ಬೆಂಗಳೂರು : ಸಹೋದರ ಎರಡನೇ ತಾಯಿ ಇದ್ದಂತೆ ಎಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ.

ನಿರ್ದೇಶಕ ತರುಣ್ ಸುಧೀರ್ ಅವರಿಗೆ ಹುಟ್ಟು ಹಬ್ಬದ ಶುಭಾಶಯ ತಿಳಿಸಿರುವ ಅವರು, ಇಂದು ನಿರ್ದೇಶಕ ತರುಣ್ ಸುದೀರ್ ಅವರ ಹುಟ್ಟು ಹಬ್ಬ. ದರ್ಶನ್ ಅಷ್ಟೇ ಅಲ್ಲದೇ, ಅನೇಕ ನಟ, ನಟಿಯರು, ನಿರ್ದೇಶಕರು ಸಾಮಾಜಿ ಜಾಲತಾಣಗಳ ಮೂಲಕ ಶುಭಾಶಯ ಕೋರುತ್ತಿದ್ದಾರೆ.

ನಟ ದರ್ಶನ್ ಟ್ವೀಟ್ ಮಾಡಿ ಸಹೋದರನಿಗೆ ಶುಭಾಶಯ ತಿಳಿಸಿದ್ದಾರೆ. ಅಲ್ಲದೇ, ರಾಬರ್ಟ್ ಸಿನಿಮಾದ ಮತ್ತೊಂದು ಪೋಸ್ಟರ್ ರಿಲೀಸ್ ಮಾಡಿದ್ದಾರೆ. ಒಬ್ಬ ಸಹೋದರ ಇನ್ನೊಬ್ಬ ತಾಯಿ ಇದ್ದಂತೆ. ತರುಣನಿಗೆ ನಮ್ಮ ರಾಬರ್ಟ್ ತಂಡದಿಂದ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು. ನಿನ್ನ ಇಷ್ಟಾರ್ಥಗಳೆಲ್ಲವೂ ಈಡೇರಲಿ ಎಂದು ಆಶಿಸುತ್ತೇನ. ನಿಮ್ಮ ದಾಸ ದರ್ಶನ್ ಎಂದು ಟ್ವೀಟ್ ಮಾಡಿದ್ದಾರೆ.

ಜೊತೆಗೆ ರಾಬರ್ಟ್ ಸಿನಿಮಾದ ಹೊಸ ಪೋಸ್ಟರ್ ರಿಲೀಸ್ ಮಾಡಲಾಗಿದೆ. ನಿರ್ದೇಶಕ ತರುಣ್ ಸುಧೀರ್ ಹುಟ್ಟು ಹಬ್ಬದ ಪ್ರಯುಕ್ತ ಸಿನಿಮಾದ ಹೊಸ ಪೋಸ್ಟರ್ ರಿಲೀಸ್ ಆಗಿದೆ. ರಾಬರ್ಟ್ ಪೋಸ್ಟರ್ ಪ್ರೇಕ್ಷಕರಲ್ಲಿ ಕುತೂಹಲ ಕೆರಳಿಸಿದೆ. ದರ್ಶನ್ ಮೂರು ಶೇಡ್ನಿಲ್ಲಿ ಕಾಣಿಸಿಕೊಂಡಿದ್ದಾರೆ. ಮೂರು ಅವತಾರವೆತ್ತಿರುವ ಈ ಪೋಸ್ಟರ್ ಸಿನಿಮಾದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಅಷ್ಟೇ ಅಲ್ಲದೇ, ಸಿನಿಮಾ ಚಿತ್ರೀಕರಣ ಮುಗಿಸಿ ತೆರೆಯ ಮೇಲೆ ಬರಲು ಸಜ್ಜಾಗಿದೆ. ಕೊರೊನಾ ಲಗ್ಗೆ ಇಡದಿದ್ದರೆ, ಸಿನಿಮಾ ಇಷ್ಟು ಹೊತ್ತಿಗೆ ರಿಲೀಸ್ ಆಗಬೇಕಿತ್ತು. ಈ ಚಿತ್ರದಲ್ಲಿ ದರ್ಶನ್ಗೆಸ ನಾಯಕಿಯಾಗಿ ಆಶಾ ಭಟ್ ಕಾಣಿಸಿಕೊಂಡಿದ್ದಾರೆ. ಜೊತೆಗೆ ವಿನೋದ್ ಪ್ರಭಾಕರ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ತೆಲುಗು ನಟ ಜಗಪತಿ ಬಾಬು ವಿಲನ್ ಆಗಿ ಅಭಿನಯಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಬಿಗ್ ಬಿ ಮನೆಯಲ್ಲಿ ಕೌನ್ ಬನೇಗಾ ಕರೋಡಪತಿ ಪ್ರೋಮೊ ಶೂಟ್

