ಮುಂಡರಗಿ: ಪಶ್ಚಿಮ ಬಂಗಾಳ ರಾಜ್ಯವು ಗೂಂಡಾ ರಾಜ್ಯವಾಗಿ ಪರಿವರ್ತನೆಯಾಗಬಹುದು ಎಂಬ ದೃಷ್ಟಿಯಿಂದ ಹೌರಾ ಜಿಲ್ಲೆಯಲ್ಲಿ ನಡೆದ ಘಟನೆಯನ್ನು ಸಿಬಿಐ ತನಿಖೆಗೆ ಒಳಪಡಿಸಬೇಕೆಂದು ತೇಜಸ್ವಿ ಸೂರ್ಯ ಅಭಿಮಾನಿ ಬಳಗದ ತಾಲೂಕು ಅಧ್ಯಕ್ಷ ಹಾಗೂ ಪುರಸಭೆ ಸದಸ್ಯ ಪವನ್ ಮೇಟಿ ಆಗ್ರಹಿಸಿದ್ದಾರೆ.

ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯಲ್ಲಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ ಹಾಗೂ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರ ಹತ್ಯೆ ಖಂಡಿಸಿ ನಬನ್ನಾ ಚಲೋ ಜಾಥಾ ವೇಳೆ ಬಾಂಬ್ ಗಳನ್ನು ಎಸೆದಿರುವ ಪ್ರಕರಣ ಖಂಡಿಸಿ ಪತ್ರಿಕಾ ಪ್ರಕಟಣೆ ನೀಡಿ ಘಟನೆಯನ್ನು ಖಂಡಿಸಿದ್ದಾರೆ.  

ಪಶ್ಚಿಮ ಬಂಗಾಳದ ಟಿಎಂಸಿ ಕಾರ್ಯಕರ್ತರು ಈ ಮೆರವಣಿಗೆಯ ಮೇಲೆ ದೇಶಿಯ ಬಾಂಬುಗಳನ್ನು ಎಸೆಯುವುದರ ಮೂಲಕ ಅಲ್ಲಿನ ಸರಕಾರ ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ಕಾನೂನುಗಳನ್ನು ಮಮತಾ ಬ್ಯಾನರ್ಜಿ ಸರ್ಕಾರವು ಹಾಡಹಗಲೇ ಕೊಲೆ ಮಾಡಿದೆ. ಈ ಪ್ರಜಾಪ್ರಭುತ್ವದಲ್ಲಿ ಸಾಂವಿಧಾನಿಕವಾಗಿ ಶಾಂತಿಯುತವಾಗಿ ಪ್ರತಿಭಟಿಸುವ ಹಕ್ಕು ಪ್ರತಿಯೊಬ್ಬರಿಗೂ ಕೂಡ ಇದೆ. ಈ ದೇಶದ ಸಾಂವಿಧಾನಿಕ ಹುದ್ದೆಯಲ್ಲಿರುವಂತಹ ತೇಜಸ್ವಿ ಸೂರ್ಯ ಅವರ ನೇತೃತ್ವದಲ್ಲಿ ನಡೆಯುತ್ತಿದ್ದಂತಹ ಶಾಂತಿಯುತ ಪ್ರತಿಭಟನೆ ಹತ್ತಿಕ್ಕಲು ನಡೆದ ಘಟನೆ ಇದಾಗಿದೆ ಎಂದು ಆರೋಪಿಸಿದರು.

ಈ ಘಟನೆಗೆ ಮಮತಾ ಬ್ಯಾನರ್ಜಿ ಅವರೇ ನೇರ ಕಾರಣವಾಗಿದ್ದು ಈ ಕೃತ್ಯ ಖಂಡನೀಯ ಎಂದು ಪವನ್ ವಿರೋಧ ವ್ಯಕ್ತ ಪಡಿಸಿದರು.

Leave a Reply

Your email address will not be published. Required fields are marked *

You May Also Like

ಪಿಎಂ ಕೇರ್ಸ್ ಅಡಿ ಸಂಗ್ರಹವಾದ ಮೊತ್ತದ ಲೆಕ್ಕ ಕೊಡಿ: ಸಿದ್ದರಾಮಯ್ಯ

ಬೆಂಳೂರು: ಪ್ರತಿಪಕ್ಷ ನಾಯಕರಾಗಿ ಅಧಿಕಾರಿಗಳ ಸಭೆಯನ್ನೇ ನಡೆಸಿಲ್ಲ ಎಂದು ಬಿಜೆಪಿ ಮುಖಂಡ ಬಿ.ಎಲ್.ಸಂತೋಷ ಆರೋಪಿಸಿದ್ದಾರೆ. ವಿಧಾನಸೌಧದಲ್ಲಿರುವ…

ಮಕ್ಕಳಲ್ಲಿ ಸೋಂಕಿನ ಪ್ರಮಾಣ ಆಧರಿಸಿ ಶಾಲೆಗಳಿಗೆ ರಜೆ ಘೋಷಿಸಲು ತೀರ್ಮಾನ

ಗದಗ:ಜಿಲ್ಲಾದ್ಯಂತ ಕೋವಿಡ್ ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಾಗಿ ಕ್ರಮ ಜರುಗಿಸಲಾಗುತ್ತಿದೆ. ಶಾಲಾ ಮಕ್ಕಳಿಗೆ ಸೋಂಕು ತಗಲುವಿಕೆಯ ಪ್ರಮಾಣ…

ಗದಗ ಜಿಲ್ಲೆಯಲ್ಲಿಂದು 24 ಕೊರೊನಾ ಪಾಸಿಟಿವ್!

ಗದಗ ಜಿಲ್ಲೆಯಲ್ಲಿಂದು ಮತ್ತೆ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಜನರನ್ನು ಮತ್ತಷ್ಟು ಆತಂಕಕ್ಕೀಡು ಮಾಡಿದೆ.

ವಿಕೆಂಡ್ ಮೀಟಿಂಗ್ ನಲ್ಲಿ ಮೂರನೇ ಅಭ್ಯರ್ಥಿ ಕಣಕ್ಕಿಳಿಸಲು ತೀರ್ಮಾನಿಸುತ್ತಾ ಬಿಜೆಪಿ?

ಬಿಜೆಪಿ ಕೋರ್ ಕಮೀಟಿಯ ಮೀಟಿಂಗ್ ಗೆ ಇದೀಗ ಹೆಚ್ಚು ಮಹತ್ವ ಬಂದಿದ್ದು ವಿಕೇಂಡ್ ಮೀಟಿಂಗ್ ಯಾವ ನಿರ್ಧಾರಕ್ಕೆ ಸಾಕ್ಷಿಯಾಗಲಿದೆ ಎನ್ನುವುದು ಆಕಾಂಕ್ಷಿಗಳಲ್ಲಿ ಆಸಕ್ತಿ ಮೂಡಿಸಿದೆ.