ಚೆನ್ನೈ : ವಿಶ್ವ ಬ್ಯಾಟಿಂಗ್ ದಿಗ್ಗಜರ ನಿದ್ದೆಗೆಡಿಸಿದ್ದ ಸ್ಪಿನ್ ಮಾಂತ್ರಿಕ ಮುತ್ತಯ್ಯ ಮುರಳೀಧರನ್ ಅವರ ಬಯೋಪಿಕ್ ನಲ್ಲಿ ತಮಿಳು ನಟ ವಿಜಯ್ ಸೇತುಪತಿ ನಟಿಸಲಿದ್ದಾರೆ ಎಂದು ತಿಳಿದು ಬಂದಿದೆ.

ಈಗಾಗಲೇ ಹಲವು ಆಟಗಾರರ ಬಯೋಪಿಕ್ ಗಳು ಜನರ ಮುಂದೆ ಬಂದಿವೆ. ಅಲ್ಲದೇ, ಸಿನಿಮಾಗಳು ಕೂಡ ತಯಾರು ಆಗಿವೆ. ಸದ್ಯ ಇದೇ ಮಾದರಿಯಲ್ಲಿ ಶ್ರೀಲಂಕಾದ ಮುತ್ತಯ್ಯ ಮುರಳೀಧರನ್ ಅವರ ಜ ವನ ಆಧರಿಸಿ ಸಿನಿಮಾ ಸಿದ್ಧವಾಗುತ್ತಿದೆ.

ಎಂ.ಎಸ್. ಶ್ರೀಪತಿ ನಿರ್ದೇಶನ ಮಾಡುತ್ತಿದ್ದಾರೆ. ಈ ಬಯೋಪಿಕ್ ಸಿನಿಮಾಗೆ ‘800’ ಎಂಬ ಟೈಟಲ್ ಕೂಡ ನೀಡಿದ್ದಾರೆ. ಆದರೆ, ಈ ಕುರಿತು ಅಧಿಕೃತ ಮಾಹಿತಿ ಮಾತ್ರ ಹೊರ ಬಿಳ್ಳುವುದು ಮಾತ್ರ ಬಾಕಿ ಇದೆ.
ಮುರಳೀಧರನ್ ಅವರ ಬೌಲಿಂಗ್ ಶೈಲಿ ತರಬೇತಿಯನ್ನು ಸೇತುಪತಿ ಕಲಿಯುತ್ತಿದ್ದಾರೆ. ಈಗಾಗಲೇ ಸಾಕಷ್ಟು ವಿಶಿಷ್ಟ ಪಾತ್ರಗಳಲ್ಲಿ ನಟಿಸಿ ಮೆಚ್ಚುಗೆ ಪಡೆದಿರುವ ವಿಜಯ್ ಸೇತುಪತಿ, ಮುರಳೀಧರನ್ ಪಾತ್ರದಲ್ಲಿ ಹೇಗೆ ಕಾಣಿಸಲಿದ್ದಾರೆ ಎಂಬುವುದು ಅಭಿಮಾನಿಗಳ ಕುತೂಹಲವಾಗಿದೆ.

ವಿಜಯ್ ಸೇತುಪತಿ ನಟಿಸಿರುವ ಹೊಸ ಸಿನಿಮಾ ‘ಕಾ ಪೇ ರಣಸಿಂಗಂ’ ಸಿನಿಮಾ ಅಕ್ಟೋಬರ್ 2ರಂದು ಒಟಿಟಿ ವೇದಿಕೆಯಲ್ಲಿ ಬಿಡುಗಡೆಯಾಗಿತ್ತು. ಅಲ್ಲಿ ಉತ್ತಮ ಪ್ರತಿಕ್ರಿಯೆ ಕೂಡ ವ್ಯಕ್ತವಾಗಿತ್ತು. ಅಲ್ಲದೇ, ಇದೇ ಸಿನಿಮಾ ಅ. 16 ರಂದು ಚಲನಚಿತ್ರ ಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಮುತ್ತಯ್ಯ ಮುರಳೀಧರನ್ ಅವರು, ಟೆಸ್ಟ್ ಕ್ರಿಕೆಟ್ ನಲ್ಲಿ 800 ವಿಕೆಟ್ ಪಡೆದು ಇತಿಹಾಸ ನಿರ್ಮಿಸಿದ್ದರು. ಏಕದಿನ ಕ್ರಿಕೆಟ್‍ ನಲ್ಲಿ 534 ವಿಕೆಟ್ ಪಡೆದಿದ್ದ ಅವರು, 2011ರಲ್ಲಿ ವಿಶ್ವಕಪ್ ಫೈನಲ್ ಪಂದ್ಯದೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ಗೆು ವಿದಾಯ ಹೇಳಿದ್ದರು.

Leave a Reply

Your email address will not be published. Required fields are marked *

You May Also Like

ಚಿರಂಜೀವಿ ಸರ್ಜಾ ನೆನೆದು ಭಾವನಾತ್ಮಕವಾಗಿ ಟ್ವೀಟ್ ಮಾಡಿದ ಮೇಘನಾ..!

ಬೆಂಗಳೂರು: ಇತ್ತಿಚೆಗಷ್ಟೆ ನಿಧನ ಹೊಂದಿದ ನಟ ಚಿರಂಜೀವಿ ಸರ್ಜಾ ಬಹುಬೇಗ ಮರೆಯುವಂತಹ ನಟನಲ್ಲ. ಅದರಲ್ಲೂ 10…

ಧೋನಿಗಿಂದು ಜನ್ಮದಿನ: ವಯಸ್ಸು ನಲವತ್ತು, ಹಂಗೇ ಇದೆ ಗೆಲ್ಲುವ ತಾಕತ್ತು

ನವದೆಹಲಿ: ಮ್ಯಾಚ್ ವಿನ್ನರ್ ಮಹೇಂದ್ರ ಸಿಂಗ್ ಧೋನಿ ಇಂದು ತಮ್ಮ 40ನೇ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ.…

ಆರಂಭಿಕ ಪಂದ್ಯಗಳಲ್ಲಿ ಕೊಹ್ಲಿ ವಿಫಲವಾಗಿದ್ದೇಕೆ?

ದುಬೈ : ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಆರಂಭಿಕ ವೈಫಲ್ಯ ಅನುಭವಿಸಿರುವ ಹಿಂದಿನ ಕಾರಣವನ್ನು ಕಿಂಗ್ ಕೊಹ್ಲಿ ಬಿಚ್ಚಿಟ್ಟಿದ್ದಾರೆ.

ನಿಡಗುಂದಿ ವಲಯ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟ
ಸದೃಢ ಮನಸ್ಸು ವಿಕಸನಕ್ಕೆ ಕ್ರೀಡೆಗಳು ಸಹಕಾರಿ- ಬಿ.ಟಿ.ಗೌಡರ

ಉತ್ತರಪ್ರಭ ಸುದ್ದಿ ನಿಡಗುಂದಿ: ಕ್ರೀಡೆಗಳಿಂದ ಸದೃಢ ದೇಹ,ಮನಸ್ಸು ಹೊಂದಬಹುದು. ಅವು ಶಾರೀರಿಕ ವಿಕಸನಕ್ಕೆ ಪ್ರೇರಕವಾಗಿವೆ ಎಂದು…