ಬೆಂಗಳೂರು: ಈಗಾಗಲೇ ಶಾಲೆಗಳ ಆರಂಭದ ಕುರಿತು ಪರ-ವಿರೋಧ ಚರ್ಚೆಗಳು ನಡೆದಿವೆ. ಇನ್ನು ಈ ಬಗ್ಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ. ಕೋವಿಡ್19 ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿ ಶಾಲೆಗಳನ್ನು ಪ್ರಾರಂಭಿಸುವುದರ ಕುರಿತು ಪರ ಮತ್ತು ವಿರೋಧ ಚರ್ಚೆಗಳು ಆಗುತ್ತಿವೆ.
ಈ ಬಗ್ಗೆ ಮಾದ್ಯಮಗಳು ಸಹ ಅಭಿಯಾನಗಳನ್ನು ಪ್ರಾರಂಭಿಸಿರುವುದನ್ನು ಗಮನಿಸಿರುತ್ತೇವೆ. ಈ ಕುರಿತು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಸಹಿತ ತಮ್ಮ ನಿಲುವುಗಳನ್ನು ವ್ಯಕ್ತಪಡಿಸಿರುತ್ತಾರೆ. ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ಶಾಲೆಗಳನ್ನು ಪ್ರಾರಂಭಿಸುವ ಮುನ್ನ ಎಲ್ಲ ಪಕ್ಷಗಳ ಮುಖಂಡರು, ತಜ್ಞರು, ಹಿರಿಯ ಅಧಿಕಾರಿಗಳ ಸಭೆಯನ್ನು ಕರೆದು ಸಾಧಕ, ಬಾಧಕಗಳನ್ನು ಚರ್ಚಿಸಿ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು.
ಅಲ್ಲಿಯವರೆಗೆ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ಉಂಟಾಗಿರುವ ಯಾವುದೇ ಊಹಾಪೋಹ ಮತ್ತು ವದಂತಿಗಳಿಗೆ ಕಿವಿಗೊಡಬಾರದೆಂದು ಪೋಷಕರಿಗೆ ಮನವಿ ಮಾಡಿತ್ತೇನೆ ಎಂದು ಸಿಎಂ ಬಿಎಸ್ವೈ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.