ಮುಳಗುಂದ: ಸ್ಥಳೀಯ ಪಟ್ಟಣ ಪಂಚಾಯತಿಗೆ 2018 ರ ಚುನಾವಣೆಯಲ್ಲಿ ಎಸ್‌.ಸಿ ಮೀಸಲಿದ್ದ 11ನೇ ವಾರ್ಡನಿಂದ ಆಯ್ಕೆಯಾಗಿರುವ ಬಸವಂತಪ್ಪ ಶಿ. ಹಾರೋಗೇರಿ ಅವರ ಜಾತಿ ಪ್ರಮಾಣ ಪತ್ರ ನಕಲಿ ಇದ್ದು ತನಿಖೆ ನಡೆಸಿ ಪಪಂ ಸದಸ್ಯತ್ವ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಪ್ರತಿಸ್ಪರ್ದಿ ಮರಿಯಪ್ಪ ನೀ. ನಡಗೇರಿ ಆಗ್ರಹಿಸಿದರು.

ಅವರು ಇಲ್ಲಿನ ಅಂಬೇಡ್ಕರ ನಗರದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದರು. ಬಸವಂತಪ್ಪ ಹಾರೋಗೇರಿ ಮೂಲತಃ ಮುಂಡರಗಿ ತಾಲೂಕಿನ ಹಾರೋಗೇರಿ ಗ್ರಾಮದವರು. ಅವರು ತಮ್ಮ ತಂದೆಯ ಕಾಲಕ್ಕೆ ಹಾರೋಗೇರಿ ಗ್ರಾಮದಿಂದ ಮುಳಗುಂದ ಪಟ್ಟಣಕ್ಕೆ ಬಂದಿದ್ದು, ಇವರು ಇಲ್ಲಿಗೆ ಬಂದ ನಂತರ ಸರಕಾರವು ಕೊಡುವ ಅನುಸೂಚಿತ ಜಾತಿ(ಹಿಂದೂ ಭೋವಿ) ಎಂದು ಪ್ರಮಾಣ ಪತ್ರ ಪಡೆದು ಎಸ್‌ಸಿ ಮೀಸಲಾತಿ ಸೌಲಭ್ಯಗಳನ್ನ ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.

ಕಳೆದ 2018 ರ ಸ್ಥಳಿಯ ಸಂಸ್ಥೆ ಚುಣಾವಣೆಯಲ್ಲಿ ಬಸವಂತಪ್ಪ ನಾಮಪತ್ರ ಸಲ್ಲಿಸುವಾಗ ಅದಕ್ಕೆ ಸಂಬಂಧಿಸಿದ ದಾಖಲೆಗಳ ನಕಲು ಪ್ರತಿಗಳ ಒದಗಿಸುಂತೆ ಗದಗ ತಹಸೀಲ್ದಾರರಿಗೆ ಮನವಿ ಸಲ್ಲಿಸಿದಾಗ ಅದರ ಬದಲಾಗಿ ತಹಸೀಲ್ಧಾರರು ಬಸವಂತಪ್ಪ ಸೇರಿದಂತೆ ಅವರ ಕುಟುಂಬದವರ ಜಾತಿ ಪ್ರಮಾಣ ಪತ್ರ ನೀಡಿರುವದು ಅನುಮಾನಕ್ಕೆ ಎಡಮಾಡಿಕೊಟ್ಟಿದೆ. ಇನ್ನೂ ಅಗತ್ಯ ದಾಖಲೆಗಳ ಮಾಹಿತಿ ಒದಗಿಸದೇ ಸತಾಯಿಸುತ್ತಿದ್ದಾರೆ.

ಜಿಲ್ಲಾಧಿಕಾರಿಗಳ ಸಮೀತಿಯಲ್ಲಿ ತೀರ್ಮಾನ ಈ ವಿಷಯಕ್ಕೆ ಸಂಭಂಧಿಸಿದಂತೆ ಈಗಾಗಲೇ ಶಿವನಪ್ಪ ಹಾಗೂ ಆತನ ಸಂಬಂಧಿಗಳ ಜಾತಿ ಬಗ್ಗೆ ಸಮಗ್ರ ವರದಿ ಕಲೆ ಹಾಕಿ ತಿಳಿಸುವಂತೆ ಮುಂಡರಗಿ ತಹಸೀಲ್ದಾರರಿಗೆ ತಿಳಿಸಿದ್ದೇವೆ. ಅವರ ವರದಿ ಬರುವವರೆಗೆ ಕಾಯಬೇಕಿದೆ. ನಂತರ ಜಿಲ್ಲಾಧಿಕಾರಿಗಳ ಸಮೀತಿಯಲ್ಲಿ ಇದನ್ನು ತೀರ್ಮಾನಿಸಲಾಗುವದು. -ಶ್ರೀನಿವಾಸಮೂರ್ತಿ ಕುಲಕರ್ಣಿ, ತಹಸೀಲ್ದಾರ

ತಪ್ಪಿತಸ್ಥರ ವಿರುಧ್ಧ ಕ್ರಮ ಜರುಗಿಸಬೇಕು ಹಾಗೂ ನಕಲಿ ಜಾತಿ ಪ್ರಮಾಣ ಪತ್ರ ಲಗತ್ತಿಸಿ ಚುನಾವಣೆಯಲ್ಲಿ ಆಯ್ಕೆಯಾದ ಇವರನ್ನು ಪಟ್ಟಣ ಪಂಚಾಯ್ತಿ ಸದಸ್ಯತ್ವದಿಂದ ಅನರ್ಹಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ನೀಡಲಾಗಿದೆ. ಇಲ್ಲವಾದಲ್ಲಿ ನ್ಯಾಯಾಕ್ಕಾಗಿ ಪ್ರತಿಭಟನೆ ನಡೆಸುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಬಾಬು ಜಗಜೀವನರಾಮ್ ವಿವಿದೋದ್ದೇಶಗಳ ಸಂಘದ ದೇವಪ್ಪ ನಡಗೇರಿ, ಸುಭಾಸ ಜಾಲಣ್ಣವರ, ಪರಶುರಾಮ ಮ್ಯಾಗೇರಿ, ಬಸವಣ್ಣೆಪ್ಪ ನಡಗೇರಿ, ಮರಿಯಪ್ಪ ಕೆಳಗೇರಿ, ಮಹಾಂತೇಶ ಮಠದವರ ಇತರರು ಇದ್ದರು.

Leave a Reply

Your email address will not be published. Required fields are marked *

You May Also Like

ಶಾರ್ಟ್ ಸರ್ಕ್ಯೂಟ್ ನಿಂದ ಜನರಲ್ ಸ್ಟೋರ್ ಗೆ ಬೆಂಕಿ!

ಗದಗ: ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಜನರಲ್ ಸ್ಟೋರ್ ಒಂದು ಹೊತ್ತಿ ಉರಿದ ಘಟನೆ ಗದಗ ನಗರದ ಕೆ.ಸಿ.ರಾಣಿ ರಸ್ತೆಯಲ್ಲಿರುವ ಚೇತನ ಕ್ಯಾಂಟಿನ್ ಸರ್ಕಲ್ ಬಳಿ ನಡೆದಿದೆ. ಬಸವರಾಜ್ ನಾಡಗೌಡ್ರ ಎಂಬವವರಿಗೆ ಸೇರಿದ ಜನರಲ್ ಸ್ಟೋರ್ ಇದಾಗಿದೆ ಎಂದು ಹೇಳಲಾಗ್ತಿದ್ದು, ಜನರಲ್ ಸ್ಟೋರ್ ಬೆಂಕಿಗೆ ಆಹುತಿಯಾಗಿದೆ. ಸ್ಟೋರ್ ನಲ್ಲಿದ್ದ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಹಾನಿಯಾಗಿವೆ.

ಗದಗ ಜಿಲ್ಲೆಯ ಪೈಲ್ವಾನರ ಮಾಶಾಸನ ಬಿಡುಗಡೆಗೆ ಒತ್ತಾಯ

ಜಿಲ್ಲಾ ಪೈಲ್ವಾನರ ಮಾಶಾಸನ ಬಿಡುಗಡೆ ಮಾಡುವಂತೆ ಸಚಿವರಿಗೆ ಮನವಿ ನೀಡುವ ವೇಳೆ ಜಟಾಪಟಿ ನಡೆದ ಘಟನೆ ನಗರದ ಪ್ರವಾಸಿ ಮಂದಿರದಲ್ಲಿ ನಡೆದಿದೆ.

ಡೆಂಜರ್ ಝೋನ್ ನಲ್ಲಿ ಭಯಾನಕ ಘಟನೆ: ಕಿಟ್ ಗಾಗಿ ಮಗ್ಗರಿಸಿ ಬಿದ್ದ ಮಹಿಳೆಯರು

ಆಹಾರ ಕಿಟ್ ಪಡೆಯಲು ಹೋದ ಮಹಿಳೆಯರು ಮಗ್ಗರಿಸಿ ಬಿದ್ದಿದ್ದಾರೆ. ನಿಜಕ್ಕೂ ಇದು ಭಯಾನಕ ಘಟನೆ. ಕೊರೋನಾ ಕರಾಳ ಛಾಯೆಯ ಲಕ್ಷಣವೇ ಸರಿ.

ಈ ಬಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಸವರಾಜ ಕುರಿಕಾರ ಗೆಲುವು ಖಚಿತ: ಮಾಜಿ ಶಾಸಕ ಜಿ.ಎಸ್.ಪಾಟೀಲ

ಉತ್ತರಪ್ರಭ ನರೆಗಲ್: ವಿಧಾನ ಪರಿಷತ್‍ನ ಪಶ್ಚಿಮ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಗುರಿಕಾರ ಪರವಾಗಿ…