ಬೆಂಗಳೂರು: ತನ್ನನ್ನೇ ಸರ್ವಸ್ವ ಎಂದು ನಂಬಿಕೊಂಡು ಬಂದಿದ್ದ ಪತ್ನಿಗೆ, ಪಾಪಿಯೊಬ್ಬ ಅಮಾನವೀಯವಾಗಿ ನಡೆದುಕೊಂಡಿದ್ದಾನೆ.

ಪಾಪಿಯ ಈ ಕೃತ್ಯದಿಂದಾಗಿ ಮಹಿಳೆ ಸಾವು – ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದಾರೆ. ಈ ಪಾಪಿಯನ್ನು ಸೂರಜ್ ಸಿಂಗ್ ಎಂದು ಗುರುತಿಸಲಾಗಿದೆ. ಪೋಷಕರು, ಮಗಳು ಗಂಡನ ಮನೆಯಲ್ಲಿ ಸಂತೋಷದಿಂದ ಇರಲಿ ಎಂಬ ಕಾರಣಕ್ಕೆ ಸಾಕಷ್ಟು ಖರ್ಚು ಮಾಡಿ ಮದುವೆ ಮಾಡಿದ್ದರು. ಸುಮಾರು ರೂ. 15 ಲಕ್ಷ ಖರ್ಚು ಮಾಡಿದ್ದರು. ಅಲ್ಲದೇ, ವರದಕ್ಷಿಣೆಯಾಗಿ ಕೈ ತುಂಬ ಹಣ ಹಾಗೂ ಚಿನ್ನ ನೀಡಿದ್ದರು. 

ಇಷ್ಟೆಲ್ಲ ಹಣ ನೀಡಿದರೂ ಪಾಪಿ ಮಾತ್ರ ಮತ್ತೆ ಹಣ ತರುವಂತೆ ಪತ್ನಿಗೆ ಆಗಾಗ ಕಿರುಕುಳ ನೀಡುತ್ತಿದ್ದ. ಹೀಗಾಗಿ ಪತ್ನಿ, ಪತಿಯ ಕಿರುಕುಳಕ್ಕೆ ಬೇಸತ್ತು ಒಂದೆರಡು ಬಾರಿ ತವರು ಮನೆಗೆ ಹೋಗಿ ಹಣ ತಂದಿದ್ದರು. ಆದರೂ ಪತಿಯ ಕಿರುಕುಳ ಮಾತ್ರ ನಿಂತಿರಲಿಲ್ಲ. ಅಷ್ಟೇ ಅಲ್ಲದೇ, ಆತನೊಂದಿಗೆ ಆತನ ತಾಯಿಯೂ ಸಾಥ್ ನೀಡುತ್ತಿದ್ದರು. 

ಇತ್ತೀಚೆಗಷ್ಟೇ ಯುವತಿಯ ಮೇಲೆ ತಾಯಿ ಹಾಗೂ ಮಗ ಸೇರಿಕೊಂಡು ಕಿರುಕುಳ ನೀಡಿದ್ದಾರೆ. ಈ ಸಂದರ್ಭದಲ್ಲಿ ಪಾಪಿ ಮಹಿಳೆಯ ಗುಪ್ತಾಂಗಕ್ಕೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ಪತಿಯ ಈ ಕಿರುಕುಳಕ್ಕೆ ಪತ್ನಿ ಸಾವು – ಬದುಕಿನ ನಡುವೆ ಹೋರಾಟ ನಡೆಸಿದ್ದಾರೆ. ಸದ್ಯ ಈ ಪಾಪಿ ತಲೆ ಮರೆಸಿಕೊಂಡಿದ್ದು, ಪೊಲೀಸರು ಆತನಿಗಾಗಿ ಶೋಧ ಕಾರ್ಯ ನಡೆಸಿದ್ದಾರೆ. ಈ ಕುರಿತು ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ನಿಡಗುಂದಿ ವಲಯ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟ
ಸದೃಢ ಮನಸ್ಸು ವಿಕಸನಕ್ಕೆ ಕ್ರೀಡೆಗಳು ಸಹಕಾರಿ- ಬಿ.ಟಿ.ಗೌಡರ

ಉತ್ತರಪ್ರಭ ಸುದ್ದಿ ನಿಡಗುಂದಿ: ಕ್ರೀಡೆಗಳಿಂದ ಸದೃಢ ದೇಹ,ಮನಸ್ಸು ಹೊಂದಬಹುದು. ಅವು ಶಾರೀರಿಕ ವಿಕಸನಕ್ಕೆ ಪ್ರೇರಕವಾಗಿವೆ ಎಂದು…

ಅರಣ್ಯ ಇಲಾಖೆಯ ಕಿರುಕುಳಕ್ಕೆ ಮನನೊಂದು ಶಿಂಗಟರಾಯನಕೆರೆ ತಾಂಡಾದ ಮಹಿಳೆ ಸಾವು

ಗದಗ: ಬಗರಹೂಕುಮ ಸಾಗುವಳಿದಾರರಿಗೆ ಅರಣ್ಯ ಇಲಾಖೆ ಒಂದಲ್ಲಾ ಒಂದು ರೀತಿಯಲ್ಲಿ ಕಿರುಕುಳ ಕೊಡುತ್ತಾ ಬಂದಿದೆ.ಅದರಲ್ಲೂ ಮುಂಡರಗಿ…

ಸಾರಿಗೆ ಸಂಸ್ಥೆ ಸಿಬ್ಬಂದಿಗೂ ವಕ್ಕರಿಸಿದ ಸೋಂಕು!

ಕಾರವಾರ: ಬಿಎಂಟಿಸಿ ನೌಕರರಲ್ಲಿ ಇತ್ತೀಚೆಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಸದ್ಯ ಸಾರಿಗೆ ಸಂಸ್ಥೆಯ ನೌಕರಸ್ಥರಿಗೂ ಇದರ…

ಆಲಮಟ್ಟಿ ಡ್ಯಾಂ : c ಕ್ಯುಸೆಕ್ ನೀರು ಹೊರಕ್ಕೆ ಗುಲಾಬಚಂದ ಜಾಧವ

ಆಲಮಟ್ಟಿ: ಜಲಾಶಯಕ್ಕೆ ಒಳಹರಿವು ಹೆಚ್ಚಳವಾದ ಹಿನ್ನೆಲೆಯಲ್ಲಿ ಹೊರ ಹರಿವು ಆರಂಭಗೊಂಡಿದೆ. ಮಹಾರಾಷ್ಟ್ರದ ಪಶ್ಚಿಮ ಘಟ್ಟ ,ರಾಜ್ಯದ…