ಚೆನ್ನೈ : ವಿಶ್ವ ಬ್ಯಾಟಿಂಗ್ ದಿಗ್ಗಜರ ನಿದ್ದೆಗೆಡಿಸಿದ್ದ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ ಅವರ ಬಯೋಪಿಕ್ ನಲ್ಲಿ ತಮಿಳು ನಟ ವಿಜಯ್ ಸೇತುಪತಿ ನಟಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಈಗಾಗಲೇ ಹಲವು ಆಟಗಾರರ ಬಯೋಪಿಕ್ ಗಳು ಜನರ ಮುಂದೆ ಬಂದಿವೆ. ಅಲ್ಲದೇ, ಸಿನಿಮಾಗಳು ಕೂಡ ತಯಾರು ಆಗಿವೆ. ಸದ್ಯ ಇದೇ ಮಾದರಿಯಲ್ಲಿ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ ಅವರ ಜ ವನ ಆಧರಿಸಿ ಸಿನಿಮಾ ಸಿದ್ಧವಾಗುತ್ತಿದೆ.

ಎಂ.ಎಸ್. ಶ್ರೀಪತಿ ನಿರ್ದೇಶನ ಮಾಡುತ್ತಿದ್ದಾರೆ. ಈ ಬಯೋಪಿಕ್ ಸಿನಿಮಾಗೆ ‘800’ ಎಂಬ ಟೈಟಲ್ ಕೂಡ ನೀಡಿದ್ದಾರೆ. ಆದರೆ, ಈ ಕುರಿತು ಅಧಿಕೃತ ಮಾಹಿತಿ ಮಾತ್ರ ಹೊರ ಬಿಳ್ಳುವುದು ಮಾತ್ರ ಬಾಕಿ ಇದೆ.
ಮುರಳೀಧರನ್ ಅವರ ಬೌಲಿಂಗ್ ಶೈಲಿ ತರಬೇತಿಯನ್ನು ಸೇತುಪತಿ ಕಲಿಯುತ್ತಿದ್ದಾರೆ. ಈಗಾಗಲೇ ಸಾಕಷ್ಟು ವಿಶಿಷ್ಟ ಪಾತ್ರಗಳಲ್ಲಿ ನಟಿಸಿ ಮೆಚ್ಚುಗೆ ಪಡೆದಿರುವ ವಿಜಯ್ ಸೇತುಪತಿ, ಮುರಳೀಧರನ್ ಪಾತ್ರದಲ್ಲಿ ಹೇಗೆ ಕಾಣಿಸಲಿದ್ದಾರೆ ಎಂಬುವುದು ಅಭಿಮಾನಿಗಳ ಕುತೂಹಲವಾಗಿದೆ.

ವಿಜಯ್ ಸೇತುಪತಿ ನಟಿಸಿರುವ ಹೊಸ ಸಿನಿಮಾ ‘ಕಾ ಪೇ ರಣಸಿಂಗಂ’ ಸಿನಿಮಾ ಅಕ್ಟೋಬರ್ 2ರಂದು ಒಟಿಟಿ ವೇದಿಕೆಯಲ್ಲಿ ಬಿಡುಗಡೆಯಾಗಿತ್ತು. ಅಲ್ಲಿ ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗಿತ್ತು. ಅಲ್ಲದೇ, ಇದೇ ಸಿನಿಮಾ ಅ. 16 ರಂದು ಚಲನಚಿತ್ರ ಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಮುತ್ತಯ್ಯ ಮುರಳೀಧರನ್ ಅವರು, ಟೆಸ್ಟ್ ಕ್ರಿಕೆಟ್ ನಲ್ಲಿ 800 ವಿಕೆಟ್ ಪಡೆದು ಇತಿಹಾಸ ನಿರ್ಮಿಸಿದ್ದರು. ಏಕದಿನ ಕ್ರಿಕೆಟ್‍ ನಲ್ಲಿ 534 ವಿಕೆಟ್ ಪಡೆದಿದ್ದ ಅವರು, 2011ರಲ್ಲಿ ವಿಶ್ವಕಪ್ ಫೈನಲ್ ಪಂದ್ಯದೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ಗೆು ವಿದಾಯ ಹೇಳಿದ್ದರು.

Leave a Reply

Your email address will not be published. Required fields are marked *

You May Also Like

ಖ್ಯಾತ ಚಿತ್ರ ನಟ ಇರ್ಫಾನ್ ಖಾನ ಇನ್ನಿಲ್ಲ

ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಬಾಲಿವುಡ್ ನಟ ಇರ್ಫಾನ್ ಖಾನ್(53) ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿದ್ದಾರೆ.

ಹುಚ್ಚ ವೆಂಕಟ್ ಗೆ ಸಹಾಯ ಹಸ್ತ ಚಾಚಿದ ಕಿಚ್ಚ ಸುದೀಪ್..!

ಬೆಂಗಳೂರು: ಹುಚ್ಚ ವೆಂಕಟ್ ಮಾನಸಿಕ ಸಮತೋಲನ ಕಳೆದುಕೊಂಡ ಕಾರಣ ರಸ್ತೆಯಲ್ಲಿ ಬಾಯಿಗೆ ಬಂದಂತೆ ಮಾತನಾಡಿ ಓಡಾಡುತ್ತಿದ್ದಾರೆ.…

ಇನ್ನೊಂದು ಜನ್ಮವಿದ್ದರೆ ಶಿವಣ್ಣ ಅಣ್ಣನಾಗಲಿ ಎಂದ ಜಗ್ಗೇಶ್

ನನಗೆ ಇನ್ನೊಂದು ಜನ್ಮ ಇದ್ದರೆ ಶಿವಣ್ಣನೆ ನನಗೆ ಅಣ್ಣನಾಗಿ ಬರಲಿ.. ನನ್ನ ಬದುಕಲ್ಲಿ ನಾನು ಕಂಡ ಶ್ರೇಷ್ಠಮನುಜ..ರಾಜಣ್ಣ ಅವರ ಕರೆಯುತ್ತಿದ್ದದ್ದು ದೊಡ್ಡ ನೋಟಿನ ಸಾಹುಕಾರ ಎಂದು!

ನಟಿ ನಯನತಾರಾ ಅವರ ಮತ್ತೊಂದು ಲವ್ ಸ್ಟೋರಿ ಇದು!!

ನಟಿ ನಯನತಾರಾ ಲವ್ ಸ್ಟೋರಿಗಳ ಮೂಲಕವೇ ಹೆಚ್ಚು ಸುದ್ದಿಯಾದವರು. ತಮ್ಮ ಹಿಂದಿನ ಲವ್ ಸ್ಟೋರಿಗಳನ್ನು ಮರೆತು ಇದೀಗ ನಿರ್ದೇಶಕ ವಿಘ್ನೇಶ್ ಶಿವನ್ ಜೊತೆ ಲಿವಿಂಗ್ ರಿಲೇಷನ್ ಶಿಪ್ ನಲ್ಲಿದ್ದಾರೆ. ಈ ಸಂದರ್ಭದಲ್ಲಿ ಮತ್ತೊಂದು ಶಾಕಿಂಗ್ ನ್ಯೂಸ್ ನೀಡಿದ್ದಾರೆ.