ಬಾಲಿವುಡ್ ಖ್ಯಾತ ನಟ ಹಾಗೂ ಬಿಗ್ ಬಿ ಅಮಿತಾಬ್ ಬಚ್ಚನ್ ಅವರ ಮನೆಯಿಂದಲೇ ಪ್ರೊಮೊ ವಿಡಿಯೊವನ್ನು ಚಿತ್ರೀಕರಿಸಲಾಗಿದ್ದು ಅದನ್ನು ಡಿಜಿಟಲ್ ಮೂಲಕ ದಂಗಲ್ ಚಿತ್ರದ ನಿರ್ದೇಶಕ ನಿತೇಶ್ ತಿವಾರಿ ಚಿತ್ರೀಕರಿಸಿದ್ದಾರೆ. ಲಾಕ್ ಡೌನ್ ಸಮಯದಲ್ಲಿ ಇದ್ಯಾವ ಚಿತ್ರಕರಣ ಅಂತ ಕುತೂಹಲಾನಾ?

ಬಹು ದಿನಗಳ ನಂತರ ಚಂದನವನಕ್ಕೆ ಪ್ರಭುದೇವ್ ಕಾಲಿಡುವರೇ?

ಬೆಂಗಳೂರು : ಶಿವಣ್ಣ ಅವರೊಂದಿಗೆ ಪ್ರಭುದೇವ್ ಚಂದನವನದಲ್ಲಿ ಸದ್ದು ಮಾಡಲು ತಯಾರಿ ನಡೆಸಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಮುಖ್ಯಮಂತ್ರಿ ಬಸವರಾಜ ಬೋಮ್ಮಾಯಿ ಮತ್ತು ಶಿವರಾಜ ಕುಮಾರ ಕೆಲವೇ ಕ್ಷಣಗಳಲ್ಲಿ ಜಂಟಿ ಸುದ್ದಿ ಗೋಷ್ಠಿ

ಬೆಂಗಳೂರಿನ ವಿಕ್ರಮ್ ಆಸ್ಪತ್ರೆ ಅವರ ಅಭಿಮಾನಿಗಳು ದೌಡು ಹೆಚ್ಚಿನ ಪೊಲೀಸ್ ಬೀಗಿ ಬಂದೋಬಸ್ತ ಮಾಡಲಾಗಿದ್ದು .ರಾಜ್ಯಾದ್ಯಂತ ಅವರ ಅಭಿಮಾನಿಗಳು ಬೇಗ ಗುಣಮುಖರಾಗಿ ಅಪ್ಪು ಬರಲಿ ಎಂದು ಪ್ರಾರ್ಥನೆ ಮಾಡುತ್ತಿರುವ ಬೆನ್ನಲ್ಲೆ ಕೆಲವೇ ಕ್ಷಣದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಸಿಎಂ ಮಾತನಾಡಲಿದ್ದಾರೆ. ಅಸ್ಪತ್ರೆಯತ್ತ ಚಿತ್ರರಂಗದ ಗಣ್ಯರು ,ರಾಜಕೀಯ ಮುಖಂಡರು ಚಿತ್ರರಂಗದ ಚಟುವಟಿಕೆಗಳನ್ನು ಬದಿಗೊತ್ತಿ ಎಲ್ಲರೂ ವಿಕ್ರಮ್ ಆಸ್ಪತ್ರೆಯತ್ತ ಬರುತ್ತಿದ್ದು ಕ್ಷಣಕ್ಷಣಕ್ಕೂ ಪುನೀತ್ ರಾಜಕುಮಾರ ಅವರ ಆರೋಗ್ಯ

ಮರ್ಯಾದೆಗೇಡು ಹತ್ಯೆ: ಮರ್ಡರ್ ಸಿನಿಮಾ ಪೋಸ್ಟರ್ ರಿಲೀಜ್ ಮಾಡಿದ RGV

ಮರ್ಯಾದೆಗೇಡು ಹತ್ಯೆ ಕುರಿತ ಸಿನಿಮಾ ಮರ್ಡರ್ ನ ಪೋಸ್ಟರ್ ಬಿಡುಗಡೆ ಮಾಡಿದ ರಾಮ್ ಗೋಪಾಲ್ ವರ್ಮಾ.…