ಬೆಂಗಳೂರು : ಸಹೋದರ ಎರಡನೇ ತಾಯಿ ಇದ್ದಂತೆ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ.

ನಿರ್ದೇಶಕ ತರುಣ್ ಸುಧೀರ್ ಅವರಿಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಿರುವ ಅವರು, ಇಂದು ನಿರ್ದೇಶಕ ತರುಣ್ ಸುದೀರ್ ಅವರ ಹುಟ್ಟು ಹಬ್ಬ. ದರ್ಶನ್ ಅಷ್ಟೇ ಅಲ್ಲದೇ, ಅನೇಕ ನಟ, ನಟಿಯರು, ನಿರ್ದೇಶಕರು ಸಾಮಾಜಿ ಜಾಲತಾಣಗಳ ಮೂಲಕ ಶುಭಾಶಯ ಕೋರುತ್ತಿದ್ದಾರೆ.

ನಟ ದರ್ಶನ್ ಟ್ವೀಟ್ ಮಾಡಿ ಸಹೋದರನಿಗೆ ಶುಭಾಶಯ ತಿಳಿಸಿದ್ದಾರೆ. ಅಲ್ಲದೇ, ರಾಬರ್ಟ್ ಸಿನಿಮಾದ ಮತ್ತೊಂದು ಪೋಸ್ಟರ್ ರಿಲೀಸ್ ಮಾಡಿದ್ದಾರೆ. ಒಬ್ಬ ಸಹೋದರ ಇನ್ನೊಬ್ಬ ತಾಯಿ ಇದ್ದಂತೆ. ತರುಣನಿಗೆ ನಮ್ಮ ರಾಬರ್ಟ್ ತಂಡದಿಂದ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು. ನಿನ್ನ ಇಷ್ಟಾರ್ಥಗಳೆಲ್ಲವೂ ಈಡೇರಲಿ ಎಂದು ಆಶಿಸುತ್ತೇನ. ನಿಮ್ಮ ದಾಸ ದರ್ಶನ್ ಎಂದು ಟ್ವೀಟ್ ಮಾಡಿದ್ದಾರೆ.

ಜೊತೆಗೆ ರಾಬರ್ಟ್ ಸಿನಿಮಾದ ಹೊಸ ಪೋಸ್ಟರ್ ರಿಲೀಸ್ ಮಾಡಲಾಗಿದೆ. ನಿರ್ದೇಶಕ ತರುಣ್ ಸುಧೀರ್ ಹುಟ್ಟು ಹಬ್ಬದ ಪ್ರಯುಕ್ತ ಸಿನಿಮಾದ ಹೊಸ ಪೋಸ್ಟರ್ ರಿಲೀಸ್ ಆಗಿದೆ. ರಾಬರ್ಟ್ ಪೋಸ್ಟರ್ ಪ್ರೇಕ್ಷಕರಲ್ಲಿ ಕುತೂಹಲ ಕೆರಳಿಸಿದೆ. ದರ್ಶನ್ ಮೂರು ಶೇಡ್ನಿಲ್ಲಿ ಕಾಣಿಸಿಕೊಂಡಿದ್ದಾರೆ. ಮೂರು ಅವತಾರವೆತ್ತಿರುವ ಈ ಪೋಸ್ಟರ್ ಸಿನಿಮಾದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಅಷ್ಟೇ ಅಲ್ಲದೇ, ಸಿನಿಮಾ ಚಿತ್ರೀಕರಣ ಮುಗಿಸಿ ತೆರೆಯ ಮೇಲೆ ಬರಲು ಸಜ್ಜಾಗಿದೆ. ಕೊರೊನಾ ಲಗ್ಗೆ ಇಡದಿದ್ದರೆ, ಸಿನಿಮಾ ಇಷ್ಟು ಹೊತ್ತಿಗೆ ರಿಲೀಸ್ ಆಗಬೇಕಿತ್ತು. ಈ ಚಿತ್ರದಲ್ಲಿ ದರ್ಶನ್ಗೆಸ ನಾಯಕಿಯಾಗಿ ಆಶಾ ಭಟ್ ಕಾಣಿಸಿಕೊಂಡಿದ್ದಾರೆ. ಜೊತೆಗೆ ವಿನೋದ್ ಪ್ರಭಾಕರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ತೆಲುಗು ನಟ ಜಗಪತಿ ಬಾಬು ವಿಲನ್ ಆಗಿ ಅಭಿನಯಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಕಿ ಬಾಯ್ ಚಿತ್ರವನ್ನು ಅಕ್ರಮವಾಗಿ ಪ್ರಸಾರ ಮಾಡಿದ ತೆಲುಗು ಚಾನಲ್!

ಕೆಜಿಎಫ್ ಚಿತ್ರವನ್ನು ಅಕ್ರಮವಾಗಿ ಪ್ರಸಾರ ಮಾಡಿದ್ದ ತೆಲುಗು ಟಿವಿ ಚಾನಲ್ ಒಂದರ ವಿರುದ್ಧ ಕಾನೂನು ಹೋರಾಟ ನಡೆಸಲು ಚಿತ್ರ ತಂಡ ತೀರ್ಮಾನಿಸಿದೆ.

ನಟ ಸುಶಾಂತ್ ಆತ್ಮಹತ್ಯೆ – 8 ಜನ ಸೆಲೆಬ್ರಿಟಿಗಳ ಮೇಲೆ ದೂರು ದಾಖಲು!

ಪಾಟ್ನಾ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಜನ ಸೆಲೆಬ್ರಿಟಿಗಳ…

ಪುಟಾಣಿಗಳ ಬಿಂದಾಸ್ ಸ್ಟೇಪ್ಸ್…ಬೊಂಬಾಟ್ ಪ್ರಫಾರ್ಮನ್ಸ್ ಗೆ ಜನ ಫಿದಾ…!

ವಿಶೇಷ ವರದಿ: ಗುಲಾಬಚಂದ ಆರ್. ಜಾಧವಆಲಮಟ್ಟಿ : ಪುಟ್ಟ ಪುಟ್ಟ ಪುಟಾಣಿ ಮಕ್ಕಳು ಫೂಲ್ ಜೋಶ್…

ಬಸವ ಜಯಂತಿ ವಿಶೇಷ | ಕನ್ನಡ ಸಿನಿಮಾಗಳಲ್ಲಿ ಬಸವಣ್ಣ

ಜೀವನದ ಅರ್ಥವನ್ನು ವಚನಗಳ ಮೂಲಕ ಸರಳವಾಗಿ ಸಾರಿದ ಬಸವೇಶ್ವರರು ಇಂದಿನ ದಿನಗಳಲ್ಲಿ ಹೆಚ್ಚು ಪ್ರಸ್ತುತವಾಗುತ್ತಾರೆ. ಬಸವ ಜಯಂತಿ ಸಂದರ್ಭದಲ್ಲಿ ಕನ್ನಡ ಬೆಳ್ಳಿತೆರೆ ಮೇಲೆ ಪ್ರಸ್ತಾಪವಾದ ಬಸವೇಶ್ವರರ ಬದುಕು, ವಚನ ಸಾಹಿತ್ಯದ ಬಗೆಗೊಂದು ನೋಟ