ಅಬುಧಾಬಿ : ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಪಂಜಾಬ್ ಗೆ ಮತ್ತೊಮ್ಮೆ ಅದೃಷ್ಟ ಕೈ ಕೊಟ್ಟಿದೆ.

ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಕೊನೆಯ ಪಂಜಾಬ್ ರೋಚಕವಾಗಿ ಸೋಲುಂಡಿದೆ. ಟಾಸ್ ಗೆದ್ದು ಬ್ಯಾಟ್ ಮಾಡಿದ ಕೋಲ್ಕತ್ತಾ ತಂಡ ನಾಯಕ ದಿನೇಶ್ ಕಾರ್ತಿಕ್ ಭರ್ಜರಿ ಆಟದೊಂದಿಗೆ 20 ಓವರ್ ಗಳಲ್ಲಿ 164 ರನ್‍ ಬಾರಿಸಿತ್ತು. ಇದನ್ನು ಬೆನ್ನಟ್ಟಿದ ಪಂಜಾಬ್ ತಂಡಕ್ಕೆ ಉತ್ತಮ ಆರಂಭ ಸಿಕ್ಕಿತು. ಇನ್ನೇನು ಪಂಜಾಬ್ ಗೆದ್ದೇ ಬಿಟ್ಟಿತು ಎನ್ನುವಷ್ಟರಲ್ಲಿಯೇ ಮತ್ತೊಮ್ಮೆ ಕೊನೆಯ ಘಳಿಗೆಯಲ್ಲಿ ಸೋಲುಂಡಿತು.

ರಾಹುಲ್ ಮತ್ತು ಮಯಾಂಕ್ ಅಗರ್ವಾಲ್ ಮೊದಲ ವಿಕೆಟಿಗೆ 116 ರನ್ ಡಳ ಜೊತೆಯಾಟ ಆಡಿದ್ದರು. ಆದರೆ ಕೊನೆಯ ಮೂರು ಓವರ್ ನಲ್ಲಿ ರನ್ ಕಲೆಹಾಕಲು ಎಡವಿದ ಪಂಜಾಬ್ ಕೇವಲ ಎರಡು ರನ್ ಅಂತರದಲ್ಲಿ ಸೋಲು ಕಂಡಿತು. 

ಇಷ್ಟೊಂದು ಉತ್ತಮ ಆರಂಭ ಪಡೆದರೂ ಕೊನೆಯ ಎರಡು ಓವರ್ ಗಳಲ್ಲಿ ಸೋಲು ಕಂಡಿತು. 18ನೇ ಓವರ್ ಬೌಲಿಂಗ್ ಮಾಡಲು ಬಂದ ನರೈನ್ ಅವರು ಆ ಓವರ್ ನಲ್ಲಿ ಕೇವಲ ಎರಡು ರನ್ ಕೊಟ್ಟು ಒಂದು ವಿಕೆಟ್ ಕಿತ್ತರು. ನಂತರ 19ನೇ ಓವರ್ ಬೌಲ್ ಮಾಡಿದ ಕನ್ನಡಿಗ ಪ್ರಸೀದ್ ಕೃಷ್ಣ ಕೇವಲ 6 ರನ್ ಕೊಟ್ಟು ನಾಯಕ ರಾಹುಲ್ ವಿಕೆಟ್ ಸೇರಿ ಎರಡು ವಿಕೆಟ್ ಕಿತ್ತರು. ನಂತರ ಕೊನೆಯ ಓವರ್ ಗೆ ಪಂಜಾಬ್ ಗೆ 14 ರನ್ ಬೇಕಿತ್ತು. ಆಗ ಬೌಲಿಂಗ್ ದಾಳಿಗಿಳಿದ ನರೈನ್ 11 ರನ್ ನೀಡಿ ಒಂದು ವಿಕೆಟ್ ಪಡೆದು ಕೋಲ್ಕತ್ತಾ ತಂಡಕ್ಕೆ ಜಯ ತಂದುಕೊಟ್ಟರು.

Leave a Reply

Your email address will not be published. Required fields are marked *

You May Also Like

ಆರಂಭಿಕ ಪಂದ್ಯಗಳಲ್ಲಿ ಕೊಹ್ಲಿ ವಿಫಲವಾಗಿದ್ದೇಕೆ?

ದುಬೈ : ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಆರಂಭಿಕ ವೈಫಲ್ಯ ಅನುಭವಿಸಿರುವ ಹಿಂದಿನ ಕಾರಣವನ್ನು ಕಿಂಗ್ ಕೊಹ್ಲಿ ಬಿಚ್ಚಿಟ್ಟಿದ್ದಾರೆ.

ರೈನಾ, ರಾಯುಡುರನ್ನು ಚೆನ್ನೈ ನೆನೆಯುತ್ತಿರುವುದೇಕೆ?

ಚೆನ್ನೈ ಸೂಪರ್ ಕಿಂಗ್ಸ್ ತಂಡ ಸತತ ಎರಡು ಸೋಲುಗಳನ್ನು ಕಾಣುತ್ತಿದ್ದಂತೆ ಕೋಚ್ ಗೆ ತಲೆನೋವು ಶುರುವಾಗಿದೆ. ಸುರೇಶ್ ರೈನಾ ಮತ್ತು ಅಂಬಾಟಿ ರಾಯುಡು ಅವರು ಅನುಪಸ್ಥಿತಿ ಕಾಡುತ್ತಿದೆ ಎಂದು ಕೋಚ್ ಅಭಿಪ್ರಾಯಪಟ್ಟಿದ್ದಾರೆ.

ಡ್ಯಾರೆನ್ ಜನಾಂಗೀಯ ನಿಂದನೆಗೆ ಒಳಗಾಗಿದ್ದು ಸತ್ಯವೇ?

ಹೈದರಾಬಾದ್:  ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಭಾಗವಹಿಸಿದ್ದ ಸಂದರ್ಭದಲ್ಲಿ ಜನಾಂಗೀಯ ನಿಂದನೆಗೆ ಒಳಗಾಗಿದ್ದೆ ಎಂದು ವೆಸ್ಟ್…

ಕನ್ನಡಿಗನಿಗೆ ಒಲಿದು ಬರಲಿದೆಯೇ ಧೋನಿ ಸ್ಥಾನ!

ಮಹೇಂದ್ರಸಿಂಗ್ ಧೋನಿ ಅವರು ಸದ್ಯ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ್ದಾರೆ. ಹೀಗಾಗಿ ಭಾರತೀಯ ತಂಡದ ವಿಕೇಟ್ ಕೀಪಿಂಗ್ ಬಗ್ಗೆ ಚರ್ಚೆಗಳು ಶುರುವಾಗಿದೆ. ಇದಕ್ಕೆ ಹತ್ತಾರು ಹೆಸರುಗಳು ಮುನ್ನೆಲೆಗೆ ಬಂದು ಚರ್ಚೆಗೆ ಕಾರಣವಾಗುತ್ತಿವೆ.