ನವದೆಹಲಿ : ದೇಶದಲ್ಲಿ ಕಳೆದ ಎರಡು ವಾರಗಳಿಂದ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿದ್ದು, ಗುಣಮುಖರಾದವರ ಸಂಖ್ಯೆ ಏರಿಕೆಯಾಗುತ್ತಿದೆ. ದೇಶದಲ್ಲಿ ಸದ್ಯ ಸೋಂಕಿತರ ಸಂಖ್ಯೆ 69 ಲಕ್ಷದ ಗಡಿ ದಾಟಿದೆ.

69,06,152ರ ಪೈಕಿ ಸದ್ಯ 8,93,592 ಸಕ್ರಿಯ ಪ್ರಕರಣಗಳಿದ್ದು, ಇದುವರೆಗೂ 59,06,070 ಜನ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಿಡುಗಡೆ ಹೊಂದಿದ್ದಾರೆ. 964 ಜನ ಒಂದೇ ದಿನದಲ್ಲಿ ಸಾವನ್ನಪ್ಪುವ ಮೂಲಕ ಇದುವರೆಗೂ 1,06,490 ಜನ ಬಲಿಯಾಗಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. 

ಸೋಂಕಿತರ ಸಂಖ್ಯೆ ಸದ್ಯ 69 ಲಕ್ಷ ಇದ್ದರೆ, ಚೇತರಿಸಿಕೊಂಡವರ ಸಂಖ್ಯೆ 59 ಲಕ್ಷಕ್ಕೆ ಏರಿಕೆ ಕಂಡಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 70,496 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ಸೋಂಕಿತರ ಸಂಖ್ಯೆ 69,06,152ಕ್ಕೆ ಏರಿಕೆ ಕಂಡಿದೆ. ಅಲ್ಲದೇ, ಒಂದೇ ದಿನ ದೇಶದಲ್ಲಿ 964 ಜನ ಮಹಾಮಾರಿಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. 

Leave a Reply

Your email address will not be published. Required fields are marked *

You May Also Like

ಇ-ರ‌್ಯಾಲಿ ಪರಿಣಾಮ: 25 ಬಿಜೆಪಿ ಲೀಡರ್ಸ್ ಪಾಸಿಟಿವ್

ಪಾಟ್ನಾ: ಬಿಜೆಪಿಯ ಪಾಟ್ನಾ ಕೇಂದ್ರ ಕಚೇರಿಯಲ್ಲಿ ಆತಂಕ ಶುರುವಾಗಿದೆ. ರಾಜ್ಯ ಸಂಘಟನಾ ಕಾರ್ಯದರ್ಶಿ ನಾಗೇಂದ್ರನಾಥ್, ಪ್ರಧಾನ ಕಾರ್ಯದರ್ಶಿ ದೇವೇಶ್ಕುಮಾರ್ ಮತ್ತು ರಾಜ್ಯ ಬಿಜೆಪಿ ಉಪಾಧ್ಯಕ್ಷ

ಮೋದಿ ವಿರುದ್ಧ ಗುಡುಗಿದ ಕಾಂಗ್ರೆಸ್ ನಾಯಕ ರಾಹುಲ್!

ನವಾಡ : ರಾಹುಲ್ ಹಾಗೂ ತೇಜಸ್ವಿ ಯಾದವ್ ಜಂಟಿಯಾಗಿ ಪ್ರಧಾನಿ ಮೋದಿ ಹಾಗೂ ಬಿಹಾರದ ನಿತೀಶ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಉದ್ಯೋಗ ಸೃಷ್ಟಿ ಮಾಡುವ ವಿಚಾರದಲ್ಲಿ ಬಿಹಾರ ಹಾಗೂ ಕೇಂದ್ರ ಸರ್ಕಾರಗಳು ವಿಫಲವಾಗಿವೆ ಎಂದು ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಗುವನ್ನು ಕದ್ದೋಯ್ದ ಕೋತಿಗಳು

ತಮಿಳುನಾಡಿನ ತನ್ನ ಮನೆಯಯೊಂದರಲ್ಲಿ ಕೋತಿಗಳ ಗುಂಪೊAದು ತನ್ನ ಮಗುವನ್ನು ಕದ್ದೋಯ್ದ ಕೋತಿಗಳು ಸಾಯಿಸಿರುವ ಘಟನೆ ನಡೆದಿದೆ ಎನ್ನಲಾಗಿದೆ. ಶನಿವಾರ ಈ ಘಟನೆ ನಡೆದಿದ್ದು ಮಗುವಿನ ತಾಯಿ ಹೇಳುವ ಪ್ರಕಾರ, ಕೋತಿಗಳು ಮನೆಯ ಛಾವಣಿಯ ಹೆಂಚುಗಳನ್ನು ತೆಗೆದು, ಮಲಗಿದ್ದ ಶಿಶುಗಳನ್ನು ಕರೆದುಕೊಂಡು ಹೋದವು ಅಂತ ತಿಳಿಸಿದ್ದಾರೆ.

ಕೊರೋನಾ ಸಂಕಷ್ಟ ವಲಸಿಗರ ವಿಚಾರದಲ್ಲೂ ರಾಜಕಾರಣ..!

ಅಣ್ಣಾ ನಾನು ಊರಿಗೆ ಬರ್ತಿನಿ, ಬೇಕಾದ್ರೆ ಕ್ವಾರೈಂಟೈನ್ ನಲ್ಲಾದ್ರು ಇರ್ತಿನಿ ಆದ್ರೆ ಊರಿಗೆ ಬಂದ್ರೆ ಸಾಕು ಅನ್ನಿಸ್ತಿದೆ, ಹೇಗಾದ್ರು ಮಾಡಿ ನನ್ನನ್ನು ಕರಿಸಿಕೋ ಎನ್ನುವ ಮೊಬೈಲ್ ಕರೆಗಳೀಗ ಸಾಮಾನ್ಯವಾಗಿವೆ. ನಮಗೆ ಒಂದೊತ್ತಿನ ಊಟಕ್ಕೂ ಪರದಾಟವಿದೆ. ದುಡಿಯುವ ಕೈಗಳಿಗೆ ಕೆಲಸವೇ ಇಲ್ಲದೇ ನಾವು ಪರದಾಡುತ್ತಿದ್ದೇವೆ ಬೇಗ ನಮ್ಮನ್ನು ಊರಿಗೆ ಕರೆಸಿಕೊಳ್ಳಿ ಎನ್ನುವ ಅಂಗಲಾಚುವ ಧ್ವನಿ. ಒಂದೆಡೆ ಕಾರ್ಮಿಕರ ಗೋಳು ಮತ್ತೊಂದೆಡೆ ತಮ್ಮ ದೇಹವನ್ನೆ ಬಂಡವಾಳವಾಗಿಸಿಕೊಂಡು ಮುಂಬೈ-ಪುಣೆಯನ್ನೆ ಆಶ್ರಯಿಸಿಕೊಂಡಿದ್ದ ಲೈಂಗಿಕ ಕಾರ್ಯಕರ್ತೆಯರು ಒಪ್ಪತ್ತಿನೂಟಕ್ಕೆ ಪಡುತ್ತಿರುವ ಗೋಳಾಟ ಅಷ್ಟಿಷ್ಟಲ್ಲ.