತಿಸಿ ಪ್ರಶಸ್ತಿ ಪ್ರದಾನ ಮಾಡುತ್ತಿರುವುದು ಶ್ಲಾಘನೀಯ ಎಂದು ವೀರೇಶ್ವರ ಪುಣ್ಯಾಶ್ರಮದ ಪೀಠಾಧೀಪತಿ ಪೂಜ್ಯ ಕಲ್ಲಯ್ಯಜ್ಜನವರು ಹೇಳಿದರು.

ಶಾಲೆ ತೆರೆಯಬಾರದು ಎನ್ನುವುದಕ್ಕೆ ಸಿದ್ದರಾಮಯ್ಯ ಕೊಟ್ಟ ಉತ್ತರವೇನು ಗೊತ್ತಾ?

ಬೆಂಗಳೂರು : ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಕ್ಕರೆ ನಾಡಿನಲ್ಲಿ ಸಿಹಿಯಾದ ಮಾತಿಗೆ ಮರುಳಾಗಿ 20 ಕೋಟಿ ಮೌಲ್ಯದ ಚಿನ್ನ ಕಳೆದುಕೊಂಡ ನಾರಿಯರು!!

ಬೆಂಗಳೂರು : ಸಕ್ಕರೆ ನಾಡಿನಲ್ಲಿ ಸಿಹಿಯಾದ ಆಮಿಷಕ್ಕೆ ಮಹಿಳೆಯರು ಬಲಿಯಾಗಿ, ಬರೋಬ್ಬರಿ ರೂ. 20 ಕೋಟಿ ಮೌಲ್ಯದ ಚಿನ್ನ ಕಳೆದುಕೊಂಡಿರುವ ಘಟನೆ ನಡೆದಿದೆ.

ಒಂದು ತಿಂಗಳಿನಿಂದ ಕೊರೊನಾ ಚಿಕಿತ್ಸೆ : 6 ಬಾರಿಯ ಟೆಸ್ಟ್ ನಲ್ಲಿಯೂ ವರದಿ ಪಾಸಿಟಿವ್!

ಮಂಗಳೂರು: ಇಲ್ಲೊಬ್ಬ ವ್ಯಕ್ತಿ ಕೊರೊನಾ ಸೋಂಕು ತಗುಲಿ ತಿಂಗಳಾದರು ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಿಗೆ ಬರೋಬ್ಬರಿ…