ಬೆಂಗಳೂರು : ದೇಶ ಸೇರಿದಂತೆ ರಾಜ್ಯದಲ್ಲಿ ಕೊರೊನಾ ಹಾವಳಿ ಹೆಚ್ಚಾಗುತ್ತಿದೆ. ಇದರ ನಿಯಂತ್ರಣಕ್ಕೆ ಸರ್ಕಾರಗಳು ಕಷ್ಟಪಡುತ್ತಿವೆ. ಇದರ ಮಧ್ಯೆಯೇ ಸೋಂಕಿಗೆ ತುತ್ತಾಗಿ ಗುಣಮುಖರಾಗಿರುವ ಜನಪ್ರತಿನಿಧಿಗಳು ಹಾಗೂ ಅವರ ಕುಟುಂಬಸ್ಥರ ಹೊರೆಯೂ ಸರ್ಕಾರದ ಮೇಲೆ ಬಿದ್ದಿದೆ.

ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಬಿಲ್ ನ್ನು ಸರ್ಕಾರಕ್ಕೆ ನೀಡಲಾಗಿದೆ. ಈ ಹೊರೆಯೇ ಸರ್ಕಾರಕ್ಕೆ ಹೆಚ್ಚಾಗಿದೆ. ಜನ ಪ್ರತಿನಿಧಿಗಳು ಮತ್ತು ಕುಟುಂಬಸ್ಥರ ಬಿಲ್ ಲಕ್ಷದ ಲೆಕ್ಕದಲ್ಲಿ ಆಗಿದ್ದು, ವಿಧಾನಸಭೆ ಸಚಿವಾಲಯಕ್ಕೆ ಬಿಲ್ ಗಳನ್ನು ಸಲ್ಲಿಸಲಾಗಿದೆ.

ನಾಗಮಂಗಲ ಜೆಡಿಎಸ್ ಶಾಸಕ ಸುರೇಶ್ ಗೌಡ ಅವರು, ರೂ. 2,24,279 ಮೊತ್ತದ ಬಿಲ್ ನ್ನು ಸಲ್ಲಿಸಿದ್ದಾರೆ.
ಗುರುಮಿಠ್ಕಲ್ ಜೆಡಿಎಸ್ ಶಾಸಕ ನಾಗನಗೌಡ ಕಂದಕೂರ್ ಅವರು ರೂ. 5,52,242 ಮೊತ್ತದ ಬಿಲ್‍ ನ್ನು ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದಾರೆ. ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ ಅವರು ರೂ. 2,29,247 ಮೊತ್ತದ ಬಿಲ್‍ ನ್ನು ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದಾರೆ.

ಕಲಘಟಗಿ ಬಿಜೆಪಿ ಶಾಸಕ ಸಿ.ಎಂ ನಿಂಬಣ್ಣನವರ್ ಅವರು ರೂ. 2,91,045 ಮೊತ್ತದ ಬಿಲ್‍ ನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ. ಸಂಗಮೇಶ ಅವರು ರೂ. 5,11,172 ಮೊತ್ತದ ಬಿಲ್‍ ನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಕಡೂರು ಬಿಜೆಪಿ ಶಾಸಕ ಬೆಳ್ಳಿ ಪ್ರಕಾಶ್ ಅವರು ರೂ. 1,07,112 ಬಿಲ್ ನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ.

ಬಿಜೆಪಿ ಶಾಸಕ ಅನಿಲ್ ಬೆನಕೆ ಅವರು ಸರ್ಕಾರಕ್ಕೆ ತಮ್ಮ ಹಾಗೂ ಕುಟುಂಬ ಚಿಕಿತ್ಸೆ ಪಡೆದ ರೂ. 8,55,856 ಬಿಲ್ ಅನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಕೊಪ್ಪಳ ಕಾಂಗ್ರೆಸ್ ಶಾಸಕ ರಾಘವೇಂದ್ರ ಹಿಟ್ನಾಳ್ ಅವರು ರೂ. 2,36,021 ಮೊತ್ತದ ಬಿಲ್ ನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ. ರಾಯಭಾಗ ಬಿಜೆಪಿ ಶಾಸಕ ದುರ್ಯೋಧನ ಐಹೊಳೆ ಅವರು ರೂ. 3,07,113 ಮೊತ್ತದ ಬಿಲ್ ನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಹಿರಿಯೂರು ಬಿಜೆಪಿ ಶಾಸಕಿ ಪೂರ್ಣಿಮಾ ಅವರು ರೂ. 2,29,654 ಮೊತ್ತದ ಬಿಲ್ಅಲನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ.

ಶಾಸಕರು ಹಾಗೂ ಅವರ ಕುಟುಂಬಸ್ಥರು ಅನಾರೋಗ್ಯದಿಂದ ಬಳಲುತ್ತಿದ್ದರೆ, ನಿಯಮಗಳಂತೆ ಅದರ ವೆಚ್ಚವನ್ನು ಸರ್ಕಾರವೇ ಭರಿಸಬೇಕು. ಆದರೆ, ಕೊರೊನಾ ವಿಷಯಕ್ಕೆ ಕೆಲವು ಮಾರ್ಪಡುಗಳನ್ನು ಮಾಡಿದ್ದಾರೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದರೇ ಮಾತ್ರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗುತ್ತದೆ. ಈ ಮೊತ್ತವನ್ನು ಸರ್ಕಾರವೇ ಬರಿಸಲಿದೆ. ಆದರೆ, ಈ ನಾಯಕರು ಖಾಸಗಿ ಆಸ್ಪತ್ರೆಗೆ ದಾಖಲಾಗಿ ಉತ್ತಮ ಚಿಕಿತ್ಸೆ ಪಡೆದು ಆ ಬಿಲ್ ನ್ನು ಸರ್ಕಾರಕ್ಕೆ ನೀಡಲಾಗುತ್ತಿದೆ. ಇದಕ್ಕೆ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕ್ವಾರಂಟೈನ್ ನಲ್ಲಿದ್ದ ಮೂವರು ಪರಾರಿ..!

ಕ್ವಾರೆಂಟೈನಲ್ಲಿದ್ದ ಮೂವರು ಪರಾರಿಯಾದ ಘಟನೆ ಮಸ್ಕಿಯಲ್ಲಿ ನಡೆದಿದೆ. ಇಲ್ಲಿನ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕರೋನಾ ಸೋಂಕನ್ನು ತಡೆಗಟ್ಟುವ ನಿಟ್ಟಿನಲ್ಲಿ ಕ್ವಾರಂಟೈನ್ ಮಾಡಲಾಗಿದ್ದವರ ಪೈಕಿ ಮೂರು ಜನ ತಪ್ಪಿಸಿಕೊಂಡು ಹೋಗಿದ್ದಾರೆ ಎನ್ನಲಾಗಿದೆ.

ಮುಂಚೂಣಿ ಕಾರ್ಯಕರ್ತರು, 60 ವರ್ಷ ಮೇಲ್ಪಟ್ಟವರಿಗೆ ಕೋವಿಡ್-19 ಲಸಿಕಾಕರಣ

ಗದಗ : ಜಿಲ್ಲೆಯಲ್ಲಿನ ಆರೋಗ್ಯ ಕಾರ್ಯಕರ್ತರ, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷದ ಮೇಲ್ಪಟ್ಟ ಸಹ…

ಇಟಗಿ ಭೀಮಾಂಬಿಕಾ ಜಾತ್ರೆ ನಿಮಿತ್ಯ ಸಭೆ : ನೂರಕ್ಕಿಂತ ಹೆಚ್ಚು ಜನ ಸೇರಕೂಡದು-ತಹಶೀಲ್ದಾರ್ ಸೂಚನೆ

ತಾಲೂಕಿನ ಇಟಗಿಯ ಧರ್ಮ ದೇವತೆ ಭೀಮಾಂಬಿಕಾ ಜಾತ್ರೆಯ ನಿಮಿತ್ಯ ತಹಸೀಲ್ದಾರ ಕಚೇರಿಯಲ್ಲಿಂದು ತಹಸೀಲ್ದಾರ್ ಜೆ.ಬಿ.ಜಕ್ಕನಗೌಡರ್ ಅಧ್ಯಕ್ಷತೆಯಲ್ಲಿ ಪೂರ್ವ ಭಾವಿ ಸಭೆ ಜರುಗಿತು.

ಕಾರ್ಮಿಕರ ಬದುಕಲ್ಲಿ ನಗೆ ಮೂಡಲಿ – ಕುಮಾರಸ್ವಾಮಿ!

ಕಾರ್ಮಿಕರ ದಿನಾಚರಣೆಯ ಹಿನ್ನೆಲೆಯಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಅವರು ಟ್ವಿಟ್ ಮಾಡಿ ಶುಭಾಶಯ ಕೋರಿದ್ದಾರೆ